ಬ್ರೇಕಿಂಗ್ ನ್ಯೂಸ್
26-04-23 12:27 pm Bangalore Correspondent ಕ್ರೈಂ
ಬೆಂಗಳೂರು, ಎ.26: ಲೈಂಗಿಕ ಕಿರುಕುಳ ನೀಡುತ್ತಿದ್ದ ರ್ಯಾಪಿಡೊ ಚಾಲಕನಿಂದ ತಪ್ಪಿಸಿಕೊಳ್ಳಲು ಯುವತಿಯೊಬ್ಬಳು ಚಲಿಸುತ್ತಿದ್ದ ಬೈಕ್ನಿಂದಲೇ ಜಿಗಿದಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ.
ಬೆಂಗಳೂರಿನ ಇಂದಿರಾನಗರದಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಪ್ರಕರಣ ಬೆಳಕಿಗೆ ಬಂದಿದೆ. ಆರ್ಕಿಟೆಕ್ಚರ್ ಆಗಿರುವ 30 ವರ್ಷದ ಯುವತಿಯೊಬ್ಬಳು ಕಳೆದ ಏ. 21ರಂದು ರಾತ್ರಿ 11.30ರ ಸುಮಾರಿನಲ್ಲಿ ಆನ್ಲೈನ್ ಆಯಪ್ ಮೂಲಕ ರ್ಯಾಪಿಡೊ ಬೈಕ್ ಅನ್ನು ಬುಕ್ ಮಾಡಿದ್ದಳು. ನಿಗದಿತ ಸ್ಥಳಕ್ಕೆ ಬಂದ ರ್ಯಾಪಿಡೊ ಬೈಕ್ ಚಾಲಕ ಯುವತಿಯನ್ನು ಹತ್ತಿಸಿಕೊಂಡಿದ್ದು, ಅಲ್ಲಿಂದ ಇಂದಿರಾನಗರಕ್ಕೆ ಬೈಕ್ ತೆರಳಬೇಕಿತ್ತು. ಆದರೆ, ಆತ ಅಲ್ಲಿಗೆ ಕರೆದೊಯ್ಯದೆ ಒಟಿಪಿ ಪರಿಶೀಲಿಸುವ ನೆಪದಲ್ಲಿ ಆಕೆಯ ಫೋನ್ ತೆಗೆದುಕೊಂಡು ದೊಡ್ಡಬಳ್ಳಾಪುರಕ್ಕೆ ಹೋಗಲು ಯತ್ನಿಸಿದ್ದಾನೆ. ಬೈಕ್ ನಿಗದಿತ ಸ್ಥಳಕ್ಕೆ ಹೋಗದೆ ಇರುವುದನ್ನು ಗಮನಿಸಿದ ಯುವತಿ ಕೂಡಲೇ ಚಾಲಕನನ್ನು ಪ್ರಶ್ನಿಸಿದ್ದಾಳೆ. ಆದರೆ ಇದ್ಯಾವುದಕ್ಕೂ ಉತ್ತರಿಸದ ಆತ ಬೈಕ್ ವೇಗವನ್ನು ಹೆಚ್ಚಿಸಲು ಮುಂದಾಗಿದ್ದಾನೆ. ಇದರಿಂದ ಗಾಬರಿಗೊಂಡ ಯುವತಿ ಕೂಡಲೇ ಆತನ ಬಳಿಯಿದ್ದ ತನ್ನ ಫೋನ್ನನ್ನು ಕಸಿದುಕೊಂಡು, ಗಾಡಿ ನಿಲ್ಲಿಸುವಂತೆ ಹೇಳಿದ್ದಾಳೆ.
ಚಾಲಕ ಗಾಡಿ ನಿಲ್ಲಿಸದೇ ಲೈಂಗಿಕ ಕಿರುಕುಳ ನೀಡಲು ಮುಂದಾಗಿದ್ದಾನೆ. ಆತನಿಂದ ರಕ್ಷಿಸಿಕೊಳ್ಳಲು ಬಿಎಂಎಸ್ ಕಾಲೇಜು ಸಮೀಪ ಚಲಿಸುತ್ತಿದ್ದಾಗಲೇ ರಾಪಿಡೊ ಬೈಕಿನಿಂದ ಜಿಗಿದಿದ್ದಾಳೆ.
ತನಗಾದ ಕರಾಳ ಅನುಭವವನ್ನು ಯುವತಿ ಪೊಲೀಸ್ ದೂರಿನಲ್ಲಿ ಹಂಚಿಕೊಂಡಿದ್ದು, ಈ ಸಂಬಂಧ ರ್ಯಾಪಿಡೋ ಸಂಸ್ಥೆಗೂ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸದ್ಯ ಆರೋಪಿಯನ್ನು ಬಂಧಿಸಿದ್ದು, ಯುವತಿಯ ಘನತೆಗೆ ಧಕ್ಕೆ ತರುವ ಉದ್ದೇಶದಿಂದ ಲೈಂಗಿಕ ಕಿರುಕುಳ, ಅಪಹರಣ, ಹಲ್ಲೆ ಅಥವಾ ಕ್ರಿಮಿನಲ್ ಕೇಸ್ ದಾಖಲು ಮಾಡಿ ತನಿಖೆ ನಡೆಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
A 30-year-old Bengaluru woman resorted to jumping off a moving Rapido motorcycle after the driver groped her, snatched her phone, and tried to take her to a different destination.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm