ಬ್ರೇಕಿಂಗ್ ನ್ಯೂಸ್
28-10-20 11:55 am Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 28: ತೊಕ್ಕೊಟ್ಟು ಓವರ್ ಬ್ರಿಡ್ಜ್ ಕೊನೆಯಲ್ಲಿ ಭೀಕರ ಅಪಘಾತ ನಡೆದು ನವ ದಂಪತಿ ಸಾವನ್ನಪ್ಪಿದ ಪ್ರಕರಣದಿಂದ ಎಚ್ಚೆತ್ತುಕೊಂಡ ಮಂಗಳೂರು ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್ ಇಂದು ಬೆಳಗ್ಗೆ ಅಪಘಾತ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ರಸ್ತೆ ಕಾಮಗಾರಿ ನಡೆಸಿದ ನವಯುಗ ಕನ್ ಸ್ಟ್ರಕ್ಷನ್ ಸಂಸ್ಥೆಯ ಅಧಿಕಾರಿಗಳು, ಟ್ರಾಫಿಕ್ ಪೊಲೀಸ್ ಅಧಿಕಾರಿಗಳ ಜೊತೆಗೆ ಘಟನಾ ಸ್ಥಳಕ್ಕೆ ಆಗಮಿಸಿದ ಕಮಿಷನರ್ ವಿಕಾಸ್ ಕುಮಾರ್ ಸ್ಥಳದ ಪರಿಶೀಲನೆ ನಡೆಸಿದರು. ಈ ವೇಳೆ ಮಾಧ್ಯಮದ ಜೊತೆ ಮಾತನಾಡಿದ ಅವರು, ಈ ಭಾಗದಲ್ಲಿ ಪದೇ ಪದೇ ಅಪಘಾತಗಳು ಆಗುತ್ತಿರುವುದಕ್ಕೇನು ಕಾರಣ ಎಂಬ ಬಗ್ಗೆ ಹೈವೇ ಅಥಾರಿಟಿ ಮತ್ತು ಟ್ರಾಫಿಕ್ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದೇನೆ. ಸೂಕ್ತ ಕ್ರಮಕ್ಕೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.






ಓವರ್ ಬ್ರಿಡ್ಜ್ ಕೊನೆಯಲ್ಲಿ ಪಾಸಿಂಗ್ ಕೊಟ್ಟಿರುವುದು ಅಪಾಯಕಾರಿಯಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳು ವೇಗವಾಗಿ ಸಾಗುವ ಭಾಗದಲ್ಲಿ ಹೀಗೆ ಪಾಸಿಂಗ್ ವ್ಯವಸ್ಥೆ ಕೊಡಬಾರದು. ಹೆದ್ದಾರಿಯಲ್ಲಿ ವಾಹನಗಳಿಗೆ ನೇರವಾಗಿ ಸಾಗಲು ವ್ಯವಸ್ಥೆ ಇರಬೇಕೆಂದು ತೀರ್ಮಾನಕ್ಕೆ ಬಂದಿದ್ದೇವೆ. ಜೊತೆಗೆ, ಈ ಭಾಗದಲ್ಲಿ ಪರ್ಯಾಯ ವ್ಯವಸ್ಥೆಯಾಗಿ ಉಳ್ಳಾಲಕ್ಕೆ ತೆರಳಲು ಬೇರೆ ಸರ್ವಿಸ್ ರೋಡ್ ಬಳಸಲು ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ, ಏನೆಲ್ಲಾ ಪರ್ಯಾಯ ಕ್ರಮ ಕೈಗೊಳ್ಳಬಹುದು ಅದನ್ನು ಮಾಡುತ್ತೇವೆ. ಅಪಘಾತ ವಲಯ ಆಗುವುದನ್ನು ತಪ್ಪಿಸುತ್ತೇವೆ ಎಂದು ಹೇಳಿದರು.
ಸೋಮವಾರ ಸಂಜೆ ಓವರ್ ಬ್ರಿಡ್ಜ್ ಕೊನೆಯಲ್ಲಿ ಬೈಕಿನಲ್ಲಿ ದಂಪತಿ ಉಳ್ಳಾಲಕ್ಕೆ ತಿರುವು ಪಡೆಯಲು ನಿಂತಿದ್ದಾಗ, ಹೆದ್ದಾರಿಯಲ್ಲಿ ಬಂದಿದ್ದ ಟ್ರಕ್ ಬೈಕ್ ಮೇಲಿನಿಂದಲೇ ಹರಿದು ಹೋಗಿ ಭೀಕರ ಅಪಘಾತ ಆಗಿತ್ತು. ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಆಕೆಯ ಪತಿ ಆಸ್ಪತ್ರೆಗೆ ಒಯ್ಯುವಷ್ಟರಲ್ಲಿ ಪ್ರಾಣ ಕಳಕೊಂಡಿದ್ದರು. ಅಪಘಾತ ಘಟನೆಗೆ ಇಲ್ಲಿನ ಅವೈಜ್ಞಾನಿಕ ರಸ್ತೆ ತಿರುವು ಕಾರಣ. ಓವರ್ ಬ್ರಿಡ್ಜ್ ಕಾಮಗಾರಿ ವೇಳೆ ಸೂಕ್ತ ಮಾನದಂಡ ಪಾಲಿಸದ ಕಾರಣ ಪದೇ ಪದೇ ಅಪಘಾತಗಳಾಗುತ್ತಿವೆ ಎಂದು ಸ್ಥಳೀಯರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.
City police commissioner Vikas Kumar on Wednesday, visited the spot at Thokkottu where newly married couple Rayan and Priya was killed in a tragic accident on October 27.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm