ಬ್ರೇಕಿಂಗ್ ನ್ಯೂಸ್
16-05-23 11:32 am HK News Desk ಕ್ರೈಂ
ಕೋಲಾರ, ಮೇ 16: ಹೊಸಕೋಟೆ ತಾಲ್ಲೂಕಿನ ಡಿ.ಶೆಟ್ಟಿಹಳ್ಳಿಯಲ್ಲಿ ಕಾಂಗ್ರೆಸ್ ವಿಜಯೋತ್ಸವ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬನನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ.
ಪೊಲೀಸ್ ಮೂಲಗಳ ಪ್ರಕಾರ, ಶರತ್ ಬಚ್ಚೇಗೌಡ ವಿಜಯಶಾಲಿ ಎಂದು ಘೋಷಿಸಿದ ಕೂಡಲೇ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಪ್ರಾರಂಭಿಸಿದರು. ಮಾಜಿ ಸಚಿವ ಎಂಟಿಬಿ ನಾಗರಾಜ್ ವಿರುದ್ಧ ಎರಡನೇ ಬಾರಿ ಸ್ಪರ್ಧಿಸಿದ್ದ ಶರತ್ ಅವರು ಗೆಲುವು ಸಾಧಿಸಿದ್ದರು. ಈ ಹಿನ್ನೆಲೆಯಲ್ಲಿ ಶರತ್ ಬಚ್ಚೇಗೌಡ ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡುತ್ತಿದ್ದರು.


ಇದೇ ಸಂದರ್ಭದಲ್ಲಿ ಎಂಟಿಬಿ ನಾಗರಾಜ್ ಅವರ ಪ್ರಚಾರ ಮಾಡಿದ್ದ ಬಿಜೆಪಿ ಕಾರ್ಯಕರ್ತ ಕೃಷ್ಣಪ್ಪ (55) ಅವರ ಮನೆ ಮುಂದೆಯೂ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿದ್ದರು. ಈ ವೇಳೆ ತೀವ್ರ ವಾಗ್ವಾದ ಶುರುವಾಗಿದೆ. ಈವೇಳೆ ಕೃಷ್ಣಪ್ಪ ಅವರ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಕೂಡಲೇ ಮಧ್ಯೆ ಪ್ರವೇಶಿಸಿದ ಕೃಷ್ಣಪ್ಪ ಅವರ ಪತ್ನಿ ಹಾಗೂ ಮಗ ಬಾಬು ಅವರು, ಕೃಷ್ಣಪ್ಪ ಅವರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕೃಷ್ಣಪ್ಪ ಅವರು ಸಾವನ್ನಪ್ಪಿದ್ದಾರೆ.
ಈ ನಡುವೆ ಆರೋಪಿಗಳನ್ನು ಬಂಧನಕ್ಕೊಳಪಡಿಸುವಂತೆ ಒತ್ತಾಯಿಸಿ ಬಿಜೆಪಿಯ ಹಿರಿಯ ಮುಖಂಡರು ನಂದಗುಡಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಘಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಎಚ್ಚೆತ್ತ ಪೊಲೀಸರು, ನಾಲ್ವರು ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Political violence broke out on Saturday night, leading to the murder of a BJP worker in D Settihalli, under Nandagudi police limits in Hoskote. The incident came to light on Sunday afternoon. Police registered a case against four Congress workers.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm