ಬ್ರೇಕಿಂಗ್ ನ್ಯೂಸ್
            
                        29-10-20 12:19 pm Headline Karnataka News Network ಕ್ರೈಂ
            ಗುರುಗಾಂವ್, ಅಕ್ಟೋಬರ್ 29 : ಆಸ್ಪತ್ರೆಗೆ ದಾಖಲಾಗಿದ್ದ 21 ವರ್ಷ ವಯಸ್ಸಿನ ಕ್ಷಯರೋಗಿ ಯುವತಿ ಮೇಲೆ, ಸಿಬ್ಬಂದಿಯೇ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ನಡೆದಿದೆ. ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಯುವತಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಆಸ್ಪತ್ರೆಯ ಹೊರಗುತ್ತಿಗೆ ನೌಕರ ಕೃತ್ಯ ಎಸಗಿದ್ದಾನೆ.
ರೋಗಿಗೆ ಪ್ರಜ್ಞೆ ಬಂದ ಬಳಿಕ ಘಟನೆ ಬಗ್ಗೆ ಕೈಬರಹದ ಪತ್ರದ ಮೂಲಕ ತಂದೆಗೆ ವಿವರಿಸಿದ್ದಾಳೆ. ಬಳಿಕ ಕುಟುಂಬದವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪ್ರಕರಣ ದಾಖಲಾಗಿದೆ. ಅಕ್ಟೋಬರ್ 21ರಂದು ಯುವತಿಯನ್ನು ಚಿಕಿತ್ಸೆಗೆ ದಾಖಲಿಸಲಾಗಿದ್ದು, ಅಕ್ಟೋಬರ್ 27ರಂದು ಯುವತಿಗೆ ಪ್ರಜ್ಞೆ ಬಂದಿತ್ತು. ಸಂತ್ರಸ್ತೆ ಯುವತಿ ಇನ್ನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಉಸಿರಾಟದ ತೊಂದರೆ ಹಿನ್ನೆಲೆಯಲ್ಲಿ ಮಹೇಂದ್ರಗಢದ ಈ ಯುವತಿಯನ್ನು ಗುರ್ ಗಾಂವ್ ನಗರದ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕ್ಷಯರೋಗದಿಂದ ಉಂಟಾಗಿದ್ದ ಕಾರಣ ಆಸ್ಪತ್ರೆಯ ಖಾಸಗಿ ಕೊಠಡಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಆರೋಪಿಯ ಹೆಸರು ವಿಕಾಸ್ ಎಂದು ಸಂತ್ರಸ್ತೆ ಹೇಳಿದ್ದು, ಆತ ವೈದ್ಯಕೀಯೇತರ ಹೊರಗುತ್ತಿಗೆ ಸಿಬ್ಬಂದಿಯಾಗಿದ್ದ. ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ನಡೆಸಿದ್ದು, ವಾರ್ಡ್ ಸಿಬ್ಬಂದಿಯನ್ನು ಪ್ರಶ್ನಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.
            
            
            A 21-year-old tuberculosis patient has alleged she was sexually assaulted while on ventilator support in the ICUof Fortis Hospital in Gurugram.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 05:06 pm
                        
            
                  
                Mangalore Correspondent    
            
                    
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm