ಬ್ರೇಕಿಂಗ್ ನ್ಯೂಸ್
29-05-23 09:34 pm HK News Desk ಕ್ರೈಂ
ನವದೆಹಲಿ, ಮೇ 29: 16 ವರ್ಷದ ತರುಣಿಯನ್ನು ಆಕೆಯ ಪ್ರಿಯಕರನೇ ಚಾಕುವಿನಿಂದ 34 ಬಾರಿ ಚುಚ್ಚಿ ಚುಚ್ಚಿ ಕಲ್ಲು ಎತ್ತಿ ಹಾಕಿ ಭೀಕರವಾಗಿ ಹತ್ಯೆಗೈದ ಘಟನೆ ರಾಜಧಾನಿ ದೆಹಲಿಯಲ್ಲಿ ನಡೆದಿದ್ದು, ದಾರಿಹೋಕರು ನಡೆದು ಹೋಗುತ್ತಿದ್ದಂತೆಯೇ ಕಟುಕ ಕೃತ್ಯ ನಡೆಸಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಬೆಚ್ಚಿಬೀಳಿಸುವಂತಿದೆ.
ದೆಹಲಿಯ ಶಹಬಾದ್ ಡೈರಿ ಎಂಬ ಪ್ರದೇಶದಲ್ಲಿ ಘಟನೆ ನಡೆದಿದ್ದು, ಜನರು ನಡೆದು ಹೋಗುವ ಕಾಲುದಾರಿಯಲ್ಲೇ ಯುವಕ ಚಾಕುವಿನಲ್ಲಿ ಚುಚ್ಚಿ ಚುಚ್ಚಿ ಕೃತ್ಯ ಎಸಗಿದ್ದಾನೆ. ಸಾಕ್ಷಿ ಎಂಬ 16 ವರ್ಷದ ಯುವತಿಯನ್ನು ಸಾಹಿಲ್ ಎಂಬ ಯುವಕ ಭೀಕರವಾಗಿ ಹತ್ಯೆ ಮಾಡಿದ್ದಾನೆ. ಇವರಿಬ್ಬರು ಪ್ರೀತಿಸುತ್ತಿದ್ದು, ಕೆಲವು ದಿನಗಳ ಹಿಂದೆ ಯಾವುದೋ ಕಾರಣಕ್ಕೆ ವೈಮನಸ್ಸು ಉಂಟಾಗಿತ್ತು. ನಿನ್ನೆ ಸಂಜೆ ಶಹಬಾದ್ ಡೈರಿ ಪ್ರದೇಶದಲ್ಲಿ ನಡೆದು ಹೋಗುತ್ತಿದ್ದ ಯುವತಿಯನ್ನು ಎದುರುಗೊಂಡ ಯುವಕ, ನೇರವಾಗಿ ಚಾಕುವಿನಲ್ಲಿ ತಿವಿದು ಹಾಕಿದ್ದಾನೆ. ಆನಂತರ, ಕಲ್ಲನ್ನು ತಲೆಗೆ ಎತ್ತಿ ಹಾಕಿ, ಕಾಲಿನಲ್ಲಿ ತುಳಿದು ಅತ್ಯಂತ ಪೈಶಾಚಿಕವಾಗಿ ಕೊಂದು ಹಾಕಿದ್ದಾನೆ. ಎಲ್ಲರೂ ನೋಡ ನೋಡುತ್ತಲೇ ಕೃತ್ಯ ನಡೆದಿದ್ದು, ಬಳಿಕ ಯುವಕ ಅಲ್ಲಿಂದ ಹಿಂತಿರುಗಿದ್ದಾನೆ.
ಪೊಲೀಸರ ಪ್ರಕಾರ, ಯುವತಿ ಆಕೆಯ ಗೆಳತಿಯ ಮಗುವಿನ ಹುಟ್ಟುಹಬ್ಬದ ಕಾರ್ಯಕ್ರಮಕ್ಕೆಂದು ಹೊರಟಿದ್ದಳು. ಯುವಕ ಹಿಂಬಾಲಿಸುತ್ತಾ ಹೋಗಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ಆರೋಪಿ ಸಾಹಿಲ್ ಅಲ್ಲಿಂದ ಪರಾರಿಯಾಗಿದ್ದು, ಪೊಲೀಸರು ಬಳಿಕ ಉತ್ತರ ಪ್ರದೇಶದ ಬುಲಂದ್ ಶಹರ್ ಎಂಬಲ್ಲಿಂದ ಪತ್ತೆ ಮಾಡಿದ್ದಾರೆ.
ಘಟನೆ ಬಗ್ಗೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಆಘಾತ ವ್ಯಕ್ತಪಡಿಸಿದ್ದು, ಜನರು ನೋಡ ನೋಡುತ್ತಿರುವಾಗಲೇ ಈ ರೀತಿ ಕೃತ್ಯ ನಡೆದಿರುವುದು ಆಘಾತಕಾರಿ. ಹಂತಕರಿಗೆ ಪೊಲೀಸರ ಭಯ ಇಲ್ಲದಂತಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಗವರ್ನರ್ ಜವಾಬ್ದಾರಿ. ಜನರ ಸುರಕ್ಷತೆಗಾಗಿ ಕೂಡಲೇ ಏನಾದರೂ ವ್ಯವಸ್ಥೆ ಮಾಡಿ ಎಂದು ಹೇಳಿದ್ದಾರೆ. ಇತ್ತೀಚೆಗೆ ಶ್ರದ್ಧಾ ವಾಲ್ಕರ್ ಎಂಬ ಯುವತಿಯನ್ನು 35 ತುಂಡುಗಳನ್ನಾಗಿ ಕತ್ತರಿಸಿ ಎಸೆದು ಬಂದಿದ್ದ ಕೃತ್ಯ ಬೆಳಕಿಗೆ ಬಂದಿತ್ತು.
A 16-year-old girl was murdered - allegedly by her boyfriend, a 20-year-old man - in Delhi on Sunday, police in the national capital said this morning. The accused - identified as Sahil - was arrested from Bulandshahr in Uttar Pradesh hours after the gruesome crime. Preliminary findings from the postmortem indicate the girl was stabbed 34 times and her skull ruptured after it was bashed in by a blunt object. The detailed report has yet to be released.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm