ಬ್ರೇಕಿಂಗ್ ನ್ಯೂಸ್
30-10-20 04:06 pm Headline Karnataka News Network ಕ್ರೈಂ
ಲಕ್ನೋ, ಅಕ್ಟೋಬರ್ 30: ಅಪ್ರಾಪ್ತ ವಯಸ್ಸಿನ ತರುಣ ಸಿಟ್ಟಿನ ಭರದಲ್ಲಿ ತಂದೆಯನ್ನೇ ಕೊಲೆಗೈದ ಘಟನೆ ಮಥುರಾದಲ್ಲಿ ನಡೆದಿದೆ.
ಮನೋಜ್ ಮಿಶ್ರಾ ಮಗನಿಂದಲೇ ಕೊಲೆಯಾದ ತಂದೆ. 12ನೇ ತರಗತಿ ಓದುತ್ತಿದ್ದ ಯುವಕ ತಂದೆ ಗದರಿದ ಎಂಬ ಕಾರಣಕ್ಕೆ ಅಸಮಾಧಾನಗೊಂಡು ಕಬ್ಬಿಣದ ರಾಡ್ನಿಂದ ತಲೆಗೆ ಹೊಡೆದಿದ್ದಾನೆ. ಅಲ್ಲದೇ ತಂದೆ ಸತ್ತ ವಿಷಯ ಖಚಿತ ಪಡಿಸಿಕೊಳ್ಳಲು ಬಟ್ಟೆಯಿಂದ ಕತ್ತು ಹಿಸುಕಿದ್ದಾನೆ.
ಮೇ 2 ರಂದು ತಂದೆಯನ್ನು ಕೊಲೆ ಮಾಡಿದ ಬಳಿಕ ಸಾಕ್ಷ್ಯ ನಾಶಪಡಿಸಲು ತಾಯಿಯ ನೆರವು ಪಡೆದಿದ್ದ. ಸ್ಕೂಟಿಯಲ್ಲಿ ಮನೆಯಿಂದ ಕೆಲವು ಕಿಮೀ ದೂರಕ್ಕೆ ಶವ ಹೊತ್ತೊಯ್ದು ಪೆಟ್ರೋಲ್ ಸುರಿದು ಸುಟ್ಟು ಹಾಕಿದ್ದಾನೆ. ಬಳಿಕ ಏನೂ ತಿಳಿಯದಂತೆ ಮನೆಗೆ ವಾಪಸ್ ಆಗಿದ್ದ.
ಮೇ 3ರಂದು ಪೊಲೀಸರಿಗೆ ಅರ್ಧ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿತ್ತು. ಇತ್ತ ಮೇ 27 ರಂದು ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ಮನೋಜ್ ನಾಪತ್ತೆ ಕೇಸು ದಾಖಲಿಸಿದ್ದರು. ಬಳಿಕ ಅನಾಥವಾಗಿ ಪತ್ತೆಯಾಗಿದ್ದ ಮೃತದೇಹವನ್ನು ಆತನೊಂದಿಗೆ ಕೆಲಸ ಮಾಡುತ್ತಿದ್ದ ಸಹೋದ್ಯೋಗಿಗಳು ಗುರುತಿಸಿದ್ದರು. ಕೂಡಲೇ ಪ್ರಕರಣದ ವಿಚಾರಣೆ ಆರಂಭಿಸಿದ ಪೊಲೀಸರು, ಕೊಲೆಗಾರ ಮೃತ ವ್ಯಕ್ತಿಯ ಮಗನೇ ಎಂದು ಸಾಬೀತು ಮಾಡಿದ್ದಾರೆ.
ವಿಚಾರಣೆ ಸಂದರ್ಭದಲ್ಲಿ ಪೊಲೀಸರ ಬಗ್ಗೆ ಸಂಶಯಪಟ್ಟ ಪುತ್ರ, ಯಾವ ಹಿನ್ನೆಲೆಯಲ್ಲಿ ತನ್ನನ್ನು ವಿಚಾರಣೆ ಮಾಡುತ್ತಿದ್ದಾಗಿ ಪ್ರಶ್ನೆ ಮಾಡಿದ್ದಾನೆ. ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ ಸತ್ಯಾಂಶವನ್ನು ಹೇಳಿದ್ದ ಎಂದು ಮಥುರಾ ಎಸ್ಪಿ ಉದಯ್ ಶಂಕರ್ ಸಿಂಗ್ ತಿಳಿಸಿದ್ದಾರೆ.
ಪ್ರಕರಣದಲ್ಲಿ ಸದ್ಯ ಪೊಲೀಸರು ಅಪ್ರಾಪ್ತ ಬಾಲಕ ಹಾಗೂ ಆತನ ತಾಯಿ 49 ವರ್ಷದ ಸಂಗೀತಾ ಮಿಶ್ರಾಳನ್ನು ಕೊಲೆ ಆರೋಪದ ಅಡಿ ಬಂಧಿಸಿದ್ದಾರೆ. ಕೊಲೆಯ ಬಳಿಕ ತಂದೆಯ ದೇಹವನ್ನು ನಾಶಪಡಿಸಲು ಬಾಲಕ ಗೂಗಲ್ ಹುಡುಕಾಡಿದ್ದ. 100 ಕ್ಕೂ ಹೆಚ್ಚು ಬಾರಿ ಕ್ರೈಂ ಪ್ಯಾಟ್ರೋಲ್ ಎಂಬ ಹಿಂದಿ ಧಾರಾವಾಹಿಯನ್ನು ನೋಡಿದ್ದ ಎಂಬುದು ತನಿಖೆ ವೇಳೆ ಬಯಲಾಗಿದೆ.
In a shocking incident, a 17-year-old boy in Mathura killed his father in a fit of rage and later watched TV serial 'Crime Patrol' to learn how to destroy any evidence of the murder. Also Read 17-Year Old Boy Kills His Father, Watches 'Crime Patrol' 100 Times to Learn How to Destroy Evidence
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
18-06-25 10:57 pm
Udupi Correspondent
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
NHRC, Dakshina Kannada, MLA Bharath Shetty: ಹ...
18-06-25 02:10 pm
Mangalore Accident, Jeppinamogaru, Aman Rao,...
18-06-25 10:24 am
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm