ಬ್ರೇಕಿಂಗ್ ನ್ಯೂಸ್
06-06-23 10:43 am Mangalore Correspondent ಕ್ರೈಂ
ಉಳ್ಳಾಲ, ಜೂ.6: ಕುತ್ತಾರು ಬಳಿಯ ಭಂಡಾರ ಬೈಲು ಎಂಬಲ್ಲಿ ಟಾಟಾ ಏಸ್ ವಾಹನದಲ್ಲಿ ಜಾನುವಾರುಗಳನ್ನ ಉಸಿರುಗಟ್ಟಿಸಿ ಅಮಾನವೀಯವಾಗಿ ವಧಾಗೃಹಕ್ಕೆ ಸಾಗಿಸುತ್ತಿದ್ದ ವೇಳೆ ಬಜರಂಗದಳದ ಕಾರ್ಯಕರ್ತರು ಜಾನುವಾರುಗಳನ್ನ ರಕ್ಷಿಸಿದ್ದು ಈ ವೇಳೆ ಪರಾರಿಯಾಗಿದ್ದ ನಾಲ್ವರು ಆರೋಪಿಗಳನ್ನ ಉಳ್ಳಾಲ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಉಳ್ಳಾಲದ ಆಝಾದ್ ನಗರ ನಿವಾಸಿ ಅಹಮ್ಮದ್ ಇರ್ಷಾದ್, ಅಳೇಕಳ ನಿವಾಸಿ ಜಾಫರ್ ಸಾಧಿಕ್, ಬಸ್ತಿಪಡ್ಪು ನಿವಾಸಿ ಫಾಯಝ್, ಮಂಜೇಶ್ವರ ಬಂಗ್ರ ನಿವಾಸಿ ಖಾಲಿದ್ ಬಿ.ಎಮ್ ಬಂಧಿತ ಆರೋಪಿಗಳು.


ಆರೋಪಿಗಳು ಆದಿತ್ಯವಾರ ಅಂಬ್ಲಮೊಗರು ಎಂಬಲ್ಲಿನ ವೃದ್ಧೆಯೊಬ್ಬರಿಂದ 5 ಜಾನುವಾರುಗಳನ್ನ ಖರೀದಿಸಿ ಕೇರಳ ನೋಂದಣಿಯ ಟಾಟಾ ಏಸ್ ವಾಹನದಲ್ಲಿ ಅಮಾನವೀಯವಾಗಿ ತುಂಬಿಸಿ ಭಂಡಾರ ಬೈಲು ಮಾರ್ಗವಾಗಿ ಉಳ್ಳಾಲ ಅಲೇಕಳದ ವಧಾಗೃಹಕ್ಕೆ ಸಾಗಿಸುತ್ತಿದ್ದ ವೇಳೆ ಕಡಿದಾದ ರಸ್ತೆ ಏರನ್ನ ಏರಲಾಗದೆ ವಾಹನ ನಿಂತಿತ್ತು. ಈ ವೇಳೆ ಸ್ಥಳದಲ್ಲಿದ್ದ ಬಜರಂಗದಳದ ಹುಡುಗರು ವಾಹನವನ್ನ ತಳ್ಳಲು ಮುಂದಾದಾಗ ಗೋವುಗಳನ್ನ ಅಮಾನವೀಯವಾಗಿ ತುಂಬಿಸಿದ್ದು ಬೆಳಕಿಗೆ ಬಂದು ಚಾಲಕನಲ್ಲಿ ವಿಚಾರಿಸಿದಾಗ ವಾಹನದಲ್ಲಿದ್ದ ಇಬ್ಬರು ಪರಾರಿಯಾಗಿದ್ದರು. ಎಸ್ಕಾರ್ಟ್ ನೀಡುತ್ತಿದ್ದ ಇಬ್ಬರು ಆರೋಪಿಗಳು ಬೈಕನ್ನ ಬಿಟ್ಟು ಓಡಿ ಹೋಗಿದ್ದರು.


ಈ ವೇಳೆ, ವಾಹನದಲ್ಲಿದ್ದ ಒಂದು ಹಸು ಹೊರಗೆ ಓಡಿ ತಪ್ಪಿಸಿತ್ತು. ಬಾಕಿ ಉಳಿದಿದ್ದ ಒಂದು ಹಸು, ಎರಡು ಹೋರಿ, ಮತ್ತೊಂದು ಕರುವನ್ನ ರಕ್ಷಿಸಿದ ಬಜರಂಗದಳದ ಕಾರ್ಯಕರ್ತರು ಉಳ್ಳಾಲ ಪೊಲೀಸ್ ಠಾಣೆಗೆ ಒಪ್ಪಿಸಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದರು. ಆರೋಪಿಗಳ ವಿರುದ್ಧ ಗೋಹತ್ಯೆ ನಿಷೇಧ ಕಾಯ್ದೆ, ಪ್ರಾಣಿ ಹಿಂಸೆ ಕಾಯ್ದೆ, ಐಪಿಸಿ 379 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
Illegal cow transport at Kuthar, four arrested by Ullal Police in Mangalore. The arrested were caught by the bajarang dal members when the van was stuck finding difficult to climb up the road.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm