ಬ್ರೇಕಿಂಗ್ ನ್ಯೂಸ್
06-06-23 10:43 am Mangalore Correspondent ಕ್ರೈಂ
ಉಳ್ಳಾಲ, ಜೂ.6: ಕುತ್ತಾರು ಬಳಿಯ ಭಂಡಾರ ಬೈಲು ಎಂಬಲ್ಲಿ ಟಾಟಾ ಏಸ್ ವಾಹನದಲ್ಲಿ ಜಾನುವಾರುಗಳನ್ನ ಉಸಿರುಗಟ್ಟಿಸಿ ಅಮಾನವೀಯವಾಗಿ ವಧಾಗೃಹಕ್ಕೆ ಸಾಗಿಸುತ್ತಿದ್ದ ವೇಳೆ ಬಜರಂಗದಳದ ಕಾರ್ಯಕರ್ತರು ಜಾನುವಾರುಗಳನ್ನ ರಕ್ಷಿಸಿದ್ದು ಈ ವೇಳೆ ಪರಾರಿಯಾಗಿದ್ದ ನಾಲ್ವರು ಆರೋಪಿಗಳನ್ನ ಉಳ್ಳಾಲ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಉಳ್ಳಾಲದ ಆಝಾದ್ ನಗರ ನಿವಾಸಿ ಅಹಮ್ಮದ್ ಇರ್ಷಾದ್, ಅಳೇಕಳ ನಿವಾಸಿ ಜಾಫರ್ ಸಾಧಿಕ್, ಬಸ್ತಿಪಡ್ಪು ನಿವಾಸಿ ಫಾಯಝ್, ಮಂಜೇಶ್ವರ ಬಂಗ್ರ ನಿವಾಸಿ ಖಾಲಿದ್ ಬಿ.ಎಮ್ ಬಂಧಿತ ಆರೋಪಿಗಳು.


ಆರೋಪಿಗಳು ಆದಿತ್ಯವಾರ ಅಂಬ್ಲಮೊಗರು ಎಂಬಲ್ಲಿನ ವೃದ್ಧೆಯೊಬ್ಬರಿಂದ 5 ಜಾನುವಾರುಗಳನ್ನ ಖರೀದಿಸಿ ಕೇರಳ ನೋಂದಣಿಯ ಟಾಟಾ ಏಸ್ ವಾಹನದಲ್ಲಿ ಅಮಾನವೀಯವಾಗಿ ತುಂಬಿಸಿ ಭಂಡಾರ ಬೈಲು ಮಾರ್ಗವಾಗಿ ಉಳ್ಳಾಲ ಅಲೇಕಳದ ವಧಾಗೃಹಕ್ಕೆ ಸಾಗಿಸುತ್ತಿದ್ದ ವೇಳೆ ಕಡಿದಾದ ರಸ್ತೆ ಏರನ್ನ ಏರಲಾಗದೆ ವಾಹನ ನಿಂತಿತ್ತು. ಈ ವೇಳೆ ಸ್ಥಳದಲ್ಲಿದ್ದ ಬಜರಂಗದಳದ ಹುಡುಗರು ವಾಹನವನ್ನ ತಳ್ಳಲು ಮುಂದಾದಾಗ ಗೋವುಗಳನ್ನ ಅಮಾನವೀಯವಾಗಿ ತುಂಬಿಸಿದ್ದು ಬೆಳಕಿಗೆ ಬಂದು ಚಾಲಕನಲ್ಲಿ ವಿಚಾರಿಸಿದಾಗ ವಾಹನದಲ್ಲಿದ್ದ ಇಬ್ಬರು ಪರಾರಿಯಾಗಿದ್ದರು. ಎಸ್ಕಾರ್ಟ್ ನೀಡುತ್ತಿದ್ದ ಇಬ್ಬರು ಆರೋಪಿಗಳು ಬೈಕನ್ನ ಬಿಟ್ಟು ಓಡಿ ಹೋಗಿದ್ದರು.


ಈ ವೇಳೆ, ವಾಹನದಲ್ಲಿದ್ದ ಒಂದು ಹಸು ಹೊರಗೆ ಓಡಿ ತಪ್ಪಿಸಿತ್ತು. ಬಾಕಿ ಉಳಿದಿದ್ದ ಒಂದು ಹಸು, ಎರಡು ಹೋರಿ, ಮತ್ತೊಂದು ಕರುವನ್ನ ರಕ್ಷಿಸಿದ ಬಜರಂಗದಳದ ಕಾರ್ಯಕರ್ತರು ಉಳ್ಳಾಲ ಪೊಲೀಸ್ ಠಾಣೆಗೆ ಒಪ್ಪಿಸಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದರು. ಆರೋಪಿಗಳ ವಿರುದ್ಧ ಗೋಹತ್ಯೆ ನಿಷೇಧ ಕಾಯ್ದೆ, ಪ್ರಾಣಿ ಹಿಂಸೆ ಕಾಯ್ದೆ, ಐಪಿಸಿ 379 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
Illegal cow transport at Kuthar, four arrested by Ullal Police in Mangalore. The arrested were caught by the bajarang dal members when the van was stuck finding difficult to climb up the road.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm