ಬ್ರೇಕಿಂಗ್ ನ್ಯೂಸ್
08-06-23 04:28 pm HK News Desk ಕ್ರೈಂ
ಮುಂಬಯಿ, ಜೂ, 8: ಕಳೆದ ವರ್ಷ ದೆಹಲಿಯಲ್ಲಿ ಶ್ರದ್ಧಾ ವಾಕರ್ ಕೃತ್ಯ ನಡೆದ ಬಳಿಕ ದೇಶದಲ್ಲಿ ಅಂಥದ್ದೇ ಭೀಕರ ಘಟನೆಗಳು ಹೆಚ್ಚಾಗಿ ನಡೆಯುತ್ತಿದೆ. ಈಗ ಮತ್ತೊಂದು ಭೀಭತ್ಸ ಘಟನೆ ಮುಂಬಯಿಯಲ್ಲಿ ನಡೆದಿದೆ.
ವ್ಯಕ್ತಿಯೊಬ್ಬ ತನ್ನ ಲಿವ್-ಇನ್ ಸಂಗಾತಿಯನ್ನು ಹತ್ಯೆಗೈದು, ದೇಹದ ಭಾಗವನ್ನು ತುಂಡು ಮಾಡಿ ಅದನ್ನು ಕುಕ್ಕರ್ ನಲ್ಲಿ ಬೇಯಿಸಿರುವ ಘಟನೆ ಮುಂಬಯಿಯಲ್ಲಿ ನಡೆದಿದೆ.
ಮನೋಜ್ ಸಹಾನಿ (56) ಕಳೆದ ಮೂರು ವರ್ಷಗಳಿಂದ ಗೀತಾ ನಗರ 7ನೇ ಹಂತದ ಗೀತಾ ಆಕಾಶ್ ದೀಪ್ ಕಟ್ಟಡದಲ್ಲಿ 704 ಫ್ಲಾಟ್ನಲ್ಲಿ ಸರಸ್ವತಿ ವೈದ್ಯ (32) ಎಂಬುವವರೊಂದಿಗೆ ವಾಸವಾಗಿದ್ದರು. ಮನೋಜ್ ಬೋರಿವಾಲಿಯಲ್ಲಿ ಸಣ್ಣ ಅಂಗಡಿ ನಡೆಸುತ್ತಿದ್ದಾರೆ.
)
ಬುಧವಾರ ಸಂಜೆ (ಜೂ.7 ರಂದು) ಫ್ಲಾಟ್ ನ ಇತರೆ ಸದಸ್ಯರು ಮನೋಜ್ ಅವರ ನಿವಾಸದಿಂದ ಕೆಟ್ಟ ವಾಸನೆ ಬರುತ್ತಿರುವುದರಿಂದ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದು ನೋಡಿದಾಗ 3-4 ದಿನಗಳ ಹಿಂದೆ ಕೊಲೆಯಾಗಿರುವ ಮಹಿಳೆಯೊಬ್ಬರ ದೇಹದ ಭಾಗಗಳು ಕುಕ್ಕರ್ ನಲ್ಲಿ ಬೇಯುತ್ತಿರುವುದನ್ನು ಪೊಲೀಸರು ನೋಡಿದ್ದಾರೆ.
ಮನೋಜ್ ಸಹಾನಿ ಮತ್ತು ಸರಸ್ವತಿ ವೈದ್ಯ ಅವರು ಲಿವ್-ಇನ್ ರಿಲೇಶನ್ಶಿಪ್ನಲ್ಲಿದ್ದರು. ಕೆಲವು ವಿಷಯಕ್ಕೆ ಇಬ್ಬರ ನಡುವೆ ಜಗಳವಾಗಿದೆ. ಇದೇ ವಿಚಾರಕ್ಕೆ ಈ ಕೃತ್ಯ ನಡೆದಿರಬಹುದು. ಆಕೆಯ ದೇಹವನ್ನು ಮರ ಕಟ್ ಮಾಡುವ ಮಿಷನ್ ನಿಂದ ತುಂಡು ಮಾಡಲಾಗಿದೆ. ನಾವು ಮನೆಗೆ ತಲುಪಿ ಬಾಗಿಲು ತೆರೆದಾಗ, ಇದು ಕೊಲೆಯ ಪ್ರಕರಣ ಎಂದು ನಮಗೆ ಗೊತ್ತಾಗಿದೆ. ಶಂಕಿತ ಆರೋಪಿ ಸಾಕ್ಷ್ಯವನ್ನು ಮರೆಮಾಡಲು ಪ್ರಯತ್ನಿಸುವ ಸಲುವಾಗಿ ಈ ರೀತಿ ದೇಹದ ಭಾಗವನ್ನು ಕುಕ್ಕರ್ ನಲ್ಲಿ ಬೇಯಿಸಿರಬಹುದು” ಎಂದು ಪೊಲೀಸ್ ಉಪ ಆಯುಕ್ತ ಜಯಂತ್ ಬಜ್ಬಲೆ ಅವರು ಹೇಳಿದ್ದಾರೆ.
ಈ ಸಂಬಂಧ ಕೊಲೆಯ ಹಿಂದಿನ ಉದ್ದೇಶವನ್ನು ತಿಳಿಯಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇಬ್ಬರು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಮನೆಯೊಳಗೆ ಕತ್ತರಿಸಿದ ದೇಹದ ತುಣುಕುಗಳ ಪತ್ತೆಯಾಗಿವೆ. ಬಹುಶಃ ಕೊಲೆ ಮಾಡಿ ಮೂರ್ನಾಲ್ಕು ದಿನಗಳಾಗಿರಬಹು ಎಂದು ಅಂದಾಜಿಸಲಾಗಿದೆ.
A 56-year-old man has been arrested for killing his live-in partner and chopping her body into 20 pieces at his rented apartment near Mumbai's Mira Road. Police said that the accused boiled pieces of her body in a pressure cooker and later filled them into plastic bags to dispose of them. The accused, identified as Manoj Sane, had been staying with Saraswati Vaidya, 36, in flat 704 at Geeta Akash Deep building in Mira Road in Geeta Nagar Phase 7 over the past three years. Police were alerted by local residents who complained of a foul smell emanating from the flat. Manoj runs a small shop in Boriwali.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm