ಬ್ರೇಕಿಂಗ್ ನ್ಯೂಸ್
09-06-23 10:52 pm Mangalore Correspondent ಕ್ರೈಂ
ಮಂಗಳೂರು, ಜೂನ್ 9: ಗಾಂಜಾ ವ್ಯಾಪಾರ- ವಹಿವಾಟಿನಲ್ಲಿ ತೊಡಗಿಕೊಂಡಿದ್ದ ಬಂಟ್ವಾಳ ಮೂಲದ ಯುವಕನನ್ನು ಚಿಕ್ಕಮಗಳೂರು ಜಿಲ್ಲೆಯ ಬಣಕಲ್ ಗುಡ್ಡದಲ್ಲಿ ಪೆಟ್ರೋಲ್ ಹಾಕಿ ಸುಟ್ಟು ಹಾಕಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಯುವಕನನ್ನು ಬಂಟ್ವಾಳ ತಾಲೂಕಿನ ಇರಾ ಗ್ರಾಮದ ಅಬ್ಬಾಸ್ ಎಂಬವರ ಪುತ್ರ ಫವಾಸ್ ಎಂದು ಗುರುತಿಸಲಾಗಿದೆ. ಮೂಡಿಗೆರೆ ಬಳಿಯ ಬಣಕಲ್ ಗುಡ್ಡದಲ್ಲಿ ಅರೆಸುಟ್ಟ ಶವ ಪತ್ತೆಯಾಗಿದ್ದು, ಫವಾಸ್ ನದ್ದೇ ಶವ ಎಂದು ಪತ್ತೆ ಮಾಡಲಾಗಿದೆ. ಫವಾಸ್ ಈ ಹಿಂದೆ ಮದುವೆಯಾಗಿದ್ದು, ಆನಂತರ ಪತ್ನಿಯನ್ನು ಬಿಟ್ಟು ಹೋಗಿದ್ದ. ಗಾಂಜಾ ಪೆಡ್ಲಿಂಗ್, ಅದೇ ವಹಿವಾಟಿನಲ್ಲಿ ವ್ಯಸ್ತನಾಗಿದ್ದ ಫವಾಸ್ ಮನಗೆ ಬರುವುದನ್ನೇ ಕಡಿಮೆ ಮಾಡಿದ್ದ.

ಫವಾಸ್ ಡ್ರಗ್ಸ್ ಸೇವನೆ ಮಾಡುತ್ತಿದ್ದ ಕಾರಣಕ್ಕೆ ಮನೆಯ ಗೌರವ ಹಾಳಾಗುತ್ತೆ ಎಂದು ಮನೆಯವರು ಕೂಡ ದೂರ ಮಾಡಿದ್ದರು. ಡ್ರಗ್ಸ್ ಮತ್ತು ಗಾಂಜಾ ಗ್ಯಾಂಗಿನಲ್ಲಿ ಗುರುತಿಸಿಕೊಂಡಿದ್ದಕ್ಕೆ ಫವಾಸ್ ಬಗ್ಗೆ ಕುಟುಂಬಸ್ಥರು ಅಸಮಾಧಾನದಲ್ಲಿದ್ದರು. ಅಕ್ರಮವಾಗಿ ಗಾಂಜಾ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದರಿಂದ ಮಂಗಳೂರು, ಬಂಟ್ವಾಳದಲ್ಲಿ ಪೊಲೀಸರಿಗೆ ನೋಟೆಡ್ ಆಗಿಯೂ ಇದ್ದ. ಹತ್ತು ದಿನಗಳ ಹಿಂದೆ ಫವಾಸ್ ನನ್ನು ತಂಡವೊಂದು ಅಪಹರಿಸಿದೆ ಎನ್ನಲಾಗುತ್ತಿದ್ದು ಆನಂತರ ನಾಪತ್ತೆಯಾಗಿದ್ದ. ಗಾಂಜಾ ವಹಿವಾಟಿನಲ್ಲಿ ಹಣಕಾಸು ವಿಷಯದಲ್ಲಿ ವೈಷಮ್ಯದಿಂದ ತಂಡ ಅಪಹರಿಸಿತ್ತು ಎನ್ನಲಾಗಿದೆ.
ಈ ನಡುವೆ, ಮೂಡಿಗೆರೆ ಬಳಿಯ ಬಣಕಲ್ ಗುಡ್ಡದಲ್ಲಿ ಪೆಟ್ರೋಲ್ ಹಾಕಿ ಸುಟ್ಟ ಶವ ಪತ್ತೆಯಾಗಿದ್ದು ಫವಾಸ್ ನದ್ದೇ ಎಂದು ಪೊಲೀಸರು ಗುರುತು ಹಚ್ಚಿದ್ದಾರೆ. ಫವಾಸ್ ಕೊಲೆ ಪ್ರಕರಣದಲ್ಲಿ ವಗ್ಗ ಮತ್ತು ಕಾವಳಕಟ್ಟೆಯ ಯುವಕರು ಇದ್ದಾರೆ ಎಂಬುದನ್ನು ಪೊಲೀಸರು ಶಂಕಿಸಿದ್ದಾರೆ. ಫವಾಸ್ ಜೊತೆಗೆ ಗಾಂಜಾ ವಹಿವಾಟಿನಲ್ಲಿ ಗುರುತಿಸಿದ್ದ ಗೆಳೆಯರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ.
Mangalore Bantwal Youth involved in Ganja gang murdered, body found at Bankal, gutted with fire. The deceased has been identified as Abbas from Ira, Bantwal.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm