ಬ್ರೇಕಿಂಗ್ ನ್ಯೂಸ್
09-06-23 10:52 pm Mangalore Correspondent ಕ್ರೈಂ
ಮಂಗಳೂರು, ಜೂನ್ 9: ಗಾಂಜಾ ವ್ಯಾಪಾರ- ವಹಿವಾಟಿನಲ್ಲಿ ತೊಡಗಿಕೊಂಡಿದ್ದ ಬಂಟ್ವಾಳ ಮೂಲದ ಯುವಕನನ್ನು ಚಿಕ್ಕಮಗಳೂರು ಜಿಲ್ಲೆಯ ಬಣಕಲ್ ಗುಡ್ಡದಲ್ಲಿ ಪೆಟ್ರೋಲ್ ಹಾಕಿ ಸುಟ್ಟು ಹಾಕಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಯುವಕನನ್ನು ಬಂಟ್ವಾಳ ತಾಲೂಕಿನ ಇರಾ ಗ್ರಾಮದ ಅಬ್ಬಾಸ್ ಎಂಬವರ ಪುತ್ರ ಫವಾಸ್ ಎಂದು ಗುರುತಿಸಲಾಗಿದೆ. ಮೂಡಿಗೆರೆ ಬಳಿಯ ಬಣಕಲ್ ಗುಡ್ಡದಲ್ಲಿ ಅರೆಸುಟ್ಟ ಶವ ಪತ್ತೆಯಾಗಿದ್ದು, ಫವಾಸ್ ನದ್ದೇ ಶವ ಎಂದು ಪತ್ತೆ ಮಾಡಲಾಗಿದೆ. ಫವಾಸ್ ಈ ಹಿಂದೆ ಮದುವೆಯಾಗಿದ್ದು, ಆನಂತರ ಪತ್ನಿಯನ್ನು ಬಿಟ್ಟು ಹೋಗಿದ್ದ. ಗಾಂಜಾ ಪೆಡ್ಲಿಂಗ್, ಅದೇ ವಹಿವಾಟಿನಲ್ಲಿ ವ್ಯಸ್ತನಾಗಿದ್ದ ಫವಾಸ್ ಮನಗೆ ಬರುವುದನ್ನೇ ಕಡಿಮೆ ಮಾಡಿದ್ದ.

ಫವಾಸ್ ಡ್ರಗ್ಸ್ ಸೇವನೆ ಮಾಡುತ್ತಿದ್ದ ಕಾರಣಕ್ಕೆ ಮನೆಯ ಗೌರವ ಹಾಳಾಗುತ್ತೆ ಎಂದು ಮನೆಯವರು ಕೂಡ ದೂರ ಮಾಡಿದ್ದರು. ಡ್ರಗ್ಸ್ ಮತ್ತು ಗಾಂಜಾ ಗ್ಯಾಂಗಿನಲ್ಲಿ ಗುರುತಿಸಿಕೊಂಡಿದ್ದಕ್ಕೆ ಫವಾಸ್ ಬಗ್ಗೆ ಕುಟುಂಬಸ್ಥರು ಅಸಮಾಧಾನದಲ್ಲಿದ್ದರು. ಅಕ್ರಮವಾಗಿ ಗಾಂಜಾ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದರಿಂದ ಮಂಗಳೂರು, ಬಂಟ್ವಾಳದಲ್ಲಿ ಪೊಲೀಸರಿಗೆ ನೋಟೆಡ್ ಆಗಿಯೂ ಇದ್ದ. ಹತ್ತು ದಿನಗಳ ಹಿಂದೆ ಫವಾಸ್ ನನ್ನು ತಂಡವೊಂದು ಅಪಹರಿಸಿದೆ ಎನ್ನಲಾಗುತ್ತಿದ್ದು ಆನಂತರ ನಾಪತ್ತೆಯಾಗಿದ್ದ. ಗಾಂಜಾ ವಹಿವಾಟಿನಲ್ಲಿ ಹಣಕಾಸು ವಿಷಯದಲ್ಲಿ ವೈಷಮ್ಯದಿಂದ ತಂಡ ಅಪಹರಿಸಿತ್ತು ಎನ್ನಲಾಗಿದೆ.
ಈ ನಡುವೆ, ಮೂಡಿಗೆರೆ ಬಳಿಯ ಬಣಕಲ್ ಗುಡ್ಡದಲ್ಲಿ ಪೆಟ್ರೋಲ್ ಹಾಕಿ ಸುಟ್ಟ ಶವ ಪತ್ತೆಯಾಗಿದ್ದು ಫವಾಸ್ ನದ್ದೇ ಎಂದು ಪೊಲೀಸರು ಗುರುತು ಹಚ್ಚಿದ್ದಾರೆ. ಫವಾಸ್ ಕೊಲೆ ಪ್ರಕರಣದಲ್ಲಿ ವಗ್ಗ ಮತ್ತು ಕಾವಳಕಟ್ಟೆಯ ಯುವಕರು ಇದ್ದಾರೆ ಎಂಬುದನ್ನು ಪೊಲೀಸರು ಶಂಕಿಸಿದ್ದಾರೆ. ಫವಾಸ್ ಜೊತೆಗೆ ಗಾಂಜಾ ವಹಿವಾಟಿನಲ್ಲಿ ಗುರುತಿಸಿದ್ದ ಗೆಳೆಯರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ.
Mangalore Bantwal Youth involved in Ganja gang murdered, body found at Bankal, gutted with fire. The deceased has been identified as Abbas from Ira, Bantwal.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm