ಬ್ರೇಕಿಂಗ್ ನ್ಯೂಸ್
16-06-23 06:40 pm HK News Desk ಕ್ರೈಂ
ತುಮಕೂರು, ಜೂನ್ 16: ಅನ್ಯಜಾತಿಯ ಯುವಕನನ್ನು ಪ್ರೀತಿಸಿ ಓಡಿಹೋಗಿದ್ದ ಕಾರಣಕ್ಕೆ ಅಪ್ರಾಪ್ತ ಬಾಲಕಿಯನ್ನು ಹೆತ್ತವರೇ ಕೊಲೆಗೈದು ಸುಟ್ಟು ಹಾಕಿದ ಪ್ರಕರಣ ತುಮಕೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಮರ್ಯಾದೆಗೆ ಅಂಜಿ ಮಗಳನ್ನೇ ಕೊಲೆಗೈದಿದ್ದಲ್ಲದೆ, ಆತ್ಮಹತ್ಯೆ ಎಂದು ಬಿಂಬಿಸಿದ್ದ ಕೃತ್ಯ ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಗುಬ್ಬಿ ತಾಲೂಕಿನ ಚೇಳೂರು ಹೋಬಳಿಯ ಚಿಕ್ಕಹೆಡಿಗೆಹಳ್ಳಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಕೃತ್ಯ ಎಸಗಿರುವ ಮೂವರನ್ನು ಬಂಧಿಸಿದ್ದಾರೆ. ನೇತ್ರಾವತಿ (17) ಕೊಲೆಯಾದ ಅಪ್ರಾಪ್ತ ಬಾಲಕಿಯಾಗಿದ್ದು, ಆಕೆಯ ತಂದೆ ಪರಶುರಾಮ, ಸಹೋದರ ಶಿವರಾಜು, ಚಿಕ್ಕಪ್ಪ ತುಕಾರಾಂ ಅವರನ್ನು ಬಂಧಿಸಿದ್ದಾರೆ.
ನೇತ್ರಾವತಿ ಶಿರಾ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದಳು. ಅದೇ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಕಾಂ ಓದುತ್ತಿದ್ದ ಯುವಕ ಕುಮಾರ್ (21) ಎಂಬಾತನನ್ನ ಪ್ರೀತಿಸಿದ್ದು ಜೂನ್ 7 ರಂದು ಮನೆ ಬಿಟ್ಟು ಓಡಿಹೋಗಿದ್ದರು. ಮಾರನೇ ದಿನ ಇಬ್ಬರನ್ನೂ ಕರೆಸಿ ಎರಡು ಕುಟುಂಬಗಳ ಸಮ್ಮುಖದಲ್ಲಿ ರಾಜಿ ಪಂಚಾಯ್ತಿ ಮಾಡಿಸಲಾಗಿತ್ತು. ಬಾಲಕಿಯ ಸಹವಾಸಕ್ಕೆ ಬಾರದಂತೆ ಯುವಕನಿಗೆ ಎಚ್ಚರಿಕೆಯನ್ನೂ ನೀಡಲಾಗಿತ್ತು.
ಆನಂತರ, ಬಾಲಕಿ ನೇತ್ರಾವತಿಯನ್ನು ಹೆತ್ತವರು ತಮ್ಮ ಮನೆಗೆ ಕರೆತಂದಿದ್ದರು. ಆದರೆ, ಅದೇ ದಿನ ರಾತ್ರಿ ಬಾಲಕಿಯನ್ನು ತಂದೆ, ಸಹೋದರ ಹಾಗೂ ಚಿಕ್ಕಪ್ಪ ಸೇರಿ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ಮಗಳು ವಿಷ ಕುಡಿದು ಆತ್ಮಹತ್ಯೆ ಮಾಡಿದ್ದಾಳೆಂದು ಬಿಂಬಿಸಿದ್ದ ಕುಟುಂಬಸ್ಥರು, ಕೊಲೆಯ ಕುರುಹು ಸಿಗದಂತೆ ಮೃತದೇಹವನ್ನ ಸುಟ್ಟುಹಾಕಿದ್ದರು. ಆದರೆ ಇದು ಆತ್ಮಹತ್ಯೆ ಅಲ್ಲ ಕೊಲೆ ಎಂದು ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸಿದ್ದರು.
ಪ್ರಕರಣ ದಾಖಲಿಸಿಕೊಂಡಿದ್ದ ಶಿರಾ ಡಿವೈಎಸ್ ಪಿ ನವೀನ್ ಕುಮಾರ್ ನೇತೃತ್ವದಲ್ಲಿ ಪೊಲೀಸರು ತನಿಖೆ ನಡೆಸಿದಾಗ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಮೂವರನ್ನು ಬಂಧಿಸಿರುವ ಚೇಳೂರು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
A minor girl was strangled to death by her father, brother and uncle in Karnataka's Tumakuru district in a case of honour killing. The tragic incident occurred after the 17-year-old victim, Netravati's family became enraged that she was in love with a boy belonging to a Scheduled Caste.
21-06-25 02:48 pm
Bengaluru Staff
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
21-06-25 08:50 pm
HK News Desk
Couple Caught at Jaipur Hotel, Video: ಹೋಟೆಲ್...
20-06-25 10:19 pm
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
21-06-25 11:04 pm
Mangaluru Correspondent
Krishnaveni Mines Geology, Mangalore;18 ದಿನ ಜ...
21-06-25 03:56 pm
Fake NEET Marksheet, Udupi Topper; ನಕಲಿ ನೀಟ್...
21-06-25 01:59 pm
Sakleshpur, Mangalore Bangalore Train; ಸಕಲೇಶಪ...
21-06-25 12:03 pm
Kudupu Murder, Sajith Shetty Post, Sudheer Ku...
20-06-25 11:04 pm
21-06-25 08:58 pm
Mangaluru Correspondent
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm