ಬ್ರೇಕಿಂಗ್ ನ್ಯೂಸ್
16-06-23 11:00 pm Mangalore Correspondent ಕ್ರೈಂ
ಮಂಗಳೂರು, ಜೂನ್ 16: ನಗರದಲ್ಲಿ ಮನೆಗಳ್ಳತನ ಘಟನೆ ನಡೆದ ಕೇವಲ ಮೂರು ಗಂಟೆಯೊಳಗೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಆರೋಪಿಗಳಿಂದ ಕದ್ದ ಮಾಲು ಹಾಗೂ ನಗದನ್ನು ವಶಕ್ಕೆ ಪಡೆದಿದ್ದಾರೆ.
ಅತ್ತಾವರದ ಕೆಎಂಸಿ ಆಸ್ಪತ್ರೆ ಬಳಿಯ ಬ್ರಿಜೇಶ್ ಅಪಾರ್ಟ್ಮೆಂಟ್ ಕಟ್ಟಡದ 2 ಅಪಾರ್ಟ್ಮೆಂಟ್ಗಳಲ್ಲಿ ಜೂ.15ರಂದು ಕಳ್ಳತನ ನಡೆದಿರುವ ಬಗ್ಗೆ ಮಂಗಳೂರು ದಕ್ಷಿಣ ಠಾಣೆ ಪೊಲೀಸರಿಗೆ ದೂರು ನೀಡಲಾಗಿತ್ತು. ಅದೇ ದಿನ ಸಂಜೆ ಪಣಂಬೂರು ಬೀಚ್ ಬಳಿ ನಾಲ್ವರು ಅನುಮಾನಾಸ್ಪದ ರೀತಿಯಲ್ಲಿ ವರ್ತಿಸುತ್ತಿದ್ದರು. ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಬ್ರಿಜೇಶ್ ಅಪಾರ್ಟ್ಮೆಂಟ್ನ ಎರಡು ನಿವಾಸಗಳಿಗೆ ಕನ್ನ ಹಾಕಿ ದೆಹಲಿಗೆ ಪರಾರಿಯಾಗಲು ಯೋಜಿಸುತ್ತಿರುವುದು ತಿಳಿದು ಬಂದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತರನ್ನು ದೆಹಲಿಯ ಮೊಹಮ್ಮದ್ ಆಶಿಫ್ ಅಲಿಯಾಸ್ ಆಶಿಫ್ (23) ಮತ್ತು ಶೇಖ್ ಮೈದುಲ್ (25) ಹಾಗೂ ಪಶ್ಚಿಮ ಬಂಗಾಳದ ರಫೀಕ್ ಖಾನ್ (24) ಮತ್ತು ದೆಹಲಿಯ ವಕೀಲ ಅಹಮದ್ (34) ಎಂದು ಗುರುತಿಸಲಾಗಿದೆ.
ಕಳ್ಳತನ ಮಾಡಿದ ಚಿನ್ನಾಭರಣ ಮತ್ತು ನಗದು, ಕಟ್ಟರ್ಗಳು, ಸ್ಕ್ರೂಡ್ರೈವರ್ಗಳು ಮತ್ತು ಚೂಪಾದ ಕಬ್ಬಿಣದ ರಾಡ್ ಸೇರಿದಂತೆ ಕೃತ್ಯಕ್ಕೆ ಬಳಸಲಾದ ಉಪಕರಣಗಳು, ಏಳು ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಸಿಸಿಟಿವಿ ಕ್ಯಾಮೆರಾ ಕಣ್ಗಾವಲು ಇಲ್ಲದ, ಬೀಗ ಹಾಕಿರುವ ಮನೆಗಳನ್ನು ಗುರಿಯಾಗಿಸಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ.
Mangalore, Attavara house robbery, police nab thieves in just three hours of time. Four native of Delhi have been arrested. The arrested were spotted from Panambur beach in Mangalore.
21-06-25 02:48 pm
Bengaluru Staff
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
21-06-25 08:50 pm
HK News Desk
Couple Caught at Jaipur Hotel, Video: ಹೋಟೆಲ್...
20-06-25 10:19 pm
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
21-06-25 11:04 pm
Mangaluru Correspondent
Krishnaveni Mines Geology, Mangalore;18 ದಿನ ಜ...
21-06-25 03:56 pm
Fake NEET Marksheet, Udupi Topper; ನಕಲಿ ನೀಟ್...
21-06-25 01:59 pm
Sakleshpur, Mangalore Bangalore Train; ಸಕಲೇಶಪ...
21-06-25 12:03 pm
Kudupu Murder, Sajith Shetty Post, Sudheer Ku...
20-06-25 11:04 pm
21-06-25 08:58 pm
Mangaluru Correspondent
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm