ಬ್ರೇಕಿಂಗ್ ನ್ಯೂಸ್
16-06-23 11:00 pm Mangalore Correspondent ಕ್ರೈಂ
ಮಂಗಳೂರು, ಜೂನ್ 16: ನಗರದಲ್ಲಿ ಮನೆಗಳ್ಳತನ ಘಟನೆ ನಡೆದ ಕೇವಲ ಮೂರು ಗಂಟೆಯೊಳಗೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಆರೋಪಿಗಳಿಂದ ಕದ್ದ ಮಾಲು ಹಾಗೂ ನಗದನ್ನು ವಶಕ್ಕೆ ಪಡೆದಿದ್ದಾರೆ.
ಅತ್ತಾವರದ ಕೆಎಂಸಿ ಆಸ್ಪತ್ರೆ ಬಳಿಯ ಬ್ರಿಜೇಶ್ ಅಪಾರ್ಟ್ಮೆಂಟ್ ಕಟ್ಟಡದ 2 ಅಪಾರ್ಟ್ಮೆಂಟ್ಗಳಲ್ಲಿ ಜೂ.15ರಂದು ಕಳ್ಳತನ ನಡೆದಿರುವ ಬಗ್ಗೆ ಮಂಗಳೂರು ದಕ್ಷಿಣ ಠಾಣೆ ಪೊಲೀಸರಿಗೆ ದೂರು ನೀಡಲಾಗಿತ್ತು. ಅದೇ ದಿನ ಸಂಜೆ ಪಣಂಬೂರು ಬೀಚ್ ಬಳಿ ನಾಲ್ವರು ಅನುಮಾನಾಸ್ಪದ ರೀತಿಯಲ್ಲಿ ವರ್ತಿಸುತ್ತಿದ್ದರು. ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಬ್ರಿಜೇಶ್ ಅಪಾರ್ಟ್ಮೆಂಟ್ನ ಎರಡು ನಿವಾಸಗಳಿಗೆ ಕನ್ನ ಹಾಕಿ ದೆಹಲಿಗೆ ಪರಾರಿಯಾಗಲು ಯೋಜಿಸುತ್ತಿರುವುದು ತಿಳಿದು ಬಂದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತರನ್ನು ದೆಹಲಿಯ ಮೊಹಮ್ಮದ್ ಆಶಿಫ್ ಅಲಿಯಾಸ್ ಆಶಿಫ್ (23) ಮತ್ತು ಶೇಖ್ ಮೈದುಲ್ (25) ಹಾಗೂ ಪಶ್ಚಿಮ ಬಂಗಾಳದ ರಫೀಕ್ ಖಾನ್ (24) ಮತ್ತು ದೆಹಲಿಯ ವಕೀಲ ಅಹಮದ್ (34) ಎಂದು ಗುರುತಿಸಲಾಗಿದೆ.
ಕಳ್ಳತನ ಮಾಡಿದ ಚಿನ್ನಾಭರಣ ಮತ್ತು ನಗದು, ಕಟ್ಟರ್ಗಳು, ಸ್ಕ್ರೂಡ್ರೈವರ್ಗಳು ಮತ್ತು ಚೂಪಾದ ಕಬ್ಬಿಣದ ರಾಡ್ ಸೇರಿದಂತೆ ಕೃತ್ಯಕ್ಕೆ ಬಳಸಲಾದ ಉಪಕರಣಗಳು, ಏಳು ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಸಿಸಿಟಿವಿ ಕ್ಯಾಮೆರಾ ಕಣ್ಗಾವಲು ಇಲ್ಲದ, ಬೀಗ ಹಾಕಿರುವ ಮನೆಗಳನ್ನು ಗುರಿಯಾಗಿಸಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ.
Mangalore, Attavara house robbery, police nab thieves in just three hours of time. Four native of Delhi have been arrested. The arrested were spotted from Panambur beach in Mangalore.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 05:07 pm
HK News Staffer
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm