ಬ್ರೇಕಿಂಗ್ ನ್ಯೂಸ್
21-06-23 11:10 pm Bangalore Correspondent ಕ್ರೈಂ
ಬೆಂಗಳೂರು, ಜೂನ್ 21: ನಗರದ ಕಮ್ಮನಹಳ್ಳಿ ಎಂಬಲ್ಲಿ ಸೈಂಟ್ ಪಿಯುಸ್ ಚರ್ಚ್ ಆವರಣಕ್ಕೆ ನುಗ್ಗಿದ ವ್ಯಕ್ತಿಯೊಬ್ಬ ಹಾನಿಯೆಸಗಿದ ಘಟನೆ ನಡೆದಿದ್ದು ಈ ಸಂಬಂಧ ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಲಿಂಗರಾಜಪುರಂ ನಿವಾಸಿ ಟಾಮ್ ಮ್ಯಾಥ್ಯೂ ಎಂದು ಗುರುತಿಸಲಾಗಿದೆ.
ಬುಧವಾರ ಬೆಳ್ಳಂಬೆಳಗ್ಗೆ ಚರ್ಚ್ ನಲ್ಲಿ ದಾಳಿಯೆಸಗಿದ ಘಟನೆ ನಡೆದಿತ್ತು. ಚರ್ಚ್ ಸಿಬಂದಿ ಬಂದು ನೋಡಿದಾಗ, ಒಳಗಿದ್ದ ಸಾಮಗ್ರಿಗಳು ಚೆಲ್ಲಾಪಿಲ್ಲಿಯಾಗಿದ್ದವು. ಪ್ರಮುಖ ದ್ವಾರದ ಬಾಗಿಲನ್ನು ಒಡೆದು ಹಾಕಲಾಗಿತ್ತು. ಕೂಡಲೇ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದರು. ಸಿಸಿಟಿವಿ ಆಧರಿಸಿ ತನಿಖೆ ನಡೆಸಿದ್ದು ಯುವಕನ ಕೃತ್ಯ ಬೆಳಕಿಗೆ ಬಂದಿದೆ.


ಪೊಲೀಸರ ಬಂಧನ ಸಂದರ್ಭದಲ್ಲಿ ಆರೋಪಿ ಮ್ಯಾಥ್ಯು ಕುಡಿದ ಮತ್ತಿನಲ್ಲಿದ್ದ. ಕುಡಿದ ಮತ್ತಿನಲ್ಲಿ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಕೌಟುಂಬಿಕ ಸಮಸ್ಯೆಯಿಂದ ಬಳಲುತ್ತಿದ್ದ ಟಾಮ್, ಅದೇ ಕಾರಣಕ್ಕೆ ಮಾನಸಿಕ ಸ್ಥಿಮಿತ ಕಳಕೊಂಡಿದ್ದ ಎನ್ನಲಾಗುತ್ತಿದೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದು ಆತನ ಕೈಯಲ್ಲಿದ್ದ ಸುತ್ತಿಗೆಯನ್ನು ವಶಕ್ಕೆ ಪಡೆದಿದ್ದಾರೆ. ಸುತ್ತಿಗೆಯಿಂದ ಬಡಿದು ಕೃತ್ಯ ಎಸಗಿರುವ ಶಂಕೆಯಿದೆ.

ಚರ್ಚ್ ಒಳಗೆ ಕ್ಯಾಂಡಲ್ ಉರಿಸುವ ಸ್ಟಾಂಡ್ ಸೇರಿದಂತೆ ಪವಿತ್ರ ವಸ್ತುಗಳನ್ನು ಹಾನಿ ಮಾಡಲಾಗಿದೆ. ಪೊಲೀಸರು ಆರೋಪಿಯನ್ನು ವಿಚಾರಣೆ ನಡೆಸುತ್ತಿದ್ದು ಕೃತ್ಯಕ್ಕೆ ಬೇರಾವುದೇ ದುರುದ್ದೇಶ ಇದೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
Pius catholic Church vandalised at Lingarajapuram in Bangalore, Christian youth arrested. A 29-year-old individual named Tom Mathew, a resident of Lingarajapuram, has been apprehended in relation to the vandalism incident that occurred at St Pius X Church in Kammanahalli, Bengaluru, in the early hours of Wednesday.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm