ಬ್ರೇಕಿಂಗ್ ನ್ಯೂಸ್
21-06-23 11:10 pm Bangalore Correspondent ಕ್ರೈಂ
ಬೆಂಗಳೂರು, ಜೂನ್ 21: ನಗರದ ಕಮ್ಮನಹಳ್ಳಿ ಎಂಬಲ್ಲಿ ಸೈಂಟ್ ಪಿಯುಸ್ ಚರ್ಚ್ ಆವರಣಕ್ಕೆ ನುಗ್ಗಿದ ವ್ಯಕ್ತಿಯೊಬ್ಬ ಹಾನಿಯೆಸಗಿದ ಘಟನೆ ನಡೆದಿದ್ದು ಈ ಸಂಬಂಧ ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಲಿಂಗರಾಜಪುರಂ ನಿವಾಸಿ ಟಾಮ್ ಮ್ಯಾಥ್ಯೂ ಎಂದು ಗುರುತಿಸಲಾಗಿದೆ.
ಬುಧವಾರ ಬೆಳ್ಳಂಬೆಳಗ್ಗೆ ಚರ್ಚ್ ನಲ್ಲಿ ದಾಳಿಯೆಸಗಿದ ಘಟನೆ ನಡೆದಿತ್ತು. ಚರ್ಚ್ ಸಿಬಂದಿ ಬಂದು ನೋಡಿದಾಗ, ಒಳಗಿದ್ದ ಸಾಮಗ್ರಿಗಳು ಚೆಲ್ಲಾಪಿಲ್ಲಿಯಾಗಿದ್ದವು. ಪ್ರಮುಖ ದ್ವಾರದ ಬಾಗಿಲನ್ನು ಒಡೆದು ಹಾಕಲಾಗಿತ್ತು. ಕೂಡಲೇ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದರು. ಸಿಸಿಟಿವಿ ಆಧರಿಸಿ ತನಿಖೆ ನಡೆಸಿದ್ದು ಯುವಕನ ಕೃತ್ಯ ಬೆಳಕಿಗೆ ಬಂದಿದೆ.


ಪೊಲೀಸರ ಬಂಧನ ಸಂದರ್ಭದಲ್ಲಿ ಆರೋಪಿ ಮ್ಯಾಥ್ಯು ಕುಡಿದ ಮತ್ತಿನಲ್ಲಿದ್ದ. ಕುಡಿದ ಮತ್ತಿನಲ್ಲಿ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಕೌಟುಂಬಿಕ ಸಮಸ್ಯೆಯಿಂದ ಬಳಲುತ್ತಿದ್ದ ಟಾಮ್, ಅದೇ ಕಾರಣಕ್ಕೆ ಮಾನಸಿಕ ಸ್ಥಿಮಿತ ಕಳಕೊಂಡಿದ್ದ ಎನ್ನಲಾಗುತ್ತಿದೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದು ಆತನ ಕೈಯಲ್ಲಿದ್ದ ಸುತ್ತಿಗೆಯನ್ನು ವಶಕ್ಕೆ ಪಡೆದಿದ್ದಾರೆ. ಸುತ್ತಿಗೆಯಿಂದ ಬಡಿದು ಕೃತ್ಯ ಎಸಗಿರುವ ಶಂಕೆಯಿದೆ.

ಚರ್ಚ್ ಒಳಗೆ ಕ್ಯಾಂಡಲ್ ಉರಿಸುವ ಸ್ಟಾಂಡ್ ಸೇರಿದಂತೆ ಪವಿತ್ರ ವಸ್ತುಗಳನ್ನು ಹಾನಿ ಮಾಡಲಾಗಿದೆ. ಪೊಲೀಸರು ಆರೋಪಿಯನ್ನು ವಿಚಾರಣೆ ನಡೆಸುತ್ತಿದ್ದು ಕೃತ್ಯಕ್ಕೆ ಬೇರಾವುದೇ ದುರುದ್ದೇಶ ಇದೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
Pius catholic Church vandalised at Lingarajapuram in Bangalore, Christian youth arrested. A 29-year-old individual named Tom Mathew, a resident of Lingarajapuram, has been apprehended in relation to the vandalism incident that occurred at St Pius X Church in Kammanahalli, Bengaluru, in the early hours of Wednesday.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 05:07 pm
HK News Staffer
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm