ಬ್ರೇಕಿಂಗ್ ನ್ಯೂಸ್
02-11-20 01:17 pm Headline Karnataka News Network ಕ್ರೈಂ
ಕಾಸರಗೋಡು, ನವೆಂಬರ್ 02: ಮಂಜೇಶ್ವರದ ಬಂದ್ಯೋಡು ಬಳಿ ಎರಡು ದಿನಗಳ ಹಿಂದೆ ನಡೆದ ದಾಂಧಲೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಸೇರಿದಂತೆ ಇಬ್ಬರನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಪ್ರಮುಖ ಆರೋಪಿಯನ್ನು ಉಪ್ಪಳ ಕುಕ್ಕಾರ್ ನಿವಾಸಿ ಟಿಕ್ಕಿ ಅಲಿಯಾಸ್ ಅಬ್ದುಲ್ ಅಮೀರ್ ಎಂದು ಗುರುತಿಸಲಾಗಿದೆ. ಪೊಲೀಸರು ಅಮೀರ್ ಸೇರಿದಂತೆ 11 ಮಂದಿಯ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಿಸಿದ್ದಾರೆ.
ಶನಿವಾರ ಮಧ್ಯಾಹ್ನ ಅಬ್ದುಲ್ ಅಮೀರ್ ಸೇರಿ ಆರು ಮಂದಿ ಲಾರಿಯಲ್ಲಿ ಶೇಕ್ ಆಲಿ ಎಂಬವರು ತಮ್ಮ ಕುಟುಂಬದ ಜೊತೆಗೆ ಕಾರಿನಲ್ಲಿ ಬರುತ್ತಿದ್ದಾಗ ಕಾರಿಗೆ ಡಿಕ್ಕಿಯಾಗಲು ಪ್ರಯತ್ನಿಸಿದ್ದಾರೆ. ಈ ವೇಳೆ, ಲಾರಿಯನ್ನು ತಪ್ಪಿಸಲು ಯತ್ನಿಸಿದ ಚಾಲಕ ಕಾರನ್ನು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿಸಿದ್ದರು. ಈ ವೇಳೆ ಅಮೀರ್ ಮತ್ತು ತಂಡ ಶೇಖ್ ಆಲಿ ಕಾರಿಗೆ ಗುಂಡಿನ ದಾಳಿ ನಡೆಸಿದೆ. ಈ ವೇಳೆ, ಕಾರಿನಲ್ಲಿದ್ದ ಶೇಖ್ ಅಲಿ ಕುಟುಂಬ ತಪ್ಪಿಸಿಕೊಂಡು ಪರಾರಿಯಾಗಿದೆ. ಬಳಿಕ ಶೇಕ್ ಆಲಿ ಮ್ತತು ಕುಟುಂಬ ಕುಂಬಳೆ ಠಾಣೆಗೆ ದೂರು ನೀಡಲು ತೆರಳುತ್ತಿದ್ದರು. ಈ ವೇಳೆ, ಮತ್ತೆ ಬಂದ ಅಬ್ದುಲ್ ಅಮೀರ್ ತಂಡ ಶೇಖ್ ಆಲಿಯ ಮನೆಯಲ್ಲಿ ಆಲ್ಟೋ ಕಾರನ್ನು ಜಖಂ ಗೊಳಿಸಿದೆ. ಅಲ್ಲದೆ, ಕುಟುಂಬವನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲು ಮುಂದಾಗಿದೆ.
ಘಟನೆಯಲ್ಲಿ ನಾಲ್ಕು ಕಾರುಗಳು ಜಖಂ ಆಗಿದ್ದವು. ಪ್ರಕರಣ ಸಂಬಂಧ ಕುಂಬಳೆ ಪೊಲೀಸರು ಮೊಯಿನುದ್ದೀನ್ ಶರೀಫ್, ತಳಂಗರೆ ಅಚ್ಚು, ಸಮದ್, ಆರಿಕ್ಕಾಡಿ ಗುಂಡು ಉಸ್ಮಾನ್, ಲತೀಫ್, ಜೋಯಿ, ಟೈರ್ ಫೈಸಲ್ ಸೇರಿ 11 ಮಂದಿ ವಿರುದ್ಧ ಪ್ರಕರಣ ದಾಖಲಿಸಿದೆ. ವೈಯಕ್ತಿಕ ದ್ವೇಷದಿಂದ ರೌಡಿಗಳ ತಂಡ ಶೇಖ್ ಆಲಿ ಕುಟುಂಬದ ಮೇಲೆ ದಾಳಿ ಮಾಡಿತ್ತು ಎನ್ನಲಾಗುತ್ತಿದೆ.
Police have arrested the prime accused in Bandyodu, Kasargod firing and murder attempt case. The officials have successfully seized four vehicles. The accused is identified as Tikki Ammi alias Abdul Amir aged 30 years is resident of Uppala
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 12:26 pm
HK News Staffer
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am