ಬ್ರೇಕಿಂಗ್ ನ್ಯೂಸ್
27-06-23 03:41 pm Bangalore Correspondent ಕ್ರೈಂ
ಬೆಂಗಳೂರು, ಜೂನ್ 27: ತನ್ನ ಪತ್ನಿ ಮಾದಕ ವ್ಯಸನಿಯಾಗಿದ್ದು, ಡ್ರಗ್ಸ್ ಪೆಡ್ಲರ್ ಜೊತೆ ಅಕ್ರಮ ಸಂಬಂಧ ಹೊಂದಿದ್ದಾಳೆಂದು ಆರೋಪಿಸಿ ಸಿನಿಮಾ ನಿರ್ಮಾಪಕರೊಬ್ಬರು ನಗರದ ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ನಟ ಹಾಗೂ ನಿರ್ಮಾಪಕ ಟಿ.ಚಂದ್ರಶೇಖರ್ ಎಂಬವರು ತಮ್ಮ ಪತ್ನಿ ನಮಿತಾ ಹಾಗೂ ಲಕ್ಷ್ಮೀಶ್ ಪ್ರಭು ಎಂಬವರ ವಿರುದ್ಧ ಕೇಸು ದಾಖಲಿಸಿದ್ದಾರೆ. ಅದಕ್ಕೆ ಪ್ರತಿಯಾಗಿ ಪತ್ನಿ ನಮಿತಾ ಕೂಡ ಪತಿ ವಿರುದ್ಧ ವಂಚನೆ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ.
ʼಹೀಗೊಂದು ದಿನʼ ಹಾಗೂ ʼಅಪ್ಪುಗೆʼ ಎಂಬ ಸಿನಿಮಾಗಳ ನಿರ್ಮಾಪಕರಾಗಿರುವ ಟಿ.ಚಂದ್ರಶೇಖರ್, ಎರಡು ವರ್ಷಗಳ ಹಿಂದೆ ನಮಿತಾರನ್ನು ವಿವಾಹವಾಗಿದ್ದರು, ಬನಶಂಕರಿ 3ನೇ ಹಂತದ ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣಾ ವ್ಯಾಪ್ತಿಯಲ್ಲಿ ವಾಸವಿದ್ದರು. ಈ ಮಧ್ಯೆ ತನ್ನ ಪತ್ನಿ ಮಾದಕ ವ್ಯಸನಿಯಾಗಿದ್ದು, ಎಷ್ಟೇ ಬುದ್ಧಿ ಹೇಳಿದರೂ ಡ್ರಗ್ಸ್ನಿಂದ ದೂರವಾಗಲಿಲ್ಲ. ಅಲ್ಲದೆ, ಕಳೆದ ಜನವರಿಯಿಂದ ಆಕೆಗೆ ಲಕ್ಷ್ಮೀಶ್ ಪ್ರಭು ಎಂಬ ಡ್ರಗ್ಸ್ ಪೆಡ್ಲರ್ ಎಂಬಾತನ ಜತೆ ಅನೈತಿಕ ಸಂಬಂಧವಿದೆ. ಜೂ.16 ರಂದು ಮನೆಯಲ್ಲಿ ಪತ್ನಿ ಹಾಗೂ ಲಕ್ಷ್ಮೀಶ್ ದೈಹಿಕ ಸಂಪರ್ಕದಲ್ಲಿದ್ದ ವೇಳೆ ನೋಡಿ ಪ್ರಶ್ನಿಸಿದಾಗ ಇಬ್ಬರೂ ಸೇರಿ ತನ್ನ ಮೇಲೆ ಹಲ್ಲೆ ನಡೆಸಿ ಪ್ರಾಣಬೆದರಿಕೆ ಹಾಕಿದ್ದಾರೆ. ಕೂಡಲೇ ಪೊಲೀಸರಿಗೆ ದೂರು ನೀಡಿರುವುದಾಗಿ ಚಂದ್ರಶೇಖರ್ ತಿಳಿಸಿದ್ದಾರೆ.
ನಮಿತಾ ಕೂಡ ಪತಿ ಚಂದ್ರಶೇಖರ್ ವಿರುದ್ಧ ದೂರು ದಾಖಲಿಸಿದ್ದು, ಆತನಿಗೆ ಮೊದಲೇ ಮದುವೆಯಾಗಿದ್ದು, ಮೊದಲ ಹೆಂಡತಿ, ಮಕ್ಕಳಿದ್ದಾರೆ. ನನ್ನನ್ನು ಮದುವೆ ಮಾಡಿಕೊಳ್ಳುವ ವೇಳೆ ತನ್ನ ಪತ್ನಿಗೆ ವಿಚ್ಛೇದನ ನೀಡಿರುವುದಾಗಿ ಪತ್ರ ತೋರಿಸಿ, ನನ್ನ ವಿವಾಹವಾಗಿದ್ದರು. ಜೂ.16 ರ ಮಧ್ಯಾಹ್ನ 1 ಗಂಟೆಯಲ್ಲಿ ನಮ್ಮ ಮನೆಯ ಮುಂದೆ ಗಲಾಟೆ ನಡೆಯುತ್ತಿತ್ತು. ಸದ್ದು ಕೇಳಿ ಹೊರಬಂದು ನೋಡಿದ್ದಾಗ ನನ್ನ ಸ್ನೇಹಿತ ಲಕ್ಷ್ಮೀಶ್ ಪ್ರಭುಗೆ ವಿನಾಕಾರಣ ಚಂದ್ರಶೇಖರ್ ಮತ್ತು ಆತನ ಸ್ನೇಹಿತರಾದ ಅರುಣ್, ಹೇಮಂತ್ ಥಳಿಸಿದ್ದಾರೆ. ಆತನ ಬಟ್ಟೆ ಬಿಚ್ಚಿಸಿ ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದಾರೆ. ನನ್ನ ಮೇಲೂ ಚಾಕುವಿನಿಂದ ಹಲ್ಲೆ ಮಾಡಿದ್ದಾರೆ. ಮನೆಯಲ್ಲಿ ಡ್ರಗ್ಸ್ ಇಟ್ಟು ಅರೆಸ್ಟ್ ಮಾಡಿಸಿ ಜೈಲಿಗೆ ಕಳುಹಿಸುತ್ತೇನೆ ಎಂದು ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ನಮಿತಾ, ಪತಿಯ ವಿರುದ್ಧ ಪ್ರತಿದೂರು ದಾಖಲಿಸಿದ್ದಾರೆ.
Kannada film producer and actor has lodged a complaint with the Bengaluru Police alleging that his wife “is a drug addict” and has an affair with a drug peddler, police said on Monday, adding that his wife also lodged a counter complaint.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 11:01 am
Bangalore Correspondent
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm
Hyderabad Murder, Mother suicide: ತೆಂಗಿನಕಾಯಿ...
18-04-25 08:14 pm
Dead Baby Found, Garbage, Bangalore crime: ಅಪ...
18-04-25 03:41 pm