ಬ್ರೇಕಿಂಗ್ ನ್ಯೂಸ್
28-06-23 10:16 pm Mangalore Correspondent ಕ್ರೈಂ
ಉಳ್ಳಾಲ, ಜೂ.28: ಬಂಟ್ವಾಳ ತಾಲೂಕಿನ ಬಾಳೆಪುಣಿ ಗ್ರಾಮದಲ್ಲಿ ಒಬ್ಬಂಟಿ ಅವಿವಾಹಿತ 53 ವರ್ಷ ಪ್ರಾಯದ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗೆ ಜಿಲ್ಲಾ ಸತ್ರ ನ್ಯಾಯಾಲಯ ಕಠಿಣ ಜೀವಾವಧಿ ಶಿಕ್ಷೆ ವಿಧಿಸಿದೆ.
2020ನೇ ಇಸವಿ ಸೆಪ್ಟೆಂಬರ್ 24 ರಂದು ಬಂಟ್ವಾಳ ತಾಲೂಕಿನ ಬಾಳೆಪುಣಿ ಗ್ರಾಮದ ಕಣಂತೂರು, ಬೆಳ್ಳೇರಿ ಎಂಬಲ್ಲಿ ಒಂಟಿಯಾಗಿ ವಾಸವಿದ್ದ 53 ವರ್ಷದ ಅವಿವಾಹಿತ ಮಹಿಳೆ ಕುಸುಮಾ ತನ್ನದೇ ಮನೆಯಲ್ಲಿ ನಗ್ನಸ್ಥಿತಿಯಲ್ಲಿ ಕೊಲೆಯಾದ ರೀತಿ ಕಂಡುಬಂದಿದ್ದರು. ನೆರೆ ಮನೆಯವರಿಂದ ಕುಸುಮಾ ಸಾವಿನ ವಿಚಾರ ಬೆಳಕಿಗೆ ಬಂದಿತ್ತು. ಕೊಣಾಜೆ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದು ಕೆಲವೇ ದಿನಗಳಲ್ಲಿ ಒಂಟಿ ಮಹಿಳೆಯ ಅತ್ಯಾಚಾರ ಕೊಲೆ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದರು. ಆರೋಪಿ, ಕಾಸರಗೋಡು ಜಿಲ್ಲೆಯ ಗಡಿಭಾಗದ ಪಾತೂರು ನಿವಾಸಿ ಕೂಲಿ ಕಾರ್ಮಿಕನಾಗಿದ್ದ ಅಶ್ರಫ್ ನನ್ನು ಬಂಧಿಸಿದ್ದರು.
ಆರೋಪಿ ಅಶ್ರಫ್ ಒಂಟಿ ಮಹಿಳೆಯ ಮನೆಗೆ ನುಗ್ಗಿ ಮಹಿಳೆಯ ಮೇಲೆ ಅತ್ಯಾಚಾರಗೈದು, ಆಕೆಯ ಕಿವಿ ಓಲೆ ಮತ್ತು ಮನೆಯಲ್ಲಿದ್ದ 15 ಸಾವಿರ ನಗದನ್ನು ಕದ್ದು ಪರಾರಿಯಾಗಿದ್ದ. ಪೊಲೀಸರು ಮಹಿಳೆಯ ಶವದ ಮರಣೋತ್ತರ ಪರೀಕ್ಷೆ ನಡೆಸಿದಾಗ ಆಕೆ ಅತ್ಯಾಚಾರಕ್ಕೊಳಗಾಗಿ ಕೊಲೆಯಾಗಿದ್ದಾಗಿ ವರದಿ ಬಂದಿತ್ತು. ಅಂದಿನ ಎಸಿಪಿ ರಂಜಿತ್ ಕುಮಾರ್ ಬಂಡಾರು ನೇತೃತ್ವದಲ್ಲಿ ತನಿಖೆಯ ಜಾಡು ಹಿಡಿದ ಪೊಲೀಸರು ಪಾತೂರು ನಿವಾಸಿ ಅಶ್ರಫ್ ನನ್ನ ಬಂಧಿಸಿದ್ದರು.
ಕೊಲೆ ನಡೆದ ಕೆಲವೇ ದಿನಗಳ ಹಿಂದೆ ಅಶ್ರಫ್, ಕುಸುಮಾ ಅವರ ಮನೆಗೆ ಕೂಲಿ ಕೆಲಸಕ್ಕೆ ಬಂದಿದ್ದ. ಬಾವಿಗೆ ಬಿದ್ದಿದ್ದ ಹೆಬ್ಬಾವು ತೆಗೆಯುವುದಕ್ಕೂ ಸಹಕರಿಸಿದ್ದ. ಮಹಿಳೆ ಒಂಟಿಯಾಗಿರುವುದು, ಮನೆ ತುಂಬಾ ಅಡಿಕೆ ಬೆಳೆ ಇರುವುದನ್ನು ಗಮನಿಸಿ ಲಕ್ಷಾಂತರ ರೂಪಾಯಿ ಹಣ ಮನೆಯಲ್ಲಿ ಇರಬಹುದು ಎಂದು ಕಳ್ಳತನಕ್ಕೆ ಯೋಜನೆ ಹಾಕಿದ್ದ. ಅದರಂತೆ, ಮನೆಗೆ ನುಗ್ಗಿದ್ದ ಅಶ್ರಫ್ ಗೆ 15,000 ರೂ. ನಗದು ಸಿಕ್ಕಿತ್ತು. ಇಷ್ಟಕ್ಕೆ ಸುಮ್ಮನಾಗದ ಕಿರಾತಕ 53 ವರುಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಕ್ರೌರ್ಯ ಮೆರೆದು ಆಕೆಯ ಬಳಿಯಿದ್ದ ಚಿನ್ನದ ಆಭರಣಗಳನ್ನ ದೋಚಿ ಪರಾರಿಯಾಗಿದ್ದ.
ತನಿಖೆ ನಡೆಸಿದ್ದ ಕೊಣಾಜೆ ಪೊಲೀಸರು ಆರೋಪಿ ಅಶ್ರಫ್ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಸುಧೀರ್ಘ ವಿಚಾರಣೆ, ಸಾಕ್ಷಿಗಳ ಹೇಳಿಕೆ ಪರಿಗಣಿಸಿದ ನ್ಯಾಯಾಲಯ ಅಪರಾಧಿಗೆ ಶಿಕ್ಷೆ ಘೋಷಿಸಿದೆ. ಸಂತ್ರಸ್ತ ಮಹಿಳೆಯ ಪರ ಸರಕಾರಿ ಅಭಿಯೋಜಕಿ ಜ್ಯೋತಿ ಪ್ರಮೋದ್ ನಾಯಕ್ ವಾದಿಸಿದ್ದ ಸಾಕ್ಷಿಗಳನ್ನು ಹೇಳಿಕೆ ಆಧರಿಸಿ ಕಠಿಣ ಶಿಕ್ಷೆಗೆ ಒತ್ತಾಯ ಮಾಡಿದ್ದರು. 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಕಾಂತರಾಜು ಎಸ್.ವಿ ಪ್ರಕರಣದಲ್ಲಿ ತೀರ್ಪು ಪ್ರಕಟಿಸಿದ್ದು ಆರೋಪಿ ಅಶ್ರಫ್ ಗೆ ಕಠಿಣ ಜೀವಾವಧಿ ಶಿಕ್ಷೆ ಮತ್ತು 3 ಲಕ್ಷ ರೂ. ದಂಡ ವಿಧಿಸಿದ್ದಾರೆ.
A man from Varkady in Manjeshwar has been convicted in the case of raping and murdering a woman at her house at Belleri in Balepuni village. The convict is Muhammad Ashraf alias Ahsraf (33). The incident had occurred on September 24, 2020. Ashraf who is married and has two children, was working in the plantation of the brother of the woman. He had noticed that the woman was living alone.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 05:07 pm
HK News Staffer
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm