ಬ್ರೇಕಿಂಗ್ ನ್ಯೂಸ್
03-11-20 12:52 pm Mangalore Correspondent ಕ್ರೈಂ
ಪುತ್ತೂರು, ನವೆಂಬರ್ 03: ಪುತ್ತೂರು ಪೇಟೆಯ ದರ್ಬೆಯಲ್ಲಿ ಸೋಮವಾರ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆಯೂ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮೂಲತಃ ಉಪ್ಪಿನಂಗಡಿ ನಿವಾಸಿ, ಸದ್ಯ ಪುತ್ತೂರಿನ ದರ್ಬೆಯಲ್ಲಿ ವಾಸವಿದ್ದ ಅಚ್ಚುತ್ತ ಶೆಟ್ಟಿ ಎಂಬವರ ಪತ್ನಿ ಗೀತಾ ಶೆಟ್ಟಿ (38) ಮೃತರು. ಗೀತಾ ತನ್ನ ಜೊತೆಗಿದ್ದ 9 ವರ್ಷದ ಸ್ವಾತಿ ಹಾಗೂ ಆರು ವರ್ಷದ ಅನನ್ಯ ಜೊತೆಗೆ ರಸ್ತೆ ದಾಟುತ್ತಿದ್ದರು. ಈ ವೇಳೆ, ಯಮರೂಪಿಯಾಗಿ ಧಾವಿಸಿದ್ದ ಸ್ವಿಫ್ಟ್ ಕಾರು ಇವರಿಗೆ ಡಿಕ್ಕಿಯಾಗಿದೆ. ಸ್ವಾತಿ ಸ್ಥಳದಲ್ಲೇ ಸಾವನ್ನಪ್ಪಿದರೆ, ಗಂಭೀರ ಗಾಯಗೊಂಡಿದ್ದ ಇನ್ನೊಬ್ಬಳು ಬಾಲಕಿ ಮತ್ತು ಮಹಿಳೆಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.


ಸ್ವಾತಿ ಮತ್ತು ಅನನ್ಯ, ದರ್ಬೆಯ ದುಗ್ಗಮ್ಮ ದೇರಣ್ಣ ಶೆಟ್ಟಿ ಬಂಟರ ಭವನದಲ್ಲಿ ಕೆಲಸಕ್ಕಿದ್ದ ಕೂಲಿ ಕೆಲಸ ಮಾಡುತ್ತಿದ್ದ ದಂಪತಿಯ ಪುತ್ರಿಯರಾಗಿದ್ದರು. ಗೀತಾ ಶೆಟ್ಟಿಯ ಮನೆಯೂ ಪಕ್ಕದಲ್ಲೇ ಇದ್ದುದರಿಂದ ಮಕ್ಕಳನ್ನು ಗೀತಾರ ಬಳಿ ಬಿಟ್ಟು ದಂಪತಿ ಹೊರಗೆ ಹೋಗಿದ್ದರು. ಸೋಮವಾರ ಮಧ್ಯಾಹ್ನ ಊಟದ ಬಳಿಕ ಗೀತಾ ಮತ್ತು ಮಕ್ಕಳು ಸಭಾಭವನದತ್ತ ಹಿಂತಿರುಗುತ್ತಿದ್ದಾಗ ಮಂಗಳೂರು ಕಡೆಯಿಂದ ಬರುತ್ತಿದ್ದ ಸ್ವಿಫ್ಟ್ ಕಾರು ಚಾಲಕ ಥಾಮಸ್ ಎಂಬಾತನ ಅತಿವೇಗದ ಚಾಲನೆಯಿಂದಾಗಿ ಜವರಾಯನ ರೂಪದಲ್ಲಿ ಬಂದೆರಗಿತ್ತು. ಮಕ್ಕಳು ಮತ್ತು ಮಹಿಳೆಗೆ ಡಿಕ್ಕಿಯಾದ ಬಳಿಕ ಕಾರು, ಅಲ್ಲಿಯೇ ನಿಲ್ಲಿಸಿದ್ದ ಉಬೈದ್ ಎಂಬವರ ಎಸ್ – ಕ್ರಾಸ್ ಕಾರಿಗೆ ಡಿಕ್ಕಿಯಾಗಿತ್ತು. ಡಿಕ್ಕಿಯ ರಭಸಕ್ಕೆ ಎಸ್-ಕ್ರಾಸ್ ಕಾರಿನ ಹಿಂಬದಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರು ಚಾಲಕನ ಧಾವಂತ ಮತ್ತು ಅತಿವೇಗದ ನಿರ್ಲಕ್ಷ್ಯ ಚಾಲನೆಯಿಂದಾಗಿ ಇಬ್ಬರು ದುರಂತ ಸಾವು ಕಂಡಿದ್ದಾರೆ.
In the accident which occurred in Puttur, Darbe highway two pedestrians a girl student and a woman have lost their lives.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm