ಬ್ರೇಕಿಂಗ್ ನ್ಯೂಸ್
03-11-20 12:52 pm Mangalore Correspondent ಕ್ರೈಂ
ಪುತ್ತೂರು, ನವೆಂಬರ್ 03: ಪುತ್ತೂರು ಪೇಟೆಯ ದರ್ಬೆಯಲ್ಲಿ ಸೋಮವಾರ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆಯೂ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮೂಲತಃ ಉಪ್ಪಿನಂಗಡಿ ನಿವಾಸಿ, ಸದ್ಯ ಪುತ್ತೂರಿನ ದರ್ಬೆಯಲ್ಲಿ ವಾಸವಿದ್ದ ಅಚ್ಚುತ್ತ ಶೆಟ್ಟಿ ಎಂಬವರ ಪತ್ನಿ ಗೀತಾ ಶೆಟ್ಟಿ (38) ಮೃತರು. ಗೀತಾ ತನ್ನ ಜೊತೆಗಿದ್ದ 9 ವರ್ಷದ ಸ್ವಾತಿ ಹಾಗೂ ಆರು ವರ್ಷದ ಅನನ್ಯ ಜೊತೆಗೆ ರಸ್ತೆ ದಾಟುತ್ತಿದ್ದರು. ಈ ವೇಳೆ, ಯಮರೂಪಿಯಾಗಿ ಧಾವಿಸಿದ್ದ ಸ್ವಿಫ್ಟ್ ಕಾರು ಇವರಿಗೆ ಡಿಕ್ಕಿಯಾಗಿದೆ. ಸ್ವಾತಿ ಸ್ಥಳದಲ್ಲೇ ಸಾವನ್ನಪ್ಪಿದರೆ, ಗಂಭೀರ ಗಾಯಗೊಂಡಿದ್ದ ಇನ್ನೊಬ್ಬಳು ಬಾಲಕಿ ಮತ್ತು ಮಹಿಳೆಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.


ಸ್ವಾತಿ ಮತ್ತು ಅನನ್ಯ, ದರ್ಬೆಯ ದುಗ್ಗಮ್ಮ ದೇರಣ್ಣ ಶೆಟ್ಟಿ ಬಂಟರ ಭವನದಲ್ಲಿ ಕೆಲಸಕ್ಕಿದ್ದ ಕೂಲಿ ಕೆಲಸ ಮಾಡುತ್ತಿದ್ದ ದಂಪತಿಯ ಪುತ್ರಿಯರಾಗಿದ್ದರು. ಗೀತಾ ಶೆಟ್ಟಿಯ ಮನೆಯೂ ಪಕ್ಕದಲ್ಲೇ ಇದ್ದುದರಿಂದ ಮಕ್ಕಳನ್ನು ಗೀತಾರ ಬಳಿ ಬಿಟ್ಟು ದಂಪತಿ ಹೊರಗೆ ಹೋಗಿದ್ದರು. ಸೋಮವಾರ ಮಧ್ಯಾಹ್ನ ಊಟದ ಬಳಿಕ ಗೀತಾ ಮತ್ತು ಮಕ್ಕಳು ಸಭಾಭವನದತ್ತ ಹಿಂತಿರುಗುತ್ತಿದ್ದಾಗ ಮಂಗಳೂರು ಕಡೆಯಿಂದ ಬರುತ್ತಿದ್ದ ಸ್ವಿಫ್ಟ್ ಕಾರು ಚಾಲಕ ಥಾಮಸ್ ಎಂಬಾತನ ಅತಿವೇಗದ ಚಾಲನೆಯಿಂದಾಗಿ ಜವರಾಯನ ರೂಪದಲ್ಲಿ ಬಂದೆರಗಿತ್ತು. ಮಕ್ಕಳು ಮತ್ತು ಮಹಿಳೆಗೆ ಡಿಕ್ಕಿಯಾದ ಬಳಿಕ ಕಾರು, ಅಲ್ಲಿಯೇ ನಿಲ್ಲಿಸಿದ್ದ ಉಬೈದ್ ಎಂಬವರ ಎಸ್ – ಕ್ರಾಸ್ ಕಾರಿಗೆ ಡಿಕ್ಕಿಯಾಗಿತ್ತು. ಡಿಕ್ಕಿಯ ರಭಸಕ್ಕೆ ಎಸ್-ಕ್ರಾಸ್ ಕಾರಿನ ಹಿಂಬದಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರು ಚಾಲಕನ ಧಾವಂತ ಮತ್ತು ಅತಿವೇಗದ ನಿರ್ಲಕ್ಷ್ಯ ಚಾಲನೆಯಿಂದಾಗಿ ಇಬ್ಬರು ದುರಂತ ಸಾವು ಕಂಡಿದ್ದಾರೆ.
In the accident which occurred in Puttur, Darbe highway two pedestrians a girl student and a woman have lost their lives.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 12:26 pm
HK News Staffer
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am