ಬ್ರೇಕಿಂಗ್ ನ್ಯೂಸ್
07-07-23 11:00 pm HK News Desk ಕ್ರೈಂ
ಭೋಪಾಲ್, ಜು. 07: ಇಬ್ಬರು ದಲಿತ ಯುವಕರಿಗೆ ಬಲವಂತವಾಗಿ ಮಲ ತಿನ್ನಿಸಿ ಹೀನ ಕೃತ್ಯ ಎಸಗಿದ್ದ ಆರೋಪದ ಮೇಲೆ ಮಧ್ಯಪ್ರದೇಶದ ಶಿವಪುರಿ ಆಡಳಿತವು ಒಂದೇ ಕುಟುಂಬದ ಏಳು ಸದಸ್ಯರನ್ನು ಬಂಧಿಸಿದೆ. ಇದಲ್ಲದೆ ಆರೋಪಿಗಳ ಮನೆಗಳನ್ನು ಕೆಡವಿದೆ.
ದಲಿತ ಯುವಕರು ಆರೋಪಿಗಳ ಮನೆಯ ಯುವತಿಯೊಂದಿಗೆ ಮಾತನಾಡ ಕಾರಣ ಅಮಾನವೀಯ ಕೃತ್ಯ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ
ಜೂನ್ 30 ರಂದು ಶಿವಪುರಿ ಜಿಲ್ಲೆಯ ವರ್ಖಾಡಿ ಗ್ರಾಮದಲ್ಲಿ ದಲಿತ ವ್ಯಕ್ತಿಯ ಮೇಲೆ ದೌರ್ಜನ್ಯ ನಡೆದಿತ್ತು, ಆದರೆ ವಿಡಿಯೋ ವೈರಲ್ ಆದ ನಂತರ ಘಟನೆ ಬೆಳಕಿಗೆ ಬಂದಿದೆ. ಶಿವಪುರಿ ಪೊಲೀಸ್ ಅಧೀಕ್ಷಕ (ಎಸ್ಪಿ) ರಘುವಂಶ್ ಸಿಂಗ್ ಭಡೋರಿಯಾ ಪ್ರಕಾರ, ರಾಜ್ಯದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರ ನಿರ್ದೇಶನದ ಮೇರೆಗೆ ಕುಟುಂಬದ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣದಲ್ಲಿ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್ಎಸ್ಎ) ಯನ್ನು ಹಾಕಲು ಆದೇಶಿಸಿದ್ದಾರೆ.
"23 ಮತ್ತು 24 ವರ್ಷದ ಇಬ್ಬರು ಯುವಕರು ಆರೋಪಿಯ ಕುಟುಂಬದ 26 ವರ್ಷದ ಯುವತಿಯೊಂದಿಗೆ ಫೋನ್ನಲ್ಲಿ ಮಾತನಾಡುತ್ತಿದ್ದರು. ಈ ವಿಷಯ ತಿಳಿದ ಮನೆಯವರು ಯುವತಿಯನ್ನು ವರ್ಖಾಡಿ ಗ್ರಾಮದಲ್ಲಿರುವ ಇಬ್ಬರನ್ನು ತಮ್ಮ ಮನೆಗೆ ಕರೆ ತರುವಂತೆ ತಿಳಿಸಿದ್ದಾರೆ. ಜೂನ್ 30 ರಂದು ಇಬ್ಬರು ಬಂದಾಗ ಮನೆಯವರು ಅಮಾನುಷವಾಗಿ ಥಳಿಸಿದ್ದಾರೆ. ಆರೋಪಿಗಳು ದಲಿತರ ಮುಖಕ್ಕೆ ಕಪ್ಪು ಬಣ್ಣ ಬಳಿದು, ಮಲವನ್ನು ತಿನ್ನುವಂತೆ ಒತ್ತಾಯಿಸಿದ್ದಾರೆ. ಅವರಿಗೆ ಚಪ್ಪಲಿ ಹಾರ ಹಾಕಿ ಗ್ರಾಮದಲ್ಲಿ ಮೆರವಣಿಗೆ ಮಾಡಿದ್ದಾರೆ" ಎಂದು ಎಸ್ಪಿ ರಘುವಂಶ್ ಸಿಂಗ್ ಭಡೋರಿಯಾ ಹೇಳಿದ್ದಾರೆ.
ಆದರೆ ಮಹಿಳೆಗೆ ಕಿರುಕುಳ ನೀಡಿದ್ದಕ್ಕಾಗಿ ಮತ್ತು ಅನುಚಿತವಾಗಿ ಸ್ಪರ್ಶಿಸಿದ್ದಕ್ಕಾಗಿ ಇಬ್ಬರು ಯುವಕರನ್ನು ಥಳಿಸಿದ್ದಾರೆ ಎಂದು ಕುಟುಂಬದವರು ಹೇಳಿದ್ದಾರೆ. ತನಿಖೆಯ ಸಂದರ್ಭದಲ್ಲಿ ಕುಟುಂಬದವರ ಹೇಳಿಕೆಗಳು ಸುಳ್ಳು ಎಂದು ಕಂಡುಬಂದಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ. ಆರೋಪಿಗಳು ತಮ್ಮನ್ನು ಲೈಂಗಿಕ ಕಿರುಕುಳದ ಸುಳ್ಳು ಪ್ರಕರಣದಲ್ಲಿ ಸಿಲುಕಿಸಲು ಪ್ರಯತ್ನಿಸಿದ್ದಾರೆ ಎಂದು ಸಂತ್ರಸ್ತರು ಆರೋಪಿಸಿದ್ದಾರೆ.
ಆರೋಪಿಗಳಾದ ಅಜ್ಮತ್ ಖಾನ್, ವಕೀಲ್ ಖಾನ್, ಆರಿಫ್ ಖಾನ್, ಶಾಹಿದ್ ಖಾನ್, ಇಸ್ಲಾಂ ಖಾನ್, ರಹೀಶಾ ಬಾನೋ ಮತ್ತು ಸೈನಾ ಬಾನೊ ಅವರನ್ನು ಬುಧವಾರ ಬಂಧಿಸಿ ಗುರುವಾರ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಜೈಲಿಗೆ ಕಳುಹಿಸಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ.
Two men belonging to the Dalit community were caught and thrashed by villagers in Madhya Pradesh’s Shivpuri district after a few Muslim women accused them of harassment, police said.
12-08-26 06:57 pm
HK News Staffer
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
12-08-26 11:18 pm
HK News Staffer
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm