ಬ್ರೇಕಿಂಗ್ ನ್ಯೂಸ್
07-07-23 11:12 pm Mangalore Correspondent ಕ್ರೈಂ
ಮಂಗಳೂರು, ಜುಲೈ 7: ಆನ್ಲೈನ್ ಪಾರ್ಟ್ ಟೈಮ್ ಜಾಬ್ ಕೊಡಿಸುತ್ತೇವೆಂದು ನಂಬಿಸಿ ವ್ಯಕ್ತಿಯೊಬ್ಬರಿಗೆ 1,65,800 ರೂ.ಗಳನ್ನು ಮೋಸದಿಂದ ಪೀಕಿಸಿಕೊಂಡು ವಂಚನೆ ಎಸಗಿರುವ ಬಗ್ಗೆ ಮಂಗಳೂರು ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಂಗಳೂರು ನಿವಾಸಿ ವ್ಯಕ್ತಿಗೆ ಅಪರಿಚಿತ ವ್ಯಕ್ತಿ ಜುಲೈ 5ರಂದು ವಾಟ್ಸಪ್ ನಂಬರ್ 1(626)4772787 ರಿ೦ದ ಆನ್ ಲೈನ್ ಪಾರ್ಟ್ ಟೈಮ್ ಜಾಬ್ ಬಗ್ಗೆ ಮೆಸೇಜ್ ಕಳುಹಿಸಿದ್ದ. ಇದನ್ನು ನಂಬಿದ ದೂರುದಾರರು ಆನ್ ಲೈನ್ ಕೆಲಸದ ಉದ್ದೇಶದಿಂದ ಸಂದೇಶಕ್ಕೆ ಉತ್ತರಿಸಿದ್ದಾರೆ. ಅಪರಿಚಿತರು ಗೂಗಲ್ ಮ್ಯಾಪ್ ಮೂಲಕ ಕೆಲಸ ಮಾಡುವ ಬಗ್ಗೆ J-The New Generation ಎಂಬ ಟೆಲಿಗ್ರಾಂ ಗ್ರೂಪ್ ಗೆ ಸೇರಿಸಿ ಅದರಲ್ಲಿ ಪ್ರಿಪೇಡ್ ಟಾಸ್ಕ್ ಆಡಬೇಕೆಂದು ತಿಳಿಸಿದ್ದರು.
ಮೊದಲಿಗೆ 150 ರೂ.ಗಳನ್ನು ದೂರುದಾರರ ಬ್ಯಾಂಕ್ ಖಾತೆಗೆ ವರ್ಗಾಯಿಸಿ ನಂತರ ಅವರಿಗೆ ಹಣ ಹೂಡಿಕೆ ಮಾಡಲು ತಿಳಿಸಿದ್ದರು. ದೂರುದಾರರು ಹೂಡಿಕೆ ಮಾಡಿದ ಕೆಲವು ಮೊತ್ತಗಳಿಗೆ ಹೆಚ್ಚಿನ ಹಣವನ್ನು ಅವರ ಖಾತೆಗೆ ವರ್ಗಾಯಿಸುತ್ತಿದ್ದರು. ಇದನ್ನು ಸತ್ಯವೆಂದು ನಂಬಿದ ದೂರುದಾರರು ಹೆಚ್ಚಿನ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುವುದೆಂದು ನಂಬಿ ತನ್ನ ಬ್ಯಾಂಕ್ ಖಾತೆಯಿಂದ ಅಪರಿಚಿತ ಕಳುಹಿಸಿಕೊಟ್ಟ ವಿವಿಧ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು 1,65,800/-ರೂ.ಗಳನ್ನು ವರ್ಗಾಯಿಸಿದ್ದರು.
ಅದರ ಬದಲಿಗೆ, ಹಣ ಪಾವತಿಸಲು ಹೇಳಿದಾಗ ಅಪರಿಚಿತ ವ್ಯಕ್ತಿ ಹಣ ಪಾವತಿಸಲು ನಿರಾಕರಿಸಿದ್ದ. ಇದರಿಂದ ಮೋಸದ ಅರಿವಾಗಿ ಹಣ ಕಳಕೊಂಡ ವ್ಯಕ್ತಿ ಆನ್ ಲೈನ್ ವಂಚನೆ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ.
A case has been registered at The Mangaluru Cyber Police Station against a man for allegedly duping a man of Rs 65,800, on the pretext of providing him an online part-time job.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 06:59 pm
Mangalore Correspondent
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm