ಬ್ರೇಕಿಂಗ್ ನ್ಯೂಸ್
06-08-20 03:54 am Headline Karnataka News Network ಕ್ರೈಂ
ಮುಂಬೈ, ಆಗಸ್ಟ್ 6: ಬಾಲಿವುಡ್ ಅಂಗಳದಲ್ಲಿ ಬಿರುಗಾಳಿ ಎಬ್ಬಿಸಿರುವ ನಟ ಸುಶಾಂತ್ ರಜಪೂತ್ ಸಾವಿನ ಪ್ರಕರಣದ ತನಿಖೆಯನ್ನು ಕೇಂದ್ರ ಸರಕಾರ ಸಿಬಿಐಗೆ ವಹಿಸಿದೆ.
ಸಿಬಿಐಗೆ ಒಪ್ಪಿಸುವಂತೆ ಬಿಹಾರ ರಾಜ್ಯ ಸರಕಾರ ಕೇಂದ್ರಕ್ಕೆ ಮನವಿ ಮಾಡಿತ್ತು. ಇದೇ ವೇಳೆ, ಸುಶಾಂತ್ ಪ್ರಕರಣದಲ್ಲಿ ಮುಂಬೈ ಪೊಲೀಸರ ತನಿಖೆಯ ಬಗ್ಗೆ ಅಸಮಾಧಾನಗೊಂಡಿದ್ದ ಸುಶಾಂತ್ ಕುಟುಂಬಸ್ಥರು ಸುಪ್ರೀಂ ಕೋರ್ಟಿಗೂ ಅರ್ಜಿ ಸಲ್ಲಿಸಿದ್ದರು. ಈ ಕುರಿತ ವಿಚಾರಣೆ ಸಂದರ್ಭದಲ್ಲಿ ಕೇಂದ್ರ ಸರಕಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವುದಾಗಿ ಹೇಳಿಕೆ ನೀಡಿದೆ.
ಈಗಾಗ್ಲೇ ಪ್ರಕರಣದ ತನಿಖೆ ನಡೆಸುತ್ತಿರುವ ಮುಂಬೈ ಪೊಲೀಸರು ಸುಶಾಂತ್ ಸಂಬಂಧಿಸಿ 56 ಮಂದಿಯ ಹೇಳಿಕೆ ದಾಖಲಿಸಿದ್ದಾರೆ. ಅಲ್ಲದೆ, ಅತ್ತ ಬಿಹಾರ ಪೊಲೀಸರು ಕೂಡ ಮುಂಬೈಗೆ ಬಂದು ತನಿಖೆ ನಡೆಸುತ್ತಿದ್ದಾರೆ. ಆದರೆ ಬಿಹಾರ ಪೊಲೀಸರಿಗೆ ಮಹಾರಾಷ್ಟ್ರ ಸರಕಾರ ಮತ್ತು ಅಲ್ಲಿನ ಪೊಲೀಸರು ಸಹಕಾರ ನೀಡದೆ ಸತಾಯಿಸುತ್ತಿರುವ ಬಗ್ಗೆ ಆರೋಪಗಳು ಕೇಳಿಬಂದಿದ್ದವು. ಇದೇ ವೇಳೆ, ಪ್ರಕರಣದಲ್ಲಿ ಸುಶಾಂತ್ ಖಾತೆಯಲ್ಲಿದ್ದ 15 ಕೋಟಿ ಹಣ ವರ್ಗಾವಣೆ ಆಗಿರುವ ವಿಚಾರದಲ್ಲಿ ಆತನ ಪ್ರೇಯಸಿ ರಿಯಾ ಚಕ್ರವರ್ತಿ ವಿರುದ್ಧ ದಾಖಲಾಗಿರುವ ಕೇಸಿಗೆ ಸಂಬಂಧಿಸಿ ಇಡಿ ವಿಚಾರಣೆ ಆರಂಭಿಸಿದ್ದು ರಿಯಾಗೆ ಸಮನ್ಸ್ ನೀಡಿದೆ. ಆಗಸ್ಟ್ 7 ರಂದು ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿದೆ. ಬಿಹಾರ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿರುವ ರಿಯಾ ಈಗ ಇಡಿ ಅಧಿಕಾರಿಗಳ ಬಲೆಗೆ ಸಿಲುಕಲಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm