ಬ್ರೇಕಿಂಗ್ ನ್ಯೂಸ್
03-11-20 03:47 pm Mangalore Correspondent ಕ್ರೈಂ
ಬಂಟ್ವಾಳ, ನವೆಂಬರ್ 03: ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬೆಳ್ತಂಗಡಿ ಮೂಲದ ಪ್ರತೀಕ್ ಮತ್ತು ಮಂಗಳೂರಿನ ಜಯೇಶ್ ಯಾನೆ ಸಚ್ಚು ಬಂಧಿತರು. ಹತ್ಯೆ ಪ್ರಕರಣದಲ್ಲಿ ಇವರು, ಪ್ರಮುಖ ಆರೋಪಿಗಳು ಬಚಾವಾಗಲು ಸಹಕರಿಸಿದ ಆರೋಪ ಎದುರಿಸುತ್ತಿದ್ದಾರೆ. ಸತೀಶ್ ಕುಲಾಲ್ ಮತ್ತು ಗಿರೀಶನಿಗೆ ಕೊಲೆಗೈದ ಬಳಿಕ ಬೆಳ್ತಂಗಡಿಯಲ್ಲಿ ಉಳಿದುಕೊಳ್ಳಲು ಮತ್ತು ವಾಹನದ ವ್ಯವಸ್ಥೆಯನ್ನು ಪ್ರತೀಕ್ ಮಾಡಿದ್ದು ಅದಕ್ಕಾಗಿ 2.5 ಲಕ್ಷ ರೂ. ಹಣ ಪಡೆದಿದ್ದ. ಇನ್ನು ಮಂಗಳೂರಿನ ಕೊಂಚಾಡಿ ನಿವಾಸಿ ಜಯೇಶ್, ಪ್ರಮುಖ ಆರೋಪಿ ಆಕಾಶಭವನ್ ಶರಣ್ ಅಣತಿಯಂತೆ ಸುಪಾರಿ ಹಣವನ್ನು ಆರೋಪಿ ಪ್ರದೀಪನಿಂದ ಪಡೆದು ಕೊಲೆಗೆ ವ್ಯವಸ್ಥೆ ಮಾಡಿದ್ದ ಎಂದು ವಿಚಾರಣೆಯಲ್ಲಿ ತಿಳಿದುಬಂದಿದೆ.
ಪ್ರತೀಕ್ ಕೋಟ್ಯಾನ್ ಈ ಹಿಂದೆ ಮಂಗಳೂರು ಮತ್ತು ಉಡುಪಿಯಲ್ಲಿ ಸ್ಥಳೀಯ ಸುದ್ದಿ ವಾಹಿನಿಗಳಲ್ಲಿ ಕ್ಯಾಮರಾಮನ್ ಆಗಿ ಕೆಲಸ ಮಾಡಿದ್ದು ಬಳಿಕ ಬೆಳ್ತಂಗಡಿಯಲ್ಲಿ ಮಾಧ್ಯಮದ ವ್ಯಕ್ತಿಯೆಂದು ಹೇಳಿ ಓಡಾಡಿಕೊಂಡಿದ್ದ. ಇತ್ತೀಚೆಗೆ ಅಕ್ರಮ ಕಲ್ಲು ಕೋರೆ ಪ್ರಕರಣದಲ್ಲೂ ಬಂಧಿಸಲ್ಪಟ್ಟಿದ್ದ. ಜಯೇಶ್, ಮಂಗಳೂರಿನಲ್ಲಿ ಶ್ರೀರಾಮ ಸೇನೆ ಸಂಘಟನೆಯಲ್ಲಿ ಗುರುತಿಸಿದ್ದು ಮಂಗಳೂರು ನಗರ ಘಟಕದ ಅಧ್ಯಕ್ಷನಾಗಿದ್ದ. ಕೆಲವು ಕಾರ್ಯಕ್ರಮಗಳಲ್ಲಿ ಮತ್ತು ಪೋಸ್ಟರ್ ಗಳಲ್ಲಿ ಆತನ ಫೋಟೊ ಕಾಣಿಸಿಕೊಂಡಿತ್ತು.
ಈಗಾಗ್ಲೇ ಬಂಟ್ವಾಳ ಪೊಲೀಸರು ಪ್ರಕರಣ ಸಂಬಂಧಿಸಿ 9 ಮಂದಿಯನ್ನು ಬಂಧಿಸಿತ್ತು. ಇವರಿಬ್ಬರನ್ನು ನಾಲ್ಕು ದಿನಗಳ ಹಿಂದೆಯೇ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದರು. ಈಗ ಅಧಿಕೃತವಾಗಿ ಬಂಧಿಸಿದ್ದು ಒಟ್ಟು ಬಂಧಿತರ ಸಂಖ್ಯೆ 11 ಕ್ಕೇರಿದೆ.
In connection to the Murder of Surendra Bantwal, the police have arrested two more persons. The arrested are identified as Pratheek Kotyan from Belthanagady and Jayesh Sachu from Mangalore. Total number of arrest has raised to 11.
02-05-25 01:40 pm
Bangalore Correspondent
Dinesh Gundu Rao, Suhas Shetty Murder: ಸುಹಾಸ್...
02-05-25 10:52 am
Jan Dhan Scheme: ಜನಧನ್ ಖಾತೆ ಬಗ್ಗೆ ಜನರ ನಿರಾಸಕ್...
01-05-25 01:48 pm
Dk Suresh, Pavitra, wife Video: ಡಿ.ಕೆ ಬ್ರದರ್...
01-05-25 01:08 pm
MA Saleem, DGP-IGP, Prashanth Thakur, Police:...
30-04-25 05:08 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
02-05-25 03:10 pm
Mangalore Correspondent
Udupi crime, Attempt, Suhas Shetty Murder: ಉಡ...
02-05-25 12:44 pm
Suhas Shetty Murder, Liquor Ban: ಸುಹಾಸ್ ಶೆಟ್ಟ...
02-05-25 12:23 pm
Suhas Shetty Murder, Bajpe, Mangalore: ಟಾರ್ಗೆ...
02-05-25 03:52 am
Suhas Shetty murder, Mangalore Bandh: ಸುಹಾಸ್...
02-05-25 03:29 am
02-05-25 12:00 pm
Mangalore Correspondent
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm