ಬ್ರೇಕಿಂಗ್ ನ್ಯೂಸ್
13-07-23 10:46 pm HK News Desk ಕ್ರೈಂ
ಹಾಸನ, ಜುಲೈ 13: ವರದಕ್ಷಿಣೆಗಾಗಿ ಕಿರುಕುಳ ಕೊಟ್ಟು ಪತ್ನಿಯನ್ನು ಪತಿಯೇ ಕೊಲೆಗೈದ ಘಟನೆ ಹಾಸನ ತಾಲೂಕಿನ ಯಡಿಯೂರು ಗ್ರಾಮದಲ್ಲಿ ನಡೆದಿದೆ. ಅನಿತಾ (27) ಕೊಲೆಯಾದ ನತದೃಷ್ಟ ಮಹಿಳೆ.
ಏಳು ವರ್ಷದ ಹಿಂದೆ ಬೇಲೂರು ತಾಲೂಕಿನ ಅರೇಹಳ್ಳಿ ಹೋಬಳಿಯ ಅನಿತಾಳನ್ನು ಯಡಿಯೂರು ಗ್ರಾಮದ ಯೋಗೇಶ್ಗೆ ಮದುವೆ ಮಾಡಲಾಗಿತ್ತು. ದಂಪತಿಗೆ ಇಬ್ಬರು ಮಕ್ಕಳಿದ್ದರು. ಒಬ್ಬ ಮಗ ಕೆಲವು ದಿನಗಳ ಹಿಂದೆ ಅನಾರೋಗ್ಯದಿಂದ ಸಾವನ್ನಪ್ಪಿದ್ದ. ಈ ನಡುವೆ, ಮತ್ತಷ್ಟು ವರದಕ್ಷಿಣೆ ತರುವಂತೆ ಆಗಾಗ್ಗೆ ಪತ್ನಿ ಅನಿತಾಗೆ ಯೋಗೇಶ್ ಕಿರುಕುಳ ನೀಡುತ್ತಿದ್ದ. ಹಲವು ಬಾರಿ ರಾಜಿ ಸಂಧಾನ ಮಾಡಿದ್ದಲ್ಲದೆ, ಎರಡು ಬಾರಿ ಪೊಲೀಸ್ ಠಾಣೆಗೂ ದೂರು ನೀಡಿದ್ದರೂ, ಯೋಗೇಶ್ ಕಿರುಕುಳ ಮುಂದುವರಿಸಿದ್ದ.
ಕಿರುಕುಳ ಕಾರಣಕ್ಕೆ ಅನಿತಾ ತವರು ಮನೆಯಲ್ಲೇ ಹೆಚ್ಚಾಗಿ ಇರುತ್ತಿದ್ದಳು. ಇತ್ತೀಚೆಗೆ ರಾಜಿ ಸಂಧಾನ ಮಾಡಿ ಪತ್ನಿಯನ್ನು ಮನೆಗೆ ಕರೆದುಕೊಂಡು ಬಂದಿದ್ದ ಯೋಗೀಶ್, ನಿನ್ನೆ ಮತ್ತೆ ಜಗಳ ತೆಗೆದು ಮನ ಬಂದಂತೆ ಹಲ್ಲೆ ಮಾಡಿದ್ದ ಎನ್ನಲಾಗಿದೆ. ಇದರಿಂದ ನೊಂದ ಅನಿತಾ ಹೆತ್ತವರಿಗೆ ಫೋನ್ ಮಾಡಿ ಮತ್ತೆ ಜಗಳ ತೆಗೆದು ಹಲ್ಲೆ ಮಾಡುತ್ತಿದ್ದಾನೆ, ಬನ್ನಿ ಎಂದಿದ್ದಳು. ಅದರಂತೆ ಪೋಷಕರು ಯಡಿಯೂರಿಗೆ ಬರುವಷ್ಟರಲ್ಲಿ ಅನಿತಾ ಕೊನೆಯುಸಿರೆಳೆದಿದ್ದಳು ಎಂದು ದೂರಲಾಗಿದೆ. ಮಗಳನ್ನು ಯೋಗೇಶನೇ ಕೊಲೆ ಮಾಡಿದ್ದು, ಕಠಿಣ ಶಿಕ್ಷೆಗೆ ಗುರಿ ಪಡಿಸುವಂತೆ ಮೃತಳ ಪೋಷಕರು ಒತ್ತಾಯಿಸಿದ್ದಾರೆ.
Hassan Dowry case, husband kills wife. The deceased has been identified as Anitha (27).
21-06-25 02:48 pm
Bengaluru Staff
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
21-06-25 08:50 pm
HK News Desk
Couple Caught at Jaipur Hotel, Video: ಹೋಟೆಲ್...
20-06-25 10:19 pm
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
21-06-25 03:56 pm
Giridhar Shetty, Mangaluru
Fake NEET Marksheet, Udupi Topper; ನಕಲಿ ನೀಟ್...
21-06-25 01:59 pm
Sakleshpur, Mangalore Bangalore Train; ಸಕಲೇಶಪ...
21-06-25 12:03 pm
Kudupu Murder, Sajith Shetty Post, Sudheer Ku...
20-06-25 11:04 pm
Mangalore Forest Guard, Someshwara Beach, U T...
20-06-25 09:54 pm
21-06-25 12:21 pm
Mangaluru Correspondent
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm