ಬ್ರೇಕಿಂಗ್ ನ್ಯೂಸ್
18-07-23 03:23 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 18: ಕುಡಿತದ ಮತ್ತಿನಲ್ಲಿ ಮಗನೇ ತನ್ನ ತಂದೆ, ತಾಯಿಯನ್ನೇ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ನಗರದ ಬ್ಯಾಟರಾಯನಪುರದಲ್ಲಿ ಬೆಳಕಿಗೆ ಬಂದಿದೆ. ತಾಯಿ ಶಾಂತ (60) ಮತ್ತು ತಂದೆ ಭಾಸ್ಕರ್ (63) ಕೊಲೆಯಾದ ದುರ್ದೈವಿಗಳು. ಶರತ್ (26) ಎಂಬಾತ ಕೃತ್ಯ ಎಸಗಿದ್ದಾನೆ.
ಶರತ್ ಕುಡಿತದ ಚಟ ಅಂಟಿಸಿಕೊಂಡಿದ್ದು ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದ. ಸೋಮವಾರ ಸಂಜೆ ಶರತ್ ತಂದೆ, ತಾಯಿ ಮೇಲೆ ಎರಗಿ ಏಕಾಏಕಿ ರಾಡ್ನಿಂದ ಹೊಡೆದಿದ್ದಾನೆ. ಗಂಭೀರ ಗಾಯಗೊಂಡ ಇಬ್ಬರು ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಹಿಂದೆ ಕೂಡ ಮನೆಯಲ್ಲಿ ಶರತ್ ಗಲಾಟೆ ಮಾಡಿ ಅಪ್ಪ ಅಮ್ಮನಿಗೆ ಹೊಡೆಯುವುದು ಮಾಡುತ್ತಿದ್ದ ಎನ್ನಲಾಗಿದೆ.

ಶಾಂತ ಹಾಗೂ ಭಾಸ್ಕರ್ ದಂಪತಿ ಮಂಗಳೂರು ಮೂಲದವರಾಗಿದ್ದು, 12 ವರ್ಷಗಳ ಹಿಂದೆ ಬೆಂಗಳೂರಿನಲ್ಲಿಯೇ ನೆಲಸಿದ್ದರು. ಶಾಂತ ಕೇಂದ್ರ ಸರ್ಕಾರದ ಸಿಬ್ಬಂದಿ ಆಗಿದ್ದು ಇತ್ತೀಚೆಗಷ್ಟೇ ನಿವೃತ್ತಿ ಹೊಂದಿದ್ದರು. ತಂದೆ ಭಾಸ್ಕರ್ ಖಾಸಗಿ ಕ್ಯಾಂಟೀನ್ ಒಂದರಲ್ಲಿ ಕ್ಯಾಶಿಯರ್ ಆಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದು, ಆರೋಪಿ ಶರತ್ ಕಿರಿಯ ಮಗ. ಶರತ್ ಕೆಲವೊಮ್ಮೆ ಸೈಕೋ ರೀತಿ ವರ್ತಿಸುತ್ತಿದ್ದ. ನಿನ್ನೆ ಸೋಮವಾರ ಸಂಜೆ ಕುಡಿದು ಮನೆಯಲ್ಲಿ ಗಲಾಟೆ ಮಾಡಿದ್ದಾನೆ. ಇದನ್ನು ಪ್ರಶ್ನಿಸಿದ್ದಕ್ಕೆ ಅಪ್ಪ-ಅಮ್ಮನಿಗೆ ರಾಡ್ನಿಂದ ಹೊಡೆದು ಕೊಂದಿದ್ದಾನೆ. ಬಳಿಕ ಮನೆ ಡೋರ್ ಲಾಕ್ ಮಾಡಿ ಪರಾರಿ ಆಗಿದ್ದಾನೆ.

ದಂಪತಿಯ ದೊಡ್ಡ ಮಗ ಇಂದು ಬೆಳಗ್ಗೆ ತಂದೆ-ತಾಯಿಗೆ ಕರೆ ಮಾಡಿದ್ದು ಕರೆ ಸ್ವೀಕರಿಸದ್ದರಿಂದ ಅನುಮಾನಗೊಂಡು ಪಕ್ಕದ ಮನೆಯವರಿಗೆ ಕರೆ ಮಾಡಿ ತಿಳಿಸಿದ್ದಾನೆ. ಈ ವೇಳೆ ದಂಪತಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ತಿಳಿದು ಬಂದಿದೆ.
ಸ್ಥಳೀಯರು ವಿಷಯವನ್ನು ಪೊಲೀಸರಿಗೆ ತಿಳಿಸಿದ್ದಾರೆ. ಸ್ಥಳಕ್ಕೆ ಆಗ್ನೇಯ ವಿಭಾಗ ಡಿಸಿಪಿ ಲಕ್ಷ್ಮೀ ಪ್ರಸಾದ್ ದೌಡಾಯಿಸಿದ್ದು, ಇಬ್ಬರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ನಾಪತ್ತೆ ಆಗಿರುವ ಶರತ್ಗಾಗಿ ಹುಡುಕಾಟ ನಡೆಸಿದ್ದಾರೆ.
Drunkard psycho son kills both father and mother native of Mangalore in Bangalore using the rod. The deceased has been identified as Bhaskar and Shantha. Murder son Sharath is said to be absconding.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm