ಬ್ರೇಕಿಂಗ್ ನ್ಯೂಸ್
18-07-23 03:23 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 18: ಕುಡಿತದ ಮತ್ತಿನಲ್ಲಿ ಮಗನೇ ತನ್ನ ತಂದೆ, ತಾಯಿಯನ್ನೇ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ನಗರದ ಬ್ಯಾಟರಾಯನಪುರದಲ್ಲಿ ಬೆಳಕಿಗೆ ಬಂದಿದೆ. ತಾಯಿ ಶಾಂತ (60) ಮತ್ತು ತಂದೆ ಭಾಸ್ಕರ್ (63) ಕೊಲೆಯಾದ ದುರ್ದೈವಿಗಳು. ಶರತ್ (26) ಎಂಬಾತ ಕೃತ್ಯ ಎಸಗಿದ್ದಾನೆ.
ಶರತ್ ಕುಡಿತದ ಚಟ ಅಂಟಿಸಿಕೊಂಡಿದ್ದು ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದ. ಸೋಮವಾರ ಸಂಜೆ ಶರತ್ ತಂದೆ, ತಾಯಿ ಮೇಲೆ ಎರಗಿ ಏಕಾಏಕಿ ರಾಡ್ನಿಂದ ಹೊಡೆದಿದ್ದಾನೆ. ಗಂಭೀರ ಗಾಯಗೊಂಡ ಇಬ್ಬರು ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಹಿಂದೆ ಕೂಡ ಮನೆಯಲ್ಲಿ ಶರತ್ ಗಲಾಟೆ ಮಾಡಿ ಅಪ್ಪ ಅಮ್ಮನಿಗೆ ಹೊಡೆಯುವುದು ಮಾಡುತ್ತಿದ್ದ ಎನ್ನಲಾಗಿದೆ.
ಶಾಂತ ಹಾಗೂ ಭಾಸ್ಕರ್ ದಂಪತಿ ಮಂಗಳೂರು ಮೂಲದವರಾಗಿದ್ದು, 12 ವರ್ಷಗಳ ಹಿಂದೆ ಬೆಂಗಳೂರಿನಲ್ಲಿಯೇ ನೆಲಸಿದ್ದರು. ಶಾಂತ ಕೇಂದ್ರ ಸರ್ಕಾರದ ಸಿಬ್ಬಂದಿ ಆಗಿದ್ದು ಇತ್ತೀಚೆಗಷ್ಟೇ ನಿವೃತ್ತಿ ಹೊಂದಿದ್ದರು. ತಂದೆ ಭಾಸ್ಕರ್ ಖಾಸಗಿ ಕ್ಯಾಂಟೀನ್ ಒಂದರಲ್ಲಿ ಕ್ಯಾಶಿಯರ್ ಆಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದು, ಆರೋಪಿ ಶರತ್ ಕಿರಿಯ ಮಗ. ಶರತ್ ಕೆಲವೊಮ್ಮೆ ಸೈಕೋ ರೀತಿ ವರ್ತಿಸುತ್ತಿದ್ದ. ನಿನ್ನೆ ಸೋಮವಾರ ಸಂಜೆ ಕುಡಿದು ಮನೆಯಲ್ಲಿ ಗಲಾಟೆ ಮಾಡಿದ್ದಾನೆ. ಇದನ್ನು ಪ್ರಶ್ನಿಸಿದ್ದಕ್ಕೆ ಅಪ್ಪ-ಅಮ್ಮನಿಗೆ ರಾಡ್ನಿಂದ ಹೊಡೆದು ಕೊಂದಿದ್ದಾನೆ. ಬಳಿಕ ಮನೆ ಡೋರ್ ಲಾಕ್ ಮಾಡಿ ಪರಾರಿ ಆಗಿದ್ದಾನೆ.
ದಂಪತಿಯ ದೊಡ್ಡ ಮಗ ಇಂದು ಬೆಳಗ್ಗೆ ತಂದೆ-ತಾಯಿಗೆ ಕರೆ ಮಾಡಿದ್ದು ಕರೆ ಸ್ವೀಕರಿಸದ್ದರಿಂದ ಅನುಮಾನಗೊಂಡು ಪಕ್ಕದ ಮನೆಯವರಿಗೆ ಕರೆ ಮಾಡಿ ತಿಳಿಸಿದ್ದಾನೆ. ಈ ವೇಳೆ ದಂಪತಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ತಿಳಿದು ಬಂದಿದೆ.
ಸ್ಥಳೀಯರು ವಿಷಯವನ್ನು ಪೊಲೀಸರಿಗೆ ತಿಳಿಸಿದ್ದಾರೆ. ಸ್ಥಳಕ್ಕೆ ಆಗ್ನೇಯ ವಿಭಾಗ ಡಿಸಿಪಿ ಲಕ್ಷ್ಮೀ ಪ್ರಸಾದ್ ದೌಡಾಯಿಸಿದ್ದು, ಇಬ್ಬರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ನಾಪತ್ತೆ ಆಗಿರುವ ಶರತ್ಗಾಗಿ ಹುಡುಕಾಟ ನಡೆಸಿದ್ದಾರೆ.
Drunkard psycho son kills both father and mother native of Mangalore in Bangalore using the rod. The deceased has been identified as Bhaskar and Shantha. Murder son Sharath is said to be absconding.
21-06-25 02:48 pm
Bengaluru Staff
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
20-06-25 10:19 pm
HK News Desk
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
21-06-25 03:56 pm
Giridhar Shetty, Mangaluru
Fake NEET Marksheet, Udupi Topper; ನಕಲಿ ನೀಟ್...
21-06-25 01:59 pm
Sakleshpur, Mangalore Bangalore Train; ಸಕಲೇಶಪ...
21-06-25 12:03 pm
Kudupu Murder, Sajith Shetty Post, Sudheer Ku...
20-06-25 11:04 pm
Mangalore Forest Guard, Someshwara Beach, U T...
20-06-25 09:54 pm
21-06-25 12:21 pm
Mangaluru Correspondent
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm