ಬ್ರೇಕಿಂಗ್ ನ್ಯೂಸ್
21-07-23 07:00 pm Mangalore Correspondent ಕ್ರೈಂ
ಮಂಗಳೂರು, ಜುಲೈ 21: ಮಂಗಳೂರು ನಗರಕ್ಕೆ ಎಂಡಿಎಂಎ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಜಾಲದ ಪ್ರಮುಖ ಆರೋಪಿಗಳಲ್ಲಿ ಒಬ್ಬ ಸೇರಿದಂತೆ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಫರಂಗಿಪೇಟೆಯ ಮೊಹಮ್ಮದ್ ನಿಯಾಜ್ (28), ತಲಪಾಡಿ ಕೆಸಿ ರೋಡಿನ ನಿಶಾದ್ (31), ಮಹಮ್ಮದ್ ರಜೀನ್ (24) ಬಂಧಿತರು. ಕೇರಳದ ಗಡಿಭಾಗ ಉಳ್ಳಾಲ ತಾಲೂಕಿನ ತಲಪಾಡಿ ಗ್ರಾಮದ ಪಿಲಿಕೂರು ಎಂಬಲ್ಲಿ ಸಿಲ್ವರ್ ಮತ್ತು ಕಪ್ಪು ಬಣ್ಣದ ಎರಡು ಸ್ವಿಫ್ಟ್ ಕಾರಿನಲ್ಲಿದ್ದುಕೊಂಡು ಎಂಡಿಎಂಎ ಡ್ರಗ್ಸ್ ಅನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ತಿಳಿದು ಪೊಲೀಸರು ದಾಳಿ ನಡೆಸಿದ್ದರು. ಆರೋಪಿಗಳಿಂದ 9 ಲಕ್ಷ ಮೌಲ್ಯದ 180 ಗ್ರಾಮ್ ಎಂಡಿಎಂಎ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ. ಅಲ್ಲದೆ, ಎರಡು ಮಾರುತಿ ಸ್ವಿಫ್ಟ್ ಕಾರು, ನಾಲ್ಕು ಮೊಬೈಲ್ ಫೋನ್, 22 ಸಾವಿರ ರೂ. ನಗದು, ಒಂದು ಪಿಸ್ತೂಲ್, ಒಂದು ಸಜೀವ ಗುಂಡು, ಎರಡು ಡ್ರಾಗನ್ ಚೂರಿಗಳು, ಡಿಜಿಟಲ್ ತೂಕ ಮಾಪನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಮೂವರು ಡ್ರಗ್ ಕಿಂಗ್ ಪಿನ್ ಗಳಲ್ಲಿ ಒಬ್ಬ
ಆರೋಪಿಗಳ ಪೈಕಿ ಮೊಹಮ್ಮದ್ ನಿಯಾಜ್ ಮಂಗಳೂರು ಮಹಾನಗರಕ್ಕೆ ಎಂಡಿಎಂಎ ಡ್ರಗ್ಸ್ ಪೂರೈಸುವ ಮೂವರು ಕಿಂಗ್ ಪಿನ್ ಗಳ ಪೈಕಿ ಒಬ್ಬನಾಗಿದ್ದು ಈತನ ಬಂಧನಕ್ಕಾಗಿ ಪೊಲೀಸರು ಹಲವು ಸಮಯದಿಂದ ಹೊಂಚು ಹಾಕಿದ್ದರು. ಆದರೆ ಮೊಬೈಲ್ ಫೋನಲ್ಲಿ ವಾಟ್ಸಪ್ ಕರೆ ಮಾತ್ರ ಮಾಡುವುದು, ಒಂದು ಕಡೆಗೆ ಹೋದ ದಿನ ಮತ್ತೆ ಹೋಗದೇ ಇರುವುದು, ಹೀಗೆ ಪೊಲೀಸರು ಬೆನ್ನು ಬಿದ್ದಾಗ ಕೈಗೆ ಸಿಗದೆ ತಲೆಮರೆಸಿಕೊಳ್ಳುತ್ತಿದ್ದ. ಬೆಂಗಳೂರಿನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಹಂಚಿಕೆ ಮಾಡುತ್ತಿದ್ದವರಲ್ಲಿ ಈತನೂ ಒಬ್ಬನಾಗಿದ್ದ.
ಈ ಹಿಂದೆ ಮಂಗಳೂರಿನ ಉರ್ವಾ ಠಾಣೆಯ ಎಎಸ್ಐಗೆ ಚೂರಿಯಿಂದ ಇರಿದು ಹಲ್ಲೆಗೆ ಯತ್ನಿಸಿದ ಪ್ರಕರಣ, ಕೊಣಾಜೆಯಲ್ಲಿ ಕರ್ತವ್ಯ ನಿರತ ಪೊಲೀಸ್ ಸಿಬಂದಿಗೆ ಹಲ್ಲೆ ಪ್ರಕರಣ, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ, ಸೈಬರ್ ಕ್ರೈಂ ಠಾಣೆಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ ಪ್ರಕರಣ, ಉಡುಪಿ ಜಿಲ್ಲೆಯ ಗಂಗೊಳ್ಳಿ ಠಾಣೆಯಲ್ಲಿ ಎರಡು ದರೋಡೆ ಪ್ರಕರಣ, ಮಂಗಳೂರಿನ ಕಂಕನಾಡಿ ನಗರ, ಕೊಣಾಜೆ ಠಾಣೆ ಸೇರಿದಂತೆ ಮೊಹಮ್ಮದ್ ನಿಯಾಜ್ ಹತ್ತು ಪ್ರಕರಣಗಳನ್ನು ಎದುರಿಸುತ್ತಿದ್ದಾನೆ. ಹಲವು ಕೋರ್ಟ್ ವಾರೆಂಟ್ ಗಳಿದ್ದರೂ, ಪೊಲೀಸರ ತಲೆತಪ್ಪಿಸಿಕೊಂಡು ಆಯಕಟ್ಟಿನ ಪೆಡ್ಲರ್ ಗಳಿಗೆ ಡ್ರಗ್ ಪೂರೈಸುತ್ತಿದ್ದ. ನಿಯಾಜ್ ಜೊತೆಗಿದ್ದ ಇನ್ನಿಬ್ಬರು ಪ್ರಮುಖ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
Three drug peddlers were arrested by Mangaluru city crime branch police. MDMA, pistol and many other items were seized from them.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm