ಬ್ರೇಕಿಂಗ್ ನ್ಯೂಸ್
25-07-23 04:21 pm Mangalore Correspondent ಕ್ರೈಂ
ಮಂಗಳೂರು, ಜುಲೈ 25: ಇತ್ತೀಚೆಗೆ ಹೊಸಬೆಟ್ಟು ಬಳಿಯ ಸೆಕೆಂಡ್ ಹ್ಯಾಂಡ್ ಕಾರುಗಳ ಮಾರಾಟ ಮಳಿಗೆಯಿಂದ ಎರಡು ಕಾರುಗಳನ್ನು ಕಳವುಗೈದ ಪ್ರಕರಣದಲ್ಲಿ ಸುರತ್ಕಲ್ ಪೊಲೀಸರು ಒಬ್ಬ ಅಪ್ರಾಪ್ತ ಬಾಲಕ ಸೇರಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಜುಲೈ 12ರಂದು ರಾತ್ರಿ ಹೊಸಬೆಟ್ಟಿನ ಕಾರು ಮಾರ್ಟ್ ನಲ್ಲಿ ಕಳವು ಕೃತ್ಯ ನಡೆದಿತ್ತು. ಆರೋಪಿಗಳು ರೇನ್ ಕೋಟ್ ಧರಿಸಿ ಕಚೇರಿಯ ಒಳನುಗ್ಗಿದ್ದು ಬಳಿಕ ಡ್ರಾವರ್ ನಿಂದ ಕೀ ಪಡೆದು ಕ್ರೆಟಾ ಮತ್ತು ಸ್ವಿಫ್ಟ್ ಕಾರನ್ನು ಎಗರಿಸಿದ್ದು ಸಿಸಿಟಿವಿಯಲ್ಲಿ ದಾಖಲಾಗಿತ್ತು. ಕಾರು ಮಳಿಗೆಯ ಮಾಲಕ ಅಬೀದ್ ಅಹ್ಮದ್ ಸೂರಲ್ಪಾಡಿ, ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಕೇಸು ದಾಖಲಿಸಿದ್ದರು.

ಕಳವಾದ ಕಾರುಗಳ ಪತ್ತೆಗಾಗಿ ಪೊಲೀಸರು ಜುಲೈ 22ರಂದು ವಾಹನ ತಪಾಸಣೆ ನಡೆಸುತ್ತಿದ್ದಾಗ ಅಪ್ರಾಪ್ತ ಯುವಕನೊಬ್ಬ ಕಾರು ಚಲಾಯಿಸಿಕೊಂಡು ಬಂದು ಸಿಕ್ಕಿಬಿದ್ದಿದ್ದ. ತಪಾಸಣೆ ವೇಳೆ ಕಳವುಗೈದ ಕಾರು ಎಂದು ತಿಳಿದುಬಂದಿದ್ದು ಇನ್ನೊಬ್ಬ ಆರೋಪಿಯ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಆತ ನೀಡಿದ ಮಾಹಿತಿಯಂತೆ ಕಿನ್ನಿಪದವು ನಿವಾಸಿ ಮಹಮ್ಮದ್ ಶಫೀಕ್ (21) ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮರಕಡದಲ್ಲಿ ಬೈಕಿನಲ್ಲಿ ತೆರಳುತ್ತಿದ್ದಾಗ ಶಫೀಕ್ ನನ್ನು ಪೊಲೀಸರು ಬಂಧಿಸಿದ್ದು, ಬಳಿಕ ಕಳವುಗೈದು ತೊಕ್ಕೊಟ್ಟು ಬಸ್ ನಿಲ್ದಾಣ ಬಳಿ ಇರಿಸಿದ್ದ ಕ್ರೆಟಾ ಕಾರನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ಕೃತ್ಯಕ್ಕೆ ಉಪಯೋಗಿಸಿದ್ದ ಸುತ್ತಿಗೆ, ರೇನ್ ಕೋಟ್ ಇತರ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಮಹಮ್ಮದ್ ಶಫೀಕ್ ಒಂದು ವರ್ಷದ ಹಿಂದೆ ಮೂಡುಬಿದ್ರೆ ಠಾಣೆ ವ್ಯಾಪ್ತಿಯ ಕೆಸರುಗದ್ದೆ ಎಂಬಲ್ಲಿ ಮನೆಯಿಂದ ದ್ವಿಚಕ್ರ ವಾಹನ ಕಳವುಗೈದಿದ್ದು ಅದನ್ನೂ ವಶಕ್ಕೆ ಪಡೆಯಲಾಗಿದೆ. ಒಟ್ಟು ವಶಕ್ಕೆ ಪಡೆದ ವಾಹನಗಳ ಮೌಲ್ಯ 15 ಲಕ್ಷ ಆಗಿರುತ್ತದೆ. ಆರೋಪಿ ಶಫೀಕ್ ನನ್ನು ಪೊಲೀಸರು ಕೋರ್ಟಿಗೆ ಹಾಜರು ಪಡಿಸಿ ಮೂರು ದಿನ ಕಸ್ಟಡಿಗೆ ಪಡೆದಿದ್ದಾರೆ. ಸುರತ್ಕಲ್ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.
Mangalore second hand car robbery, Police swift action two arrested including Minor by Surathkal Inspector Mahesh Prasad. The thieves were arrested for stealing two cars and other valuables from the used car showroom at Suratkal on July 12.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm