ಬ್ರೇಕಿಂಗ್ ನ್ಯೂಸ್
25-07-23 04:21 pm Mangalore Correspondent ಕ್ರೈಂ
ಮಂಗಳೂರು, ಜುಲೈ 25: ಇತ್ತೀಚೆಗೆ ಹೊಸಬೆಟ್ಟು ಬಳಿಯ ಸೆಕೆಂಡ್ ಹ್ಯಾಂಡ್ ಕಾರುಗಳ ಮಾರಾಟ ಮಳಿಗೆಯಿಂದ ಎರಡು ಕಾರುಗಳನ್ನು ಕಳವುಗೈದ ಪ್ರಕರಣದಲ್ಲಿ ಸುರತ್ಕಲ್ ಪೊಲೀಸರು ಒಬ್ಬ ಅಪ್ರಾಪ್ತ ಬಾಲಕ ಸೇರಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಜುಲೈ 12ರಂದು ರಾತ್ರಿ ಹೊಸಬೆಟ್ಟಿನ ಕಾರು ಮಾರ್ಟ್ ನಲ್ಲಿ ಕಳವು ಕೃತ್ಯ ನಡೆದಿತ್ತು. ಆರೋಪಿಗಳು ರೇನ್ ಕೋಟ್ ಧರಿಸಿ ಕಚೇರಿಯ ಒಳನುಗ್ಗಿದ್ದು ಬಳಿಕ ಡ್ರಾವರ್ ನಿಂದ ಕೀ ಪಡೆದು ಕ್ರೆಟಾ ಮತ್ತು ಸ್ವಿಫ್ಟ್ ಕಾರನ್ನು ಎಗರಿಸಿದ್ದು ಸಿಸಿಟಿವಿಯಲ್ಲಿ ದಾಖಲಾಗಿತ್ತು. ಕಾರು ಮಳಿಗೆಯ ಮಾಲಕ ಅಬೀದ್ ಅಹ್ಮದ್ ಸೂರಲ್ಪಾಡಿ, ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಕೇಸು ದಾಖಲಿಸಿದ್ದರು.

ಕಳವಾದ ಕಾರುಗಳ ಪತ್ತೆಗಾಗಿ ಪೊಲೀಸರು ಜುಲೈ 22ರಂದು ವಾಹನ ತಪಾಸಣೆ ನಡೆಸುತ್ತಿದ್ದಾಗ ಅಪ್ರಾಪ್ತ ಯುವಕನೊಬ್ಬ ಕಾರು ಚಲಾಯಿಸಿಕೊಂಡು ಬಂದು ಸಿಕ್ಕಿಬಿದ್ದಿದ್ದ. ತಪಾಸಣೆ ವೇಳೆ ಕಳವುಗೈದ ಕಾರು ಎಂದು ತಿಳಿದುಬಂದಿದ್ದು ಇನ್ನೊಬ್ಬ ಆರೋಪಿಯ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಆತ ನೀಡಿದ ಮಾಹಿತಿಯಂತೆ ಕಿನ್ನಿಪದವು ನಿವಾಸಿ ಮಹಮ್ಮದ್ ಶಫೀಕ್ (21) ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮರಕಡದಲ್ಲಿ ಬೈಕಿನಲ್ಲಿ ತೆರಳುತ್ತಿದ್ದಾಗ ಶಫೀಕ್ ನನ್ನು ಪೊಲೀಸರು ಬಂಧಿಸಿದ್ದು, ಬಳಿಕ ಕಳವುಗೈದು ತೊಕ್ಕೊಟ್ಟು ಬಸ್ ನಿಲ್ದಾಣ ಬಳಿ ಇರಿಸಿದ್ದ ಕ್ರೆಟಾ ಕಾರನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ಕೃತ್ಯಕ್ಕೆ ಉಪಯೋಗಿಸಿದ್ದ ಸುತ್ತಿಗೆ, ರೇನ್ ಕೋಟ್ ಇತರ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಮಹಮ್ಮದ್ ಶಫೀಕ್ ಒಂದು ವರ್ಷದ ಹಿಂದೆ ಮೂಡುಬಿದ್ರೆ ಠಾಣೆ ವ್ಯಾಪ್ತಿಯ ಕೆಸರುಗದ್ದೆ ಎಂಬಲ್ಲಿ ಮನೆಯಿಂದ ದ್ವಿಚಕ್ರ ವಾಹನ ಕಳವುಗೈದಿದ್ದು ಅದನ್ನೂ ವಶಕ್ಕೆ ಪಡೆಯಲಾಗಿದೆ. ಒಟ್ಟು ವಶಕ್ಕೆ ಪಡೆದ ವಾಹನಗಳ ಮೌಲ್ಯ 15 ಲಕ್ಷ ಆಗಿರುತ್ತದೆ. ಆರೋಪಿ ಶಫೀಕ್ ನನ್ನು ಪೊಲೀಸರು ಕೋರ್ಟಿಗೆ ಹಾಜರು ಪಡಿಸಿ ಮೂರು ದಿನ ಕಸ್ಟಡಿಗೆ ಪಡೆದಿದ್ದಾರೆ. ಸುರತ್ಕಲ್ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.
Mangalore second hand car robbery, Police swift action two arrested including Minor by Surathkal Inspector Mahesh Prasad. The thieves were arrested for stealing two cars and other valuables from the used car showroom at Suratkal on July 12.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
24-03-26 09:24 am
HK News Staffer
ಕಾಸರಗೋಡು ಅಖಾಡ ರೆಡಿ ; ಎಲ್ ಡಿಎಫ್ ನಿಂದ ಶಾನವಾಸ್ ಪ...
23-03-26 05:36 pm
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm