ಬ್ರೇಕಿಂಗ್ ನ್ಯೂಸ್
27-07-23 08:36 pm HK News Desk ಕ್ರೈಂ
ಪುಣೆ, ಜುಲೈ 27: ಪಡೆದ ಸಾಲವನ್ನು ಮರಳಿಸದೆ ತಪ್ಪಿಸಿಕೊಳ್ಳುತ್ತಿದ್ದಾನೆ ಎಂದು, 47 ವರ್ಷದ ಸಾಲದಾತನೊಬ್ಬ ವ್ಯಕ್ತಿಯ ಎದುರೇ ಆತನ ಹೆಂಡತಿಯನ್ನು ಅತ್ಯಾಚಾರದ ಎಸಗಿದ ಅಮಾನುಷ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
34 ವರ್ಷದ ಮಹಿಳೆ ಮೇಲೆ ಭಯಾನಕ ಕೃತ್ಯವು ಈ ವರ್ಷದ ಫೆಬ್ರವರಿ ತಿಂಗಳಿನಲ್ಲಿಯೇ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆರೋಪಿಯನ್ನು ಬಂಧಿಸಲಾಗಿದೆ ಎಂದು ಹದಾಸ್ಪರ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಲೇವಾದೇವಿ ವಹಿವಾಟು ನಡೆಸುವ ಇಮ್ತಿಯಾಜ್ ಶೇಖ್ ಎಂಬ ವ್ಯಕ್ತಿಯಿಂದ ಸಂತ್ರಸ್ತೆಯ ಗಂಡ, ಫೆಬ್ರವರಿಯಲ್ಲಿ ಬಡ್ಡಿರಹಿತ 40 ಸಾವಿರ ರೂ ಹಣ ಸಾಲ ಪಡೆದಿದ್ದ. ಆದರೆ ಅದನ್ನು ಮರಳಿ ಪಾವತಿಸಲು ಆತನಿಗೆ ಸಾಧ್ಯವಾಗಿರಲಿಲ್ಲ. ಇದರಿಂದ ಕುಪಿತಗೊಂಡಿದ್ದ ಶೇಖ್, ದಂಪತಿಯನ್ನು ಹಲವು ಬಾರಿ ಅವಾಚ್ಯವಾಗಿ ನಿಂದಿಸಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸಾಲದ ಹಣ ವಾಪಸ್ ಕೇಳಿದರೂ, ಪಾವತಿಸದಿದ್ದರಿಂದ ಕೋಪಗೊಂಡಿದ್ದ ಆರೋಪಿ, ತನ್ನ ಕೃತ್ಯಕ್ಕೆ ಮೊದಲೇ ಸಂಚು ರೂಪಿಸಿದ್ದ. ಹದಾಸ್ಪುರ ಗವರ್ನ್ಮೆಂಟ್ ಕಾಲೊನಿಯಲ್ಲಿ ಯಾರೂ ಇಲ್ಲದ ಸ್ಥಳಕ್ಕೆ ದಂಪತಿಯನ್ನು ಕರೆಸಿಕೊಂಡಿದ್ದ ಶೇಖ್, ಬಾಕಿ ಉಳಿದ ಹಣ ವಾಪಸ್ ನೀಡುವಂತೆ ಆಗ್ರಹಿಸಿದ್ದ. ಅವರ ಬಳಿ ಹಣ ಇರಲಿಲ್ಲ. ತನ್ನ ಬಳಿ ಇದ್ದ ಚಾಕು ಹೊರಗೆ ತೆಗೆದಿದ್ದ ಶೇಖ್, ಸಂತ್ರಸ್ತೆಯ ಗಂಡನಿಗೆ ಚಾಕು ತೋರಿಸಿ ಬೆದರಿಸಿ, ಬಳಿಕ ಆತನ ಎದುರೇ ಮಹಿಳೆ ಮೇಲೆ ಕ್ರೂರವಾಗಿ ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಲಾಗಿದೆ.
ಅಷ್ಟೇ ಅಲ್ಲದೆ, ತನ್ನ ಅತ್ಯಾಚಾರದ ಕೃತ್ಯವನ್ನು ಆತ ಮೊಬೈಲ್ ಫೋನ್ನಲ್ಲಿ ಚಿತ್ರೀಕರಿಸಿದ್ದ. ಇದಾದ ಬಳಿಕವೂ ತನಗೆ ಲೈಂಗಿಕ ಸುಖ ನೀಡುವಂತೆ ಮಹಿಳೆಯನ್ನು ಪದೇ ಪದೇ ಪೀಡಿಸಲು ಆರಂಭಿಸಿದ್ದ. ಅದಕ್ಕೆ ಆಕೆ ನಿರಾಕರಿಸಿದ್ದಳು. ಇದರಿಂದ ಕುದ್ದು ಹೋಗಿದ್ದ ಆತ, ಸಾಮಾಜಿಕ ಮಾಧ್ಯಮದ ವಿವಿಧ ವೇದಿಕೆಗಳಲ್ಲಿ ತಾನು ಚಿತ್ರೀಕರಿಸಿದ್ದ ವಿಡಿಯೋವನ್ನು ಹಂಚಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
A 47-year-old moneylender in Maharashtra's Pune city allegedly raped a woman after her husband failed to repay the loan taken from him, police said today. The incident took place in February this year and the accused has been arrested, a police official said.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
24-03-26 09:24 am
HK News Staffer
ಕಾಸರಗೋಡು ಅಖಾಡ ರೆಡಿ ; ಎಲ್ ಡಿಎಫ್ ನಿಂದ ಶಾನವಾಸ್ ಪ...
23-03-26 05:36 pm
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm