ಬ್ರೇಕಿಂಗ್ ನ್ಯೂಸ್
27-07-23 08:36 pm HK News Desk ಕ್ರೈಂ
ಪುಣೆ, ಜುಲೈ 27: ಪಡೆದ ಸಾಲವನ್ನು ಮರಳಿಸದೆ ತಪ್ಪಿಸಿಕೊಳ್ಳುತ್ತಿದ್ದಾನೆ ಎಂದು, 47 ವರ್ಷದ ಸಾಲದಾತನೊಬ್ಬ ವ್ಯಕ್ತಿಯ ಎದುರೇ ಆತನ ಹೆಂಡತಿಯನ್ನು ಅತ್ಯಾಚಾರದ ಎಸಗಿದ ಅಮಾನುಷ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
34 ವರ್ಷದ ಮಹಿಳೆ ಮೇಲೆ ಭಯಾನಕ ಕೃತ್ಯವು ಈ ವರ್ಷದ ಫೆಬ್ರವರಿ ತಿಂಗಳಿನಲ್ಲಿಯೇ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆರೋಪಿಯನ್ನು ಬಂಧಿಸಲಾಗಿದೆ ಎಂದು ಹದಾಸ್ಪರ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಲೇವಾದೇವಿ ವಹಿವಾಟು ನಡೆಸುವ ಇಮ್ತಿಯಾಜ್ ಶೇಖ್ ಎಂಬ ವ್ಯಕ್ತಿಯಿಂದ ಸಂತ್ರಸ್ತೆಯ ಗಂಡ, ಫೆಬ್ರವರಿಯಲ್ಲಿ ಬಡ್ಡಿರಹಿತ 40 ಸಾವಿರ ರೂ ಹಣ ಸಾಲ ಪಡೆದಿದ್ದ. ಆದರೆ ಅದನ್ನು ಮರಳಿ ಪಾವತಿಸಲು ಆತನಿಗೆ ಸಾಧ್ಯವಾಗಿರಲಿಲ್ಲ. ಇದರಿಂದ ಕುಪಿತಗೊಂಡಿದ್ದ ಶೇಖ್, ದಂಪತಿಯನ್ನು ಹಲವು ಬಾರಿ ಅವಾಚ್ಯವಾಗಿ ನಿಂದಿಸಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸಾಲದ ಹಣ ವಾಪಸ್ ಕೇಳಿದರೂ, ಪಾವತಿಸದಿದ್ದರಿಂದ ಕೋಪಗೊಂಡಿದ್ದ ಆರೋಪಿ, ತನ್ನ ಕೃತ್ಯಕ್ಕೆ ಮೊದಲೇ ಸಂಚು ರೂಪಿಸಿದ್ದ. ಹದಾಸ್ಪುರ ಗವರ್ನ್ಮೆಂಟ್ ಕಾಲೊನಿಯಲ್ಲಿ ಯಾರೂ ಇಲ್ಲದ ಸ್ಥಳಕ್ಕೆ ದಂಪತಿಯನ್ನು ಕರೆಸಿಕೊಂಡಿದ್ದ ಶೇಖ್, ಬಾಕಿ ಉಳಿದ ಹಣ ವಾಪಸ್ ನೀಡುವಂತೆ ಆಗ್ರಹಿಸಿದ್ದ. ಅವರ ಬಳಿ ಹಣ ಇರಲಿಲ್ಲ. ತನ್ನ ಬಳಿ ಇದ್ದ ಚಾಕು ಹೊರಗೆ ತೆಗೆದಿದ್ದ ಶೇಖ್, ಸಂತ್ರಸ್ತೆಯ ಗಂಡನಿಗೆ ಚಾಕು ತೋರಿಸಿ ಬೆದರಿಸಿ, ಬಳಿಕ ಆತನ ಎದುರೇ ಮಹಿಳೆ ಮೇಲೆ ಕ್ರೂರವಾಗಿ ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಲಾಗಿದೆ.
ಅಷ್ಟೇ ಅಲ್ಲದೆ, ತನ್ನ ಅತ್ಯಾಚಾರದ ಕೃತ್ಯವನ್ನು ಆತ ಮೊಬೈಲ್ ಫೋನ್ನಲ್ಲಿ ಚಿತ್ರೀಕರಿಸಿದ್ದ. ಇದಾದ ಬಳಿಕವೂ ತನಗೆ ಲೈಂಗಿಕ ಸುಖ ನೀಡುವಂತೆ ಮಹಿಳೆಯನ್ನು ಪದೇ ಪದೇ ಪೀಡಿಸಲು ಆರಂಭಿಸಿದ್ದ. ಅದಕ್ಕೆ ಆಕೆ ನಿರಾಕರಿಸಿದ್ದಳು. ಇದರಿಂದ ಕುದ್ದು ಹೋಗಿದ್ದ ಆತ, ಸಾಮಾಜಿಕ ಮಾಧ್ಯಮದ ವಿವಿಧ ವೇದಿಕೆಗಳಲ್ಲಿ ತಾನು ಚಿತ್ರೀಕರಿಸಿದ್ದ ವಿಡಿಯೋವನ್ನು ಹಂಚಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
A 47-year-old moneylender in Maharashtra's Pune city allegedly raped a woman after her husband failed to repay the loan taken from him, police said today. The incident took place in February this year and the accused has been arrested, a police official said.
21-06-25 02:48 pm
Bengaluru Staff
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
20-06-25 10:19 pm
HK News Desk
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
21-06-25 03:56 pm
Giridhar Shetty, Mangaluru
Fake NEET Marksheet, Udupi Topper; ನಕಲಿ ನೀಟ್...
21-06-25 01:59 pm
Sakleshpur, Mangalore Bangalore Train; ಸಕಲೇಶಪ...
21-06-25 12:03 pm
Kudupu Murder, Sajith Shetty Post, Sudheer Ku...
20-06-25 11:04 pm
Mangalore Forest Guard, Someshwara Beach, U T...
20-06-25 09:54 pm
21-06-25 12:21 pm
Mangaluru Correspondent
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm