ಬ್ರೇಕಿಂಗ್ ನ್ಯೂಸ್
30-07-23 09:20 pm Mangalore Correspondent ಕ್ರೈಂ
ಉಳ್ಳಾಲ, ಜು.30: ಮಂಗಳೂರಿನಲ್ಲಿ ಕಳವಾಗಿದ್ದ ಬೈಕ್ ಒಂದು ತೊಕ್ಕೊಟ್ಟಿನಲ್ಲಿ ಪತ್ತೆಯಾಗಿದ್ದು ಬೈಕನ್ನ ಚಲಾಯಿಸುತ್ತಿದ್ದ ಕಳ್ಳ ಸಿಸಿಟಿವಿ ಫೂಟೇಜಲ್ಲಿ ಸೆರೆಯಾಗಿದ್ದಾನೆ. ಅಷ್ಟಕ್ಕೂ ಮಾರ್ಕೆಟಲ್ಲಿ ಮೌಲ್ಯವಿಲ್ಲದ ಬೈಕ್ ಗಳನ್ನ ಕದಿಯೋ ಖದೀಮರು ಕದ್ದ ಬೈಕ್ ನಂಬರ್ ಪ್ಲೇಟ್ ಕಳಚಿ ಅಡ್ಡ ಕಸುಬಿಗೆ ಬಳಸುತ್ತಿರುವ ಶಂಕೆ ಮೂಡಿದೆ.
ಕೊಲ್ಯ ಸಾರಸ್ವತ ಕಾಲನಿಯ ಸಂಜಯ್(23) ಎಂಬವರು ಚಲಾಯಿಸುತ್ತಿದ್ದ ಬೈಕ್ ಕಳೆದ ಜುಲೈ 20 ರಂದು ಮಂಗಳೂರಿನಲ್ಲಿ ಕಳವಾಗಿದ್ದು ಈ ಬಗ್ಗೆ ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಜುಲೈ 20 ರಂದು ಸಂಜಯ್ ತನ್ನ ಸ್ನೇಹಿತ ಶ್ರವಣ್ ಅವರ ತಂದೆಯ ಹೀರೋ ಹೋಂಡಾ ಫ್ಯಾಷನ್ ಪ್ರೋ ಬೈಕಲ್ಲಿ ಶ್ರವಣ್ ಗೆ ನೂತನ ಉದ್ಯೋಗಕ್ಕೆ ಸೇರಿಸಲೆಂದು ತೆರಳಿದ್ದರು. ಶರವು ದೇವಸ್ಥಾನದ ಬಳಿಯ ಎಕ್ಸೆಲ್ ಮಿಸ್ ಚೀಫ್ ಮಾಲ್ ಬಳಿಯಲ್ಲಿ ಸಂಜೆ 5 ಗಂಟೆಗೆ ಬೈಕನ್ನ ಪಾರ್ಕ್ ಮಾಡಿ ಪಕ್ಕದ ಕಂಪನಿಯೊಂದಕ್ಕೆ ಕೆಲಸ ಕೇಳಲೆಂದು ತೆರಳಿದ್ದರು. ಸಂಜಯ್ ಮತ್ತು ಶ್ರವಣ್ ಕಂಪನಿಯಿಂದ ಮರಳಿದಾಗ ಪಾರ್ಕ್ ಮಾಡಲಾಗಿದ್ದ ಬೈಕ್ ನಾಪತ್ತೆಯಾಗಿತ್ತು. ಸ್ನೇಹಿತರು, ಸಂಬಂಧಿಕರಲ್ಲಿ ವಿಚಾರ ತಿಳಿಸಿ ಹುಡುಕಾಡಿದರೂ ಬೈಕ್ ಸಿಗದೆ ಇದ್ದ ಕಾರಣ ಜುಲೈ 26 ರಂದು ಸಂಜಯ್ ನಗರದ ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಇಂದು ಸಂಜೆ ತೊಕ್ಕೊಟ್ಟಿನ ಒಳ ಪೇಟೆಯ ಆಮಂತ್ರಣ ಸಭಾಂಗಣದ ಎದುರು ಭಾಗದ ಮೆಡಿಕಲ್ ಸೆಂಟರ್ ಎದುರುಗಡೆ ಕಳವಾದ ಬೈಕ್ ಪತ್ತೆಯಾಗಿದೆ. ಅಲ್ಲಿನ ಸಿಸಿಟಿವಿ ಫೂಟೇಜ್ ಪರಿಶೀಲಿಸಿದಾಗ ಮಧ್ಯಾಹ್ನದ ವೇಳೆ ಬೈಕನ್ನ ಓರ್ವನು ಅಲ್ಲಿ ತಂದು ನಿಲ್ಲಿಸಿದ್ದು ಆತನನ್ನ ಮತ್ತೋರ್ವ ಸ್ವಾಗತಿಸಿ ಮಾತನಾಡಿಸಿದ ದೃಶ್ಯ ದಾಖಲಾಗಿದೆ. ಬೈಕ್ನ ನಂಬರ್ ಪ್ಲೇಟನ್ನ ಕಳಚಲಾಗಿದೆ, ಅಷ್ಟಕ್ಕೂ 18 ಸಾವಿರ ಮಾರ್ಕೆಟ್ ಮೌಲ್ಯದ ಬೈಕ್ ಕಾಳ ಧಂದೆಯಲ್ಲಿ ಮಾರಿದರೂ 8 ಸಾವಿರಕ್ಕಿಂತ ಹೆಚ್ಚು ಮೌಲ್ಯ ಸಿಗಲು ಕಷ್ಟ. ಕದ್ದ ಬೈಕ್ ಗಳನ್ನ ಖದೀಮರು ಅಡ್ಡ ಕಸುಬಿಗೆ ಬಳಸುತ್ತಿರುವ ಶಂಕೆ ಮೂಡಿದ್ದು, ಪೊಲೀಸರು ಈ ಬಗ್ಗೆ ಕೂಲಂಕುಷ ತನಿಖೆ ನಡೆಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಶ್ರವಣ್ ತಂದೆ ಸಂದೀಪ್ ಅವರು ಬೈಕ್ ಗುರುತು ಪತ್ತೆಹಚ್ಚಿದ್ದು , ಬಂದರು ಠಾಣೆ ಪೊಲೀಸರು ಬೈಕನ್ನ ವಶಕ್ಕೆ ಪಡೆದಿದ್ದಾರೆ.
Bike stolen from Mangalore found in Thokottu, video of CCTV found.
13-08-26 01:00 pm
HK News Staffer
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 01:17 pm
HK News Staffer
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm