ಬ್ರೇಕಿಂಗ್ ನ್ಯೂಸ್
31-07-23 07:26 pm Mangalore Correspondent ಕ್ರೈಂ
ಮಂಗಳೂರು, ಜುಲೈ 31: ತಾನೊಬ್ಬ ಪತ್ರಕರ್ತ ಎಂದು ಹೇಳಿದರೂ, ಕೇಳದೆ ಯುವಕರಿಬ್ಬರು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ ಘಟನೆ ಕಾವೂರಿನಲ್ಲಿ ನಡೆದಿದೆ. ದೈಜಿವರ್ಲ್ಡ್ ಸುದ್ದಿ ಸಂಸ್ಥೆಯ ವರದಿಗಾರ ಅಭಿಜಿತ್ ಕೊಲ್ಪೆ ಅವರನ್ನು ನೀನು ಬ್ಯಾರಿಯೆಂದು ಹೇಳಿ ಯುವಕರು ಹಲ್ಲೆಗೆ ಯತ್ನಿಸಿದ್ದಾರೆ.
ಘಟನೆ ಬಗ್ಗೆ ಅಭಿಜಿತ್ ಕೋಲ್ಪೆ ಅವರು ಕಾವೂರು ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಕೋಟೆಕಾರು ನಿವಾಸಿ ಚೇತನ್ (38) ಮತ್ತು ಯೆಯ್ಯಾಡಿ ನಿವಾಸಿ ನವೀನ್(39) ಬಂಧಿತರು. ನವೀನ್ ಮೂಲತಃ ಕಾಸರಗೋಡಿನ ಕುಂಬ್ಲೆ ನಿವಾಸಿಯಾಗಿದ್ದು ಮಂಗಳೂರಿನಲ್ಲಿ ಕೆಲಸದ ನಿಮಿತ್ತ ಉಳಿದುಕೊಂಡಿದ್ದಾರೆ.
ಅಭಿಜಿತ್ ಜುಲೈ 26ರಂದು ಮಧ್ಯಾಹ್ನ ತನ್ನ ಸ್ನೇಹಿತೆಯ ಜೊತೆಗೆ ಕಾವೂರಿನ ಹೊಟೇಲ್ ಒಂದರಲ್ಲಿ ಊಟ ಮಾಡಿ ಹೊರ ಬರುತ್ತಿದ್ದಾಗ ಅಪರಿಚಿತ ಯುವಕರಿಬ್ಬರು ನೀನು ಬ್ಯಾರಿ, ಹಿಂದು ಹುಡುಗಿ ಜೊತೆಗೆ ಏನು ಮಾಡುತ್ತಿದ್ದೀಯಾ ಎಂದು ಹೇಳಿ ರೇಗಾಡಿದ್ದಾರೆ. ನಾನು ಬ್ಯಾರಿಯಲ್ಲ, ಹಿಂದು. ದೈಜಿ ವರ್ಲ್ಡ್ ವರದಿಗಾರ ಎಂದು ಐಡಿ ಕಾರ್ಡ್ ತೋರಿಸಿದರೂ, ಅವರು ಕೇಳದೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಲ್ಲದೆ, ಅಭಿಜಿತ್ ಜೊತೆಗಿದ್ದ ಯುವತಿಗೂ ನಿಂದಿಸಿದ್ದಾರೆ.
ಆನಂತರ, ಕಾರು ಒಂದರಲ್ಲಿ ಆರೋಪಿಗಳು ಜಾಗ ಖಾಲಿ ಮಾಡಿದ್ದರು. ಕಾವೂರು ಪೊಲೀಸರು ಘಟನೆ ಬಗ್ಗೆ ಪ್ರಕರಣ ದಾಖಲಿಸಿದ್ದು, ಇಬ್ಬರನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ಯಾವುದೇ ಸಂಘಟನೆಯಲ್ಲಿ ಗುರುತಿಸಿಕೊಂಡಿರುವುದು ಬೆಳಕಿಗೆ ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
Moral Policing on Daijiworld Media Journalist Abhijith Kolpe at Kavoor in Mangalore. Two Hindu activists have been arrested. Journalist Abhijith Kolpe was harassed while walking to a restaurant with a companion. He was told he was a Muslim man and asked why a Hindu female was with him. He claimed that he is not a Muslim, but the two still harassed him.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm