ಬ್ರೇಕಿಂಗ್ ನ್ಯೂಸ್
03-08-23 11:01 am Mangalore Correspondent ಕ್ರೈಂ
ಉಳ್ಳಾಲ, ಆಗಸ್ಟ್ 3: “ಡ್ರಗ್ಸ್ ಫ್ರಿ ಮಂಗಳೂರು’ ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಚರಣೆಯಲ್ಲಿ ಮಾದಕ ವಸ್ತುವಾದ ಎಂಡಿಎಂಎ (ಸಿಂಥೆಟಿಕ್ ಡ್ರಗ್ಸ್)ನ್ನು ಮಾರಾಟ ಮಾಡುತ್ತಿದ್ದ ಮೂವರು ಡ್ರಗ್ ಪೆಡ್ಲರ್ಗಳನ್ನು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಗ್ರಾಮದ ತಲಪಾಡಿ-ದೇವಿಪುರ ರಸ್ತೆಯಲ್ಲಿನ ತಚ್ಚಾಣಿ ಪರಿಸರದಲ್ಲಿ ಬಂಧಿಸಲಾಗಿದೆ.
ಬಂಧಿತ ಮೂವರು ಸಜೀಪ ಮುನ್ನೂರು ಗ್ರಾಮದವರಾಗಿದ್ದು, ನಂದಾವರ ಬಸ್ತಿಗುಡ್ಡೆ ಹೌಸ್ ನಿವಾಸಿ, ಪ್ರಸ್ತುತ ಉಳ್ಳಾಲ ಹಳೆಕೋಟೆಯಲ್ಲಿ ವಾಸವಾಗಿದ್ದ ಮೊಹಮ್ಮದ್ ಹಫೀಝ್ ಯಾನೆ ಅಪ್ಪಿ(35), ನಂದಾವರ ನಿವಾಸಿ ಅಮೀರ್ ಯಾನೆ ಅಮ್ಮಿ(34), ದಾಸರಗುಡ್ಡೆ ಪ್ರಸ್ತುತ ಹಳೆಯಂಗಡಿ ಸಂತೆ ಕಟ್ಟೆ ಮಸೀದಿ ಬಳಿ ನಿವಾಸಿ ಜಾಕೀರ್ ಹುಸೇನ್ ಯಾನೆ ತಾಚಿ(28) ಆರೋಪಿಗಳು.

ಆರೋಪಿಗಳಿಂದ ಒಟ್ಟು 200 ಗ್ರಾಂ ತೂಕದ 10,00,000 ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮಾರುತಿ ಸ್ವಿಫ್ಟ್ ಕಾರು-1, 70,000 ರೂ. ಮೌಲ್ಯದ 3 ಮೊಬೈಲ್ ಫೋನ್ಗಳು, , ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 15,70,500 ರೂ. ಅಂದಾಜಿಸಲಾಗಿದ್ದು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಮಾದಕ ವಸ್ತು ಮಾರಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಅವರ ಪತ್ತೆ ಕಾರ್ಯ ಮುಂದುವರಿದಿದೆ.
ಬೆಂಗಳೂರಿನಿಂದ ಎಂಡಿಎಂಎ ಖರೀದಿಸಿ ಮಾರಾಟ ಮಾಡಲು ಸಾಗಿಸುತ್ತಿರುವ ಖಚಿತ ಮಾಹಿತಿಯಂತೆ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕ ಶ್ಯಾಮ್ಸುಂದರ್ ಎಚ್.ಎಂ., ಪಿಎಸ್ಐಯವರಾದ ರಾಜೇಂದ್ರ ಬಿ., ಸುದೀಪ್ ಎಂ.ವಿ., ಶರಣಪ್ಪ ಭಂಡಾರಿ, ನರೇಂದ್ರ ಹಾಗೂ ಸಿಸಿಬಿ ಸಿಬಂದಿಗಳ ತಂಡ ದಾಳಿ ನಡೆಸಿದೆ.
In an effort to make the city drug-free, the CCB police successfully arrested three drug peddlers in possession of MDMA (Methylenedioxymethamphetamine) drug.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm