ಬ್ರೇಕಿಂಗ್ ನ್ಯೂಸ್
04-08-23 06:57 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 4: ಸುರತ್ಕಲ್ ಬಳಿಯ ಹೊಸಬೆಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ಎಟಿಎಂ ಮೆಷಿನನ್ನು ಜೆಸಿಬಿ ಬಳಸಿ ಒಡೆದು ನಗದು ದೋಚಲು ಯತ್ನಿಸಿದ ಘಟನೆ ಶುಕ್ರವಾರ ನಸುಕಿನಲ್ಲಿ ನಡೆದಿದೆ.
ಹೆದ್ದಾರಿ ಬದಿಯಲ್ಲಿರುವ ಸೌತ್ ಇಂಡಿಯನ್ ಬ್ಯಾಂಕಿನ ಎಟಿಎಂ ಮೆಷಿನನ್ನು ನಸುಕಿನ 2.15ರ ವೇಳೆಗೆ ಜೆಸಿಬಿ ಬಳಸಿ ಒಡೆದು ಹಾಕಲಾಗಿದೆ. ಹೊರಗಿನ ಗ್ಲಾಸ್ ಒಡೆದು ಒಳಗಿನ ಮೆಷಿನನ್ನು ಎಬ್ಬಿಸಲು ಯತ್ನಿಸಿದ್ದು ಈ ವೇಳೆ ಮೆಷಿನ್ ನೆಲಕ್ಕೆ ಅಡ್ಡ ಬಿದ್ದಿದೆ. ಇದೇ ಸಂದರ್ಭದಲ್ಲಿ ಬ್ಯಾಂಕಿನ ಮ್ಯಾನೇಜರ್ ಗೆ ಸಂದೇಶ ಹೋಗಿದ್ದು ಅಲ್ಲದೆ ಸ್ಥಳದಲ್ಲಿ ಸೈರನ್ ಆಗತೊಡಗಿತ್ತು. ಕೆಲಹೊತ್ತು ಭಾರದ ಮೆಷಿನನ್ನು ಎತ್ತಲು ಯತ್ನಿಸಿದ ಕಳ್ಳರು ಬಳಿಕ ಜನ ಸೇರುತ್ತಾರೆಂದು ಭಯದಲ್ಲಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ.



ಕೆಲಹೊತ್ತಿನಲ್ಲಿ ಬ್ಯಾಂಕ್ ಮ್ಯಾನೇಜರ್ ಸ್ಥಳಕ್ಕೆ ಬಂದಿದ್ದರೆ, ಅದೇ ಹೊತ್ತಿಗೆ ಸುರತ್ಕಲ್ ಪೊಲೀಸರು ಕೂಡ ಸ್ಥಳಕ್ಕೆ ಬಂದಿದ್ದಾರೆ. ಅಷ್ಟರಲ್ಲಿ ಜೆಸಿಬಿ ಜೊತೆಗೆ ಕಳ್ಳರು ನಾಪತ್ತೆಯಾಗಿದ್ದರು. ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳರ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನು ಆಧರಿಸಿ ಪೊಲೀಸರು ಜೆಸಿಬಿಯನ್ನು ಜೋಕಟ್ಟೆಯಲ್ಲಿ ಪತ್ತೆ ಮಾಡಿದ್ದಾರೆ. ಪರಿಶೀಲನೆ ವೇಳೆ ಜೆಸಿಬಿ ಪಡುಬಿದ್ರಿ ಠಾಣೆ ವ್ಯಾಪ್ತಿಯಲ್ಲಿ ಕಳವಾಗಿದ್ದು ಮತ್ತು ಅದರ ಬಗ್ಗೆ ಒಂದು ದಿನದ ಹಿಂದೆ ಪ್ರಕರಣ ದಾಖಲಾಗಿರುವುದು ತಿಳಿದುಬಂದಿದೆ. ಇಬ್ಬರು ಆರೋಪಿಗಳಿಗಾಗಿ ಸುರತ್ಕಲ್ ಪೊಲೀಸರು ಶೋಧ ನಡೆಸುತ್ತಿದ್ದಾರೆ.
Gang attempts to steal bank ATM machine using JCB at Surathkal in Mangalore, flee after siren sound.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm