ಬ್ರೇಕಿಂಗ್ ನ್ಯೂಸ್
05-11-20 06:08 pm Headline Karnataka News Network ಕ್ರೈಂ
ಚಿಕ್ಕಮಗಳೂರು, ನವೆಂಬರ್ 05: ಕಾಫಿ ಡೇ ಮಾಲೀಕ ದಿವಂಗತ ಸಿದ್ಧಾರ್ಥ್ ಹೆಗ್ಡೆ ಪತ್ನಿ ಮಾಳವಿಕಾಗೆ ಬಂಧನದ ಭೀತಿ ಎದುರಾಗಿದೆ. ಮಾಳವಿಕ ಸಿದ್ಧಾರ್ಥ್ ಸೇರಿ ಕಾಫಿ ಡೇ ಕಂಪನಿಯ ಸೇರಿ 8 ಜನರಿಗೆ ಮೂಡಿಗೆರೆ ಜೆಎಂಎಫ್ ಕೋರ್ಟ್ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿದೆ.
ಚಿಕ್ಕಮಗಳೂರು ಜಿಲ್ಲೆಯ 300ಕ್ಕೂ ಹೆಚ್ಚು ಬೆಳೆಗಾರರಿಗೆ 100 ಕೋಟಿಗೂ ಅಧಿಕ ಹಣವನ್ನು ಎಬಿಸಿ ಕಂಪೆನಿ ಬಾಕಿ ಉಳಿಸಿಕೊಂಡಿದ್ದು ಇದರ ವಿರುದ್ಧ ಕಾಫಿ ಬೆಳೆಗಾರ ನಂದೀಶ್ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದರು.

ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಗ್ರಾಮದ ಕಾಫಿ ಬೆಳೆಗಾರ ನಂದೀಶ್, ಪ್ರತಿ ವರ್ಷ ಕಾಫಿಯನ್ನು ಎಬಿಸಿ ಕಂಪೆನಿಗೆ ನೀಡುತ್ತಿದ್ದರು. ಆದರೆ, ಸಿದ್ಧಾರ್ಥ್ ನಿಧನರಾದ ಬಳಿಕ ಬೆಳೆಗಾರರಿಗೆ ಕಂಪೆನಿಯಿಂದ ಬರುತ್ತಿದ್ದ ಹಣ ನಿಂತು ಹೋಗಿದೆ. ನಂದೀಶ್ ಪೋಸ್ಟ್ ಡೇಟೆಡ್ ಚೆಕ್ ಪಡೆದು ಹಣ ನಗದು ಮಾಡಿಕೊಳ್ಳುತ್ತಿದ್ದರು. ಅದರಂತೆ, ನಂದೀಶ್ ಹತ್ತು ಚೆಕ್ ಪಡೆದಿದ್ದು ಅದನ್ನು ಬ್ಯಾಂಕಿಗೆ ಹಾಕಿದಾಗ ಬೌನ್ಸ್ ಆಗಿತ್ತು.
ಚೆಕ್ ಬೌನ್ಸ್ ಹಿನ್ನೆಲೆಯಲ್ಲಿ ನಂದೀಶ್ ತನಗೆ ಬರಬೇಕಿದ್ದ 45.38 ಲಕ್ಷ ಹಣಕ್ಕಾಗಿ ಕೋರ್ಟಿಗೆ ದೂರು ಸಲ್ಲಿಸಿದ್ದರು. ಕಳೆದ ಅಕ್ಟೋಬರ್ 6ರಂದು ಎಬಿಸಿ ಕಂಪೆನಿ ಕಡೆಯಿಂದ ನಿರ್ದೇಶಕರು ಕೋರ್ಟಿಗೆ ಹಾಜರಾಗಬೇಕಿತ್ತು. ಹೀಗಾಗಿ ಕೋರ್ಟ್ ಆರೋಪಿಗಳ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. ಮುಂದಿನ ವಿಚಾರಣೆ ನ.11ಕ್ಕೆ ಇದ್ದು ಅದಕ್ಕೆ ಮುನ್ನ ಆರೋಪಿಗಳು ಕೋರ್ಟಿಗೆ ಹಾಜರಾಗಬೇಕೆಂದು ನಂದೀಶ್ ಪರ ವಕೀಲರು ಮಾಧ್ಯಮಕ್ಕೆ ತಿಳಿಸಿದ್ದಾರೆ.

ಈ ಬಗ್ಗೆ ಕಾಫಿ ಡೇ ಕಂಪನಿಯ ಕಡೆಯಿಂದ ಸ್ಪಷ್ಟನೆ ನೀಡಲಾಗಿದ್ದು ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಯ 1020 ಬೆಳೆಗಾರರಿಗೆ ಹಣ ನೀಡುವುದು ಬಾಕಿ ಇತ್ತು. ಕಳೆದ 11 ತಿಂಗಳಲ್ಲಿ 700ಕ್ಕೂ ಹೆಚ್ಚು ಬೆಳೆಗಾರರಿಗೆ ಹಣ ನೀಡಲಾಗಿದೆ. ಕೊರೊನಾ ಸಂಕಷ್ಟದ ಮಧ್ಯೆಯೂ ಬೆಳೆಗಾರರಿಗೆ ಹಣ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
A non-bailable warrant has been issued in a cheque bounce case against the directors of the Cafe Coffee Day company. One of the directors is former Chief Minister SM Krishna's daughter Malavika Hegde.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm