ಬ್ರೇಕಿಂಗ್ ನ್ಯೂಸ್
05-11-20 06:08 pm Headline Karnataka News Network ಕ್ರೈಂ
ಚಿಕ್ಕಮಗಳೂರು, ನವೆಂಬರ್ 05: ಕಾಫಿ ಡೇ ಮಾಲೀಕ ದಿವಂಗತ ಸಿದ್ಧಾರ್ಥ್ ಹೆಗ್ಡೆ ಪತ್ನಿ ಮಾಳವಿಕಾಗೆ ಬಂಧನದ ಭೀತಿ ಎದುರಾಗಿದೆ. ಮಾಳವಿಕ ಸಿದ್ಧಾರ್ಥ್ ಸೇರಿ ಕಾಫಿ ಡೇ ಕಂಪನಿಯ ಸೇರಿ 8 ಜನರಿಗೆ ಮೂಡಿಗೆರೆ ಜೆಎಂಎಫ್ ಕೋರ್ಟ್ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿದೆ.
ಚಿಕ್ಕಮಗಳೂರು ಜಿಲ್ಲೆಯ 300ಕ್ಕೂ ಹೆಚ್ಚು ಬೆಳೆಗಾರರಿಗೆ 100 ಕೋಟಿಗೂ ಅಧಿಕ ಹಣವನ್ನು ಎಬಿಸಿ ಕಂಪೆನಿ ಬಾಕಿ ಉಳಿಸಿಕೊಂಡಿದ್ದು ಇದರ ವಿರುದ್ಧ ಕಾಫಿ ಬೆಳೆಗಾರ ನಂದೀಶ್ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದರು.

ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಗ್ರಾಮದ ಕಾಫಿ ಬೆಳೆಗಾರ ನಂದೀಶ್, ಪ್ರತಿ ವರ್ಷ ಕಾಫಿಯನ್ನು ಎಬಿಸಿ ಕಂಪೆನಿಗೆ ನೀಡುತ್ತಿದ್ದರು. ಆದರೆ, ಸಿದ್ಧಾರ್ಥ್ ನಿಧನರಾದ ಬಳಿಕ ಬೆಳೆಗಾರರಿಗೆ ಕಂಪೆನಿಯಿಂದ ಬರುತ್ತಿದ್ದ ಹಣ ನಿಂತು ಹೋಗಿದೆ. ನಂದೀಶ್ ಪೋಸ್ಟ್ ಡೇಟೆಡ್ ಚೆಕ್ ಪಡೆದು ಹಣ ನಗದು ಮಾಡಿಕೊಳ್ಳುತ್ತಿದ್ದರು. ಅದರಂತೆ, ನಂದೀಶ್ ಹತ್ತು ಚೆಕ್ ಪಡೆದಿದ್ದು ಅದನ್ನು ಬ್ಯಾಂಕಿಗೆ ಹಾಕಿದಾಗ ಬೌನ್ಸ್ ಆಗಿತ್ತು.
ಚೆಕ್ ಬೌನ್ಸ್ ಹಿನ್ನೆಲೆಯಲ್ಲಿ ನಂದೀಶ್ ತನಗೆ ಬರಬೇಕಿದ್ದ 45.38 ಲಕ್ಷ ಹಣಕ್ಕಾಗಿ ಕೋರ್ಟಿಗೆ ದೂರು ಸಲ್ಲಿಸಿದ್ದರು. ಕಳೆದ ಅಕ್ಟೋಬರ್ 6ರಂದು ಎಬಿಸಿ ಕಂಪೆನಿ ಕಡೆಯಿಂದ ನಿರ್ದೇಶಕರು ಕೋರ್ಟಿಗೆ ಹಾಜರಾಗಬೇಕಿತ್ತು. ಹೀಗಾಗಿ ಕೋರ್ಟ್ ಆರೋಪಿಗಳ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. ಮುಂದಿನ ವಿಚಾರಣೆ ನ.11ಕ್ಕೆ ಇದ್ದು ಅದಕ್ಕೆ ಮುನ್ನ ಆರೋಪಿಗಳು ಕೋರ್ಟಿಗೆ ಹಾಜರಾಗಬೇಕೆಂದು ನಂದೀಶ್ ಪರ ವಕೀಲರು ಮಾಧ್ಯಮಕ್ಕೆ ತಿಳಿಸಿದ್ದಾರೆ.

ಈ ಬಗ್ಗೆ ಕಾಫಿ ಡೇ ಕಂಪನಿಯ ಕಡೆಯಿಂದ ಸ್ಪಷ್ಟನೆ ನೀಡಲಾಗಿದ್ದು ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಯ 1020 ಬೆಳೆಗಾರರಿಗೆ ಹಣ ನೀಡುವುದು ಬಾಕಿ ಇತ್ತು. ಕಳೆದ 11 ತಿಂಗಳಲ್ಲಿ 700ಕ್ಕೂ ಹೆಚ್ಚು ಬೆಳೆಗಾರರಿಗೆ ಹಣ ನೀಡಲಾಗಿದೆ. ಕೊರೊನಾ ಸಂಕಷ್ಟದ ಮಧ್ಯೆಯೂ ಬೆಳೆಗಾರರಿಗೆ ಹಣ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
A non-bailable warrant has been issued in a cheque bounce case against the directors of the Cafe Coffee Day company. One of the directors is former Chief Minister SM Krishna's daughter Malavika Hegde.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am