ಬ್ರೇಕಿಂಗ್ ನ್ಯೂಸ್
12-08-23 12:01 pm Mangalore Correspondent ಕ್ರೈಂ
ಪುತ್ತೂರು, ಆಗಸ್ಟ್ 12: ಮೋದಿ ಹಣ ಬ್ಯಾಂಕ್ ಖಾತೆಗೆ ಬಂದಿದೆ, ತೆಗೆಸಿ ಕೊಡುತ್ತೇನೆಂದು ಹೇಳಿ ವೃದ್ಧ ವ್ಯಕ್ತಿಯೊಬ್ಬರನ್ನು ನಂಬಿಸಿ ಅವರಿಂದಲೇ 7 ಸಾವಿರ ರೂಪಾಯಿ ಕಿತ್ತುಕೊಂಡು ಮೋಸಗೊಳಿಸಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದ್ದು, ಪೊಲೀಸ್ ದೂರು ದಾಖಲಾಗಿದೆ.
ಉಪ್ಪಿನಂಗಡಿ ಬಳಿಯ ಪದ್ಮುಂಜ ನಿವಾಸಿ 65 ವರ್ಷದ ವ್ಯಕ್ತಿಯೊಬ್ಬರು ಅಡಿಕೆ ಮಾರಾಟ ಮಾಡಿ ಹಣದೊಂದಿಗೆ ಹಿಂತಿರುಗುತ್ತಿದ್ದಾಗ ಬೈಕಿನಲ್ಲಿ ಬಂದಿದ್ದ ಯುವಕನೊಬ್ಬ ತುಳುವಿನಲ್ಲಿ ತನ್ನನ್ನು ಪರಿಚಯಿಸಿಕೊಂಡಿದ್ದಾನೆ. ಅಲ್ಲದೆ, ತಾನೀಗ ಕೆನರಾ ಬ್ಯಾಂಕ್ ನಲ್ಲಿದ್ದು, ಕೊರೊನಾ ಸಂದರ್ಭದಲ್ಲಿ ಮೋದಿಯವರ ಹಣ ಸಾಕಷ್ಟು ಬಂದಿದೆ. ನಿಮಗೆ ಹಣ ತೆಗೆಸಿಕೊಡುತ್ತೇನೆಂದು ಹೇಳಿ ಯಾಮಾರಿಸಿದ್ದಾನೆ. ಅಲ್ಲದೆ, ನಿಮ್ಮ ಬ್ಯಾಂಕ್ ಪಾಸ್ ಪುಸ್ತಕ, ಆಧಾರ್ ಕಾರ್ಡ್ ಜೆರಾಕ್ಸ್ ಕೊಟ್ಟರೆ ಸಾಕು. ಅದಕ್ಕಾಗಿ 7 ಸಾವಿರ ಕೊಟ್ಟರೆ ಎಲ್ಲ ಕೆಲಸ ನಾನು ಮಾಡಿಸಿಕೊಡುತ್ತೇನೆ ಎಂದು ಹೇಳಿ ನಂಬಿಕೆ ಹುಟ್ಟಿಸಿದ್ದಾನೆ.
ನೀವು ಬ್ಯಾಂಕ್ ಪಾಸ್ ಬುಕ್, ಆಧಾರ್ ಕಾರ್ಡ್ ತರುವುದಕ್ಕೂ ಮುನ್ನ 7 ಸಾವಿರ ರೂ. ತನಗೆ ನೀಡಿ, ಉಳಿದ ಅರ್ಜಿ ತುಂಬುವ ಕೆಲಸ ಮಾಡಿಸುತ್ತೇನೆ ಎಂದು ಹೇಳಿದ್ದು, ಅದರಂತೆ ಅಡಿಕೆ ಮಾರಿದ ಹಣದಲ್ಲಿ ವೃದ್ಧ ವ್ಯಕ್ತಿ ಹಣವನ್ನು ನೀಡಿದ್ದಾರೆ. ವೃದ್ಧ ವ್ಯಕ್ತಿ ಆಧಾರ್ ಕಾರ್ಡ್ ಜೊತೆಗೆ ಬರುವಷ್ಟರಲ್ಲಿ ಬೈಕ್ ಸಹಿತ ಯುವಕ ನಾಪತ್ತೆಯಾಗಿದ್ದ. ಆನಂತರ, ಎಷ್ಟು ಹುಡುಕಾಡಿದರೂ ಯುವಕ ಸಿಗದೇ ಇದ್ದುದರಿಂದ ಇತರೇ ಸಾರ್ವಜನಿಕರಿಗೆ ತಿಳಿಸಿದಾಗ ಮೋಸ ಹೋಗಿದ್ದು ತಿಳಿದುಬಂದಿದೆ. ಈ ಬಗ್ಗೆ ಹಣ ಕಳಕೊಂಡವರು ಪೊಲೀಸರಿಗೆ ದೂರು ನೀಡಿದ್ದು ಉಪ್ಪಿನಂಗಡಿ ಪೇಟೆಯ ಸಿಸಿ ಕ್ಯಾಮರಾ ಪರಿಶೀಲನೆ ನಡೆಸುತ್ತಿದ್ದಾರೆ.
ಮೋದಿ ಹಣ ಬಂದಿದೆ ಎಂದು ಹೇಳಿ ಅಮಾಯಕರಿಂದ ಹಣ ಎಗರಿಸುವ ಕೃತ್ಯ ಉಪ್ಪಿನಂಗಡಿ ಆಸುಪಾಸಿನಲ್ಲಿ ಹಲವು ಬಾರಿ ನಡೆದಿದ್ದು, ಪ್ರತಿ ಬಾರಿಯೂ 7 ಸಾವಿರ ರೂ. ಕೀಳುತ್ತಿರುವುದರ ಹಿಂದೆ ಒಬ್ಬನದ್ದೇ ಕೈವಾಡ ಇರುವ ಶಂಕೆ ಉಂಟಾಗಿದೆ.
Puttur Man cheats of 7 thousand to old man saying Modi money has come to Bank account.
13-08-26 10:19 pm
HK News Desk
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
14-08-26 10:22 am
HK News Staffer
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm