ಬ್ರೇಕಿಂಗ್ ನ್ಯೂಸ್
12-08-23 12:01 pm Mangalore Correspondent ಕ್ರೈಂ
ಪುತ್ತೂರು, ಆಗಸ್ಟ್ 12: ಮೋದಿ ಹಣ ಬ್ಯಾಂಕ್ ಖಾತೆಗೆ ಬಂದಿದೆ, ತೆಗೆಸಿ ಕೊಡುತ್ತೇನೆಂದು ಹೇಳಿ ವೃದ್ಧ ವ್ಯಕ್ತಿಯೊಬ್ಬರನ್ನು ನಂಬಿಸಿ ಅವರಿಂದಲೇ 7 ಸಾವಿರ ರೂಪಾಯಿ ಕಿತ್ತುಕೊಂಡು ಮೋಸಗೊಳಿಸಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದ್ದು, ಪೊಲೀಸ್ ದೂರು ದಾಖಲಾಗಿದೆ.
ಉಪ್ಪಿನಂಗಡಿ ಬಳಿಯ ಪದ್ಮುಂಜ ನಿವಾಸಿ 65 ವರ್ಷದ ವ್ಯಕ್ತಿಯೊಬ್ಬರು ಅಡಿಕೆ ಮಾರಾಟ ಮಾಡಿ ಹಣದೊಂದಿಗೆ ಹಿಂತಿರುಗುತ್ತಿದ್ದಾಗ ಬೈಕಿನಲ್ಲಿ ಬಂದಿದ್ದ ಯುವಕನೊಬ್ಬ ತುಳುವಿನಲ್ಲಿ ತನ್ನನ್ನು ಪರಿಚಯಿಸಿಕೊಂಡಿದ್ದಾನೆ. ಅಲ್ಲದೆ, ತಾನೀಗ ಕೆನರಾ ಬ್ಯಾಂಕ್ ನಲ್ಲಿದ್ದು, ಕೊರೊನಾ ಸಂದರ್ಭದಲ್ಲಿ ಮೋದಿಯವರ ಹಣ ಸಾಕಷ್ಟು ಬಂದಿದೆ. ನಿಮಗೆ ಹಣ ತೆಗೆಸಿಕೊಡುತ್ತೇನೆಂದು ಹೇಳಿ ಯಾಮಾರಿಸಿದ್ದಾನೆ. ಅಲ್ಲದೆ, ನಿಮ್ಮ ಬ್ಯಾಂಕ್ ಪಾಸ್ ಪುಸ್ತಕ, ಆಧಾರ್ ಕಾರ್ಡ್ ಜೆರಾಕ್ಸ್ ಕೊಟ್ಟರೆ ಸಾಕು. ಅದಕ್ಕಾಗಿ 7 ಸಾವಿರ ಕೊಟ್ಟರೆ ಎಲ್ಲ ಕೆಲಸ ನಾನು ಮಾಡಿಸಿಕೊಡುತ್ತೇನೆ ಎಂದು ಹೇಳಿ ನಂಬಿಕೆ ಹುಟ್ಟಿಸಿದ್ದಾನೆ.
ನೀವು ಬ್ಯಾಂಕ್ ಪಾಸ್ ಬುಕ್, ಆಧಾರ್ ಕಾರ್ಡ್ ತರುವುದಕ್ಕೂ ಮುನ್ನ 7 ಸಾವಿರ ರೂ. ತನಗೆ ನೀಡಿ, ಉಳಿದ ಅರ್ಜಿ ತುಂಬುವ ಕೆಲಸ ಮಾಡಿಸುತ್ತೇನೆ ಎಂದು ಹೇಳಿದ್ದು, ಅದರಂತೆ ಅಡಿಕೆ ಮಾರಿದ ಹಣದಲ್ಲಿ ವೃದ್ಧ ವ್ಯಕ್ತಿ ಹಣವನ್ನು ನೀಡಿದ್ದಾರೆ. ವೃದ್ಧ ವ್ಯಕ್ತಿ ಆಧಾರ್ ಕಾರ್ಡ್ ಜೊತೆಗೆ ಬರುವಷ್ಟರಲ್ಲಿ ಬೈಕ್ ಸಹಿತ ಯುವಕ ನಾಪತ್ತೆಯಾಗಿದ್ದ. ಆನಂತರ, ಎಷ್ಟು ಹುಡುಕಾಡಿದರೂ ಯುವಕ ಸಿಗದೇ ಇದ್ದುದರಿಂದ ಇತರೇ ಸಾರ್ವಜನಿಕರಿಗೆ ತಿಳಿಸಿದಾಗ ಮೋಸ ಹೋಗಿದ್ದು ತಿಳಿದುಬಂದಿದೆ. ಈ ಬಗ್ಗೆ ಹಣ ಕಳಕೊಂಡವರು ಪೊಲೀಸರಿಗೆ ದೂರು ನೀಡಿದ್ದು ಉಪ್ಪಿನಂಗಡಿ ಪೇಟೆಯ ಸಿಸಿ ಕ್ಯಾಮರಾ ಪರಿಶೀಲನೆ ನಡೆಸುತ್ತಿದ್ದಾರೆ.
ಮೋದಿ ಹಣ ಬಂದಿದೆ ಎಂದು ಹೇಳಿ ಅಮಾಯಕರಿಂದ ಹಣ ಎಗರಿಸುವ ಕೃತ್ಯ ಉಪ್ಪಿನಂಗಡಿ ಆಸುಪಾಸಿನಲ್ಲಿ ಹಲವು ಬಾರಿ ನಡೆದಿದ್ದು, ಪ್ರತಿ ಬಾರಿಯೂ 7 ಸಾವಿರ ರೂ. ಕೀಳುತ್ತಿರುವುದರ ಹಿಂದೆ ಒಬ್ಬನದ್ದೇ ಕೈವಾಡ ಇರುವ ಶಂಕೆ ಉಂಟಾಗಿದೆ.
Puttur Man cheats of 7 thousand to old man saying Modi money has come to Bank account.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm