ಬ್ರೇಕಿಂಗ್ ನ್ಯೂಸ್
12-08-23 12:01 pm Mangalore Correspondent ಕ್ರೈಂ
ಪುತ್ತೂರು, ಆಗಸ್ಟ್ 12: ಮೋದಿ ಹಣ ಬ್ಯಾಂಕ್ ಖಾತೆಗೆ ಬಂದಿದೆ, ತೆಗೆಸಿ ಕೊಡುತ್ತೇನೆಂದು ಹೇಳಿ ವೃದ್ಧ ವ್ಯಕ್ತಿಯೊಬ್ಬರನ್ನು ನಂಬಿಸಿ ಅವರಿಂದಲೇ 7 ಸಾವಿರ ರೂಪಾಯಿ ಕಿತ್ತುಕೊಂಡು ಮೋಸಗೊಳಿಸಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದ್ದು, ಪೊಲೀಸ್ ದೂರು ದಾಖಲಾಗಿದೆ.
ಉಪ್ಪಿನಂಗಡಿ ಬಳಿಯ ಪದ್ಮುಂಜ ನಿವಾಸಿ 65 ವರ್ಷದ ವ್ಯಕ್ತಿಯೊಬ್ಬರು ಅಡಿಕೆ ಮಾರಾಟ ಮಾಡಿ ಹಣದೊಂದಿಗೆ ಹಿಂತಿರುಗುತ್ತಿದ್ದಾಗ ಬೈಕಿನಲ್ಲಿ ಬಂದಿದ್ದ ಯುವಕನೊಬ್ಬ ತುಳುವಿನಲ್ಲಿ ತನ್ನನ್ನು ಪರಿಚಯಿಸಿಕೊಂಡಿದ್ದಾನೆ. ಅಲ್ಲದೆ, ತಾನೀಗ ಕೆನರಾ ಬ್ಯಾಂಕ್ ನಲ್ಲಿದ್ದು, ಕೊರೊನಾ ಸಂದರ್ಭದಲ್ಲಿ ಮೋದಿಯವರ ಹಣ ಸಾಕಷ್ಟು ಬಂದಿದೆ. ನಿಮಗೆ ಹಣ ತೆಗೆಸಿಕೊಡುತ್ತೇನೆಂದು ಹೇಳಿ ಯಾಮಾರಿಸಿದ್ದಾನೆ. ಅಲ್ಲದೆ, ನಿಮ್ಮ ಬ್ಯಾಂಕ್ ಪಾಸ್ ಪುಸ್ತಕ, ಆಧಾರ್ ಕಾರ್ಡ್ ಜೆರಾಕ್ಸ್ ಕೊಟ್ಟರೆ ಸಾಕು. ಅದಕ್ಕಾಗಿ 7 ಸಾವಿರ ಕೊಟ್ಟರೆ ಎಲ್ಲ ಕೆಲಸ ನಾನು ಮಾಡಿಸಿಕೊಡುತ್ತೇನೆ ಎಂದು ಹೇಳಿ ನಂಬಿಕೆ ಹುಟ್ಟಿಸಿದ್ದಾನೆ.
ನೀವು ಬ್ಯಾಂಕ್ ಪಾಸ್ ಬುಕ್, ಆಧಾರ್ ಕಾರ್ಡ್ ತರುವುದಕ್ಕೂ ಮುನ್ನ 7 ಸಾವಿರ ರೂ. ತನಗೆ ನೀಡಿ, ಉಳಿದ ಅರ್ಜಿ ತುಂಬುವ ಕೆಲಸ ಮಾಡಿಸುತ್ತೇನೆ ಎಂದು ಹೇಳಿದ್ದು, ಅದರಂತೆ ಅಡಿಕೆ ಮಾರಿದ ಹಣದಲ್ಲಿ ವೃದ್ಧ ವ್ಯಕ್ತಿ ಹಣವನ್ನು ನೀಡಿದ್ದಾರೆ. ವೃದ್ಧ ವ್ಯಕ್ತಿ ಆಧಾರ್ ಕಾರ್ಡ್ ಜೊತೆಗೆ ಬರುವಷ್ಟರಲ್ಲಿ ಬೈಕ್ ಸಹಿತ ಯುವಕ ನಾಪತ್ತೆಯಾಗಿದ್ದ. ಆನಂತರ, ಎಷ್ಟು ಹುಡುಕಾಡಿದರೂ ಯುವಕ ಸಿಗದೇ ಇದ್ದುದರಿಂದ ಇತರೇ ಸಾರ್ವಜನಿಕರಿಗೆ ತಿಳಿಸಿದಾಗ ಮೋಸ ಹೋಗಿದ್ದು ತಿಳಿದುಬಂದಿದೆ. ಈ ಬಗ್ಗೆ ಹಣ ಕಳಕೊಂಡವರು ಪೊಲೀಸರಿಗೆ ದೂರು ನೀಡಿದ್ದು ಉಪ್ಪಿನಂಗಡಿ ಪೇಟೆಯ ಸಿಸಿ ಕ್ಯಾಮರಾ ಪರಿಶೀಲನೆ ನಡೆಸುತ್ತಿದ್ದಾರೆ.
ಮೋದಿ ಹಣ ಬಂದಿದೆ ಎಂದು ಹೇಳಿ ಅಮಾಯಕರಿಂದ ಹಣ ಎಗರಿಸುವ ಕೃತ್ಯ ಉಪ್ಪಿನಂಗಡಿ ಆಸುಪಾಸಿನಲ್ಲಿ ಹಲವು ಬಾರಿ ನಡೆದಿದ್ದು, ಪ್ರತಿ ಬಾರಿಯೂ 7 ಸಾವಿರ ರೂ. ಕೀಳುತ್ತಿರುವುದರ ಹಿಂದೆ ಒಬ್ಬನದ್ದೇ ಕೈವಾಡ ಇರುವ ಶಂಕೆ ಉಂಟಾಗಿದೆ.
Puttur Man cheats of 7 thousand to old man saying Modi money has come to Bank account.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm