ಬ್ರೇಕಿಂಗ್ ನ್ಯೂಸ್
13-08-23 02:21 pm Mangalore Correspondent ಕ್ರೈಂ
ಉಳ್ಳಾಲ, ಆ.13: ರೌಡಿಗಳಿಗೆಲ್ಲ ಮನೆಯನ್ನ ಬಾಡಿಗೆ ನೀಡಬೇಡಿ ಎಂದು ಸಂಬಂಧಿಕರಲ್ಲಿ ಹೇಳಿದ ವ್ಯಕ್ತಿಯನ್ನ ಕತ್ತಿಯಿಂದ ಕಡಿದು ಕೊಲೆಗೆ ಯತ್ನಿಸಿರುವ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ನೆತ್ತಿಲಪದವು ಎಂಬಲ್ಲಿ ನಿನ್ನೆ ತಡರಾತ್ರಿ ವೇಳೆ ನಡೆದಿದೆ.
ನೆತ್ತಿಲಪದವು ನಿವಾಸಿ ಮನ್ಸೂರ್ (40) ಎಂಬವರನ್ನ ಕತ್ತಿಯಿಂದ ಕಡಿದು ಕೊಲೆಗೆ ಯತ್ನಿಸಲಾಗಿದೆ. ಉಳ್ಳಾಲದ ನಟೋರಿಯಸ್ ಟಾರ್ಗೆಟ್ ತಂಡದ ಕೋಟೆಪುರ ನಿವಾಸಿ ನಮೀರ್ ಹಂಝ ಕೊಲೆಗೆ ಯತ್ನಿಸಿದ ಆರೋಪಿಯಾಗಿದ್ದು ಕೃತ್ಯ ಎಸಗಿದ ಬಳಿಕ ತಲೆಮರೆಸಿಕೊಂಡಿದ್ದಾನೆ. ನಮೀರ್ ಹಂಝ ತನ್ನ ಸಹೋದರನಿಗೆ ಬಾಡಿಗೆ ಮನೆ ನೋಡಲೆಂದು ನೆತ್ತಿಲಪದವು ಬಳಿಯ ಮನ್ಸೂರ್ ಸಂಬಂಧಿಕರ ಮನೆಗೆ ಬಂದಿದ್ದ. ಈ ವೇಳೆ ಮನ್ಸೂರ್ ರೌಡಿಗಳಿಗೆ ಬಾಡಿಗೆ ಮನೆ ನೀಡದಂತೆ ಸಂಬಂಧಿಗಳಿಗೆ ತಿಳಿಸಿದ್ದರಂತೆ. ಪರಿಣಾಮ ಮನ್ಸೂರ್ ಹಾಗೂ ನಮೀರ್ ಹಂಝ ತಂಡಗಳ ನಡುವೆ ಮಾತಿನ ಚಕಮಕಿ ನಡೆದು, ಪರಸ್ಪರ ಹೊಡೆದಾಡಿದ್ದಾರೆ. ಕುಪಿತಗೊಂಡ ನಮೀರ್ ಕತ್ತಿಯಿಂದ ಮನ್ಸೂರ್ ಕೈಗೆ ಕಡಿದು ಕೊಲೆಗೆ ಯತ್ನಿಸಿದ್ದಾನೆ. ಗಾಯಾಳು ಮನ್ಸೂರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾಲ ಬಿಚ್ಚಿದ ಟಾರ್ಗೆಟ್ ತಂಡ!
ಐದಾರು ವರ್ಷಗಳ ಹಿಂದೆ ಉಳ್ಳಾಲದಲ್ಲಿ ಹನಿಟ್ರ್ಯಾಪ್ , ಮುಕ್ಕಚ್ಚೇರಿಯಲ್ಲಿ ಬಿಜೆಪಿ ಕಾರ್ಯಕರ್ತ ಜುಬೈರ್ ಹತ್ಯೆ ಸೇರಿದಂತೆ ಅನೇಕ ಕೊಲೆಯತ್ನ, ಹಲ್ಲೆ ಪ್ರಕರಣಗಳಲ್ಲಿ ಟಾರ್ಗೆಟ್ ತಂಡ ಸಕ್ರಿಯವಾಗಿ ಸದ್ದು ಮಾಡಿತ್ತು. ತಂಡದ ಪ್ರಮುಖ ಇಲ್ಯಾಸ್ ಕೊಲೆಯಾದ ನಂತರ ಟಾರ್ಗೆಟ್ ತಂಡ ಸೈಲೆಂಟಾಗಿತ್ತು. ಇದೇ ತಂಡದಲ್ಲಿದ್ದ ನಮೀರ್ ಹಂಝ ಕೂಡ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ.
Mangalore Target gang rowdy member attacks man using knife at Konaje over House rent issue.
13-08-26 02:22 pm
HK News Staffer
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 01:17 pm
HK News Staffer
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm