ಬ್ರೇಕಿಂಗ್ ನ್ಯೂಸ್
18-08-23 03:47 pm Mangalore Correspondent ಕ್ರೈಂ
ಬಂಟ್ವಾಳ, ಆಗಸ್ಟ್ 18: ಬಂಟ್ವಾಳದ ಕಳ್ಳಿಗೆಯ ಕೆಎಸ್ಸಾರ್ಟಿಸಿ ಡಿಪೋ ಬಳಿಯಿರುವ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಗೋದಾಮಿನಲ್ಲಿ
ಇಡಲಾಗಿದ್ದ ಕೋಟ್ಯಂತರ ಮೌಲ್ಯದ ಪಡಿತರ ಅಕ್ಕಿ ನಾಪತ್ತೆಯಾಗಿದ್ದು, ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗೋಣಿ ಚೀಲದಲ್ಲಿ ತುಂಬಿಡಲಾಗಿದ್ದ ಸುಮಾರು 1.32 ಕೋಟಿ ರೂಪಾಯಿ ಮೌಲ್ಯದ 3892 ಕ್ವಿಂಟಾಲ್ ಅಕ್ಕಿ ಕಾಣೆಯಾಗಿದ್ದಾಗಿ ಪೊಲೀಸರಿಗೆ ದೂರು ನೀಡಲಾಗಿದೆ. ರೇಷನ್ ವಿತರಣೆಯಲ್ಲಿ ವಿಳಂಬ ಆಗಿರುವುದರಿಂದ ಸಂಶಯಗೊಂಡ ಜಿಲ್ಲಾ ಮಟ್ಟದ ಅಧಿಕಾರಿಗಳು ಗೋದಾಮಿನಲ್ಲಿ ತಪಾಸಣೆ ನಡೆಸಿದಾಗ ಅಕ್ಕಿ ಗೋಣಿ ಕಡಿಮೆಯಿರುವುದು ಕಂಡುಬಂದಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲಾ ಪಡಿತರ ಇಲಾಖೆಯ ವ್ಯವಸ್ಥಾಪಕ ಶರತ್ ಕುಮಾರ್, ಬಂಟ್ವಾಳದ ಗೋದಾಮಿನ ಮ್ಯಾನೇಜರ್ ವಿಜಯ್ ಎಂಬವರ ವಿರುದ್ಧ ಪೊಲೀಸ್ ದೂರು ನೀಡಿದ್ದಾರೆ.

ಈಗಾಗಲೇ ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಯಡಿ ತಲಾ ಹತ್ತು ಕೇಜಿಯಂತೆ ಅಕ್ಕಿ ಪೂರೈಸಲು ಅಕ್ಕಿ ದಾಸ್ತಾನಿಲ್ಲದೆ, ಅದರ ಬದಲು ತಲಾ 5 ಕೇಜಿಯಂತೆ ಹಣ ಕೊಡಲಾಗುತ್ತಿದೆ. ಆದರೆ, ಇಲ್ಲಿ ರಾಜ್ಯ ಸರಕಾರದಿಂದ ಪೂರೈಕೆಯಾಗಿರುವ ಪಡಿತರ ಅಕ್ಕಿಯೇ ಇಲ್ಲಿ ರೇಶನ್ ಅಂಗಡಿಗಳಿಗೆ ತಲುಪದೆ ಮಧ್ಯವರ್ತಿಗಳ ಪಾಲಾಗಿದೆಯೇ ಎನ್ನುವ ಸಂಶಯ ಉಂಟಾಗಿದೆ. ಗೋದಾಮು ವ್ಯವಸ್ಥಾಪಕನ ಕೈವಾಡ ಇದೆಯೇ, ಯಾರು ಇದರ ಹಿಂದೆ ಇದ್ದಾರೆ ಎನ್ನುವ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಘಟನೆ ಬಗ್ಗೆ ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದು, ಕ್ರಮಕ್ಕೆ ಆಗ್ರಹಿಸಿದ್ದಾರೆ.
Bantwal 3800 quintal rice worth 1.32 crores stolen from Gowdown at Bantwal in Mangalore.
13-08-26 02:22 pm
HK News Staffer
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 03:22 pm
HK News Staffer
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm