ಬ್ರೇಕಿಂಗ್ ನ್ಯೂಸ್
18-08-23 04:23 pm HK News Desk ಕ್ರೈಂ
ಇಂಪಾಲ, ಆಗಸ್ಟ್ 18: ಮಣಿಪುರದ ಉಖ್ರುಲ್ ಜಿಲ್ಲೆಯಲ್ಲಿ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಕುಕಿ ಸಮುದಾಯದ ಮೂವರನ್ನು ಶುಕ್ರವಾರ ಹತ್ಯೆ ಮಾಡಿದ್ದಾರೆ.
ಪೊಲೀಸರ ಪ್ರಕಾರ, ನಾಗಾ ಬುಡಕಟ್ಟು ಜನಾಂಗದ ತಂಗ್ಖುಲ್ಗಳ ಪ್ರಾಬಲ್ಯವಿರುವ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಕುಕಿ ಬುಡಕಟ್ಟು ಜನಾಂಗದವರು ವಾಸಿಸುವ ತೌವೈ ಕುಕಿ ಎಂಬ ಗ್ರಾಮದಲ್ಲಿ ಈ ಘಟನೆಯು ಮುಂಜಾನೆ 4:30 ರ ಸುಮಾರಿಗೆ ನಡೆದಿದೆ. ಜಿಲ್ಲೆಯ ಉಖ್ರುಲ್ ಪಟ್ಟಣದಿಂದ ಸುಮಾರು 47 ಕಿಮೀ ದೂರದಲ್ಲಿ ಈ ಗ್ರಾಮವಿದೆ.
'ನಮ್ಮ ಮಾಹಿತಿಯ ಪ್ರಕಾರ, ಶಸ್ತ್ರಸಜ್ಜಿತ ದುಷ್ಕರ್ಮಿಗಳ ಗುಂಪು ಗ್ರಾಮದ ಪೂರ್ವಕ್ಕೆ ಇರುವ ಬೆಟ್ಟಗಳಿಂದ ಗ್ರಾಮವನ್ನು ಸಮೀಪಿಸಿತು. ಗ್ರಾಮದ ಗಾರ್ಡ್ಗಳ ಮೇಲೆ ಗುಂಡು ಹಾರಿಸಲು ಪ್ರಾರಂಭಿಸಿತು. ಘಟನೆಯಲ್ಲಿ ಗ್ರಾಮದ ಮೂವರು ಸಾವನ್ನಪ್ಪಿದ್ದಾರೆ. ಯಾವುದೇ ಗಾಯಗಳ ವರದಿಯಾಗಿಲ್ಲ' ಎಂದು ಉಖ್ರುಲ್ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಎನ್ ವಶುಮ್ ಹೇಳಿದ್ದಾರೆ.
ಘಟನೆಯ ನಂತರ, ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದೆ. ಈ ಪ್ರಕರಣದಲ್ಲಿ ಭಾಗಿಯಾದವರನ್ನು ಹಿಡಿಯಲು ರಾಜ್ಯ ಪೊಲೀಸರು ಮತ್ತು ಭಾರತೀಯ ಸೇನೆಯು ಜಂಟಿ ಕಾರ್ಯಾಚರಣೆ ನಡೆಸುತ್ತಿದೆ ಎಂದು ಎಸ್ಪಿ ತಿಳಿಸಿದ್ದಾರೆ.
ಈ ಘಟನೆಯು ಮೈತೇಯಿ ಮತ್ತು ಕುಕಿಗಳ ನಡುವೆ ನಡೆಯುತ್ತಿರುವ ಘರ್ಷಣೆಗೆ ಸಂಬಂಧಿಸಿದೆ ಎಂದು ಎಸ್ಪಿ ಹೇಳಿದ್ದಾರೆ. ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿದ್ದರೂ ದುಷ್ಕರ್ಮಿಗಳು ಈಗಾಗಲೇ ಪರಾರಿಯಾಗಿದ್ದಾರೆ. ಆದರೆ ದಾಳಿಕೋರರ ಪತ್ತೆಗಾಗಿ ಕೂಂಬಿಂಗ್ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆಗಸ್ಟ್ 5 ರಂದು, ಬಿಷ್ಣುಪುರ್ ಮತ್ತು ಚುರಾಚಂದ್ಪುರ ಜಿಲ್ಲೆಗಳಲ್ಲಿ ಎರಡು ಸಮುದಾಯಗಳ ನಡುವೆ ಗುಂಡಿನ ದಾಳಿ ನಡೆದಿತ್ತು. ಈ ಪ್ರತ್ಯೇಕ ಘಟನೆಗಳಲ್ಲಿ ಐವರು ಸಾವನ್ನಪ್ಪಿದ್ದರು. ಅದರಲ್ಲಿ ಮೂವರು ಮೈತೇಯಿ ಮತ್ತು ಇಬ್ಬರು ಕುಕಿಗಳು ಸಾವನ್ನಪ್ಪಿದ್ದರು.
ಮಣಿಪುರದಲ್ಲಿ ಮೊದಲ ಬಾರಿಗೆ ಮೇ 3 ರಂದು ಚುರಾಚಂದ್ಪುರ ಪಟ್ಟಣದಲ್ಲಿ ಘರ್ಷಣೆಗಳು ಪ್ರಾರಂಭವಾದವು. ಮೈತೀಸ್ಗೆ ಘೋಷಿಸಿದ ಮೀಸಲಾತಿಯನ್ನು ವಿರೋಧಿಸಿ ಕುಕಿ ಗುಂಪುಗಳು ಪ್ರತಿಭಟನೆ ನಡೆಸಿದ್ದವು. ಇದು ವ್ಯಾಪಕ ಹಿಂಸಾಚಾರಕ್ಕೆ ಕಾರಣವಾಯಿತು.
ಈ ವರೆಗೂ ನಡೆದ ಘರ್ಷಣೆಗಳು 160 ಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ. ಸುಮಾರು 50,000 ಜನರನ್ನು ಸ್ಥಳಾಂತರಿಸಲಾಗಿದೆ. ರಾಜ್ಯದ ಜನಸಂಖ್ಯೆಯ ಸುಮಾರು ಶೇ 53 ರಷ್ಟು ಮೈತೇಯಿ ಜನರಿದ್ದರೆ, ಕುಕಿಗಳು ಸುಮಾರು ಶೇ 16 ರಷ್ಟಿದ್ದಾರೆ.
Ukhrul SP said that the security measures have been beefed up and joint operations by state police and the Indian Army are underway to nab those involved.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
20-06-25 10:19 pm
HK News Desk
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
20-06-25 11:04 pm
Mangalore Correspondent
Mangalore Forest Guard, Someshwara Beach, U T...
20-06-25 09:54 pm
Tulu, Panchayat, Mangalore, Taranath Gatti K...
20-06-25 09:02 pm
Jeppinamogaru, Accident, Mangalore: ಕುಡಿದ ನಶೆ...
20-06-25 07:10 pm
Chakravarthy Sulibele: ಕುಂದಾಪುರದಲ್ಲಿ ಅಖಂಡ ಭಾರ...
20-06-25 03:54 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm