ಬ್ರೇಕಿಂಗ್ ನ್ಯೂಸ್
18-08-23 09:58 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 18: ಬೆಂಗಳೂರಿನಲ್ಲಿ ಕೆಲಸಕ್ಕಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಮೂಲದ ವ್ಯಕ್ತಿಯೊಬ್ಬರು ಪದೋನ್ನತಿ ಹೊಂದಿ ಸೌದಿ ಅರೇಬಿಯಾಕ್ಕೆ ತೆರಳಿದ್ದ ವೇಳೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಲ್ಲಿ ಉದ್ಯೋಗದಲ್ಲಿರುವಾಗಲೇ ಹ್ಯಾಕರ್ ಗಳ ಕಾಟಕ್ಕೆ ಸಿಲುಕಿ ತಾನು ಮಾಡದ ತಪ್ಪಿಗೆ ಜೈಲು ಪಾಲಾಗಿದ್ದಾರೆ.
ಕಡಬ ತಾಲೂಕು ಐತ್ತೂರು ಗ್ರಾಮದ ಮೂಜೂರು ನಿವಾಸಿ ಚಂದ್ರಶೇಖರ್ (34) ಸೌದಿ ಅರೇಬಿಯಾದ ರಿಯಾದ್ ನಲ್ಲಿ ಜೈಲು ಶಿಕ್ಷೆಗೆ ಒಳಗಾದವರು. ಅಲ್ಪಾನರ್ ಸೆರಾಮಿಕ್ಸ್ ಎನ್ನುವ ಕಂಪನಿಯಲ್ಲಿ ಈ ಹಿಂದೆ ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿದ್ದ ಚಂದ್ರಶೇಖರ್ 2022ರಲ್ಲಿ ಭಡ್ತಿ ಪಡೆದು ಸೌದಿಗೆ ತೆರಳಿ ಕೆಲಸ ಆರಂಭಿಸಿದ್ದರು. ಕಳೆದ ನವೆಂಬರ್ ತಿಂಗಳಲ್ಲಿ ರಿಯಾದ್ ನಲ್ಲಿ ಮೊಬೈಲ್ ಸಿಮ್ ಖರೀದಿಗೆಂದು ತೆರಳಿದ್ದರು. ಅರ್ಜಿ ತುಂಬಿಸುತ್ತಿದ್ದಾಗ ಎರಡು ಬಾರಿ ಹೆಬ್ಬೆಟ್ಟು ಸಹಿ ನೀಡಿದ್ದರು.
ವಾರದ ಬಳಿಕ ಅವರಿಗೆ ಅವರಿಗೆ ಅರೇಬಿಕ್ ಭಾಷೆಯಲ್ಲಿ ಹೊಸ ದೂರವಾಣಿ ಸಂಖ್ಯೆಗೆ ಸಂದೇಶ ಬಂದಿತ್ತು. ಎರಡು ದಿನಗಳ ಬಳಿಕ ಅಪರಿಚಿತ ದೂರವಾಣಿ ಕರೆಯೊಂದು ಬಂದಿದ್ದು, ಮೊಬೈಲ್ ಸಂಖ್ಯೆಗೆ ಸಂಬಂಧಿಸಿ ಮಾಹಿತಿ ಕೇಳಿ ಓಟಿಪಿ ನಂಬರ್ ಕೇಳಿದ್ದರು. ಒಂದು ವಾರ ಕಳೆಯುವಷ್ಟರಲ್ಲಿ ಅಲ್ಲಿನ ಪೊಲೀಸರು ಬಂದು ಇವರನ್ನು ಬಂಧಿಸಿದ್ದರು. ಪೊಲೀಸರ ಪ್ರಕಾರ, ಚಂದ್ರಶೇಖರ್ ಹೆಸರಲ್ಲಿ ನಕಲಿ ಬ್ಯಾಂಕ್ ಖಾತೆ ತೆರೆದಿದ್ದು, ಅದರಿಂದ ಬೇರೊಬ್ಬ ಮಹಿಳೆಯ ಖಾತೆಯಿಂದ 22 ಸಾವಿರ ರಿಯಾಲ್ ಹಣ ಜಮೆಯಾಗಿತ್ತು. ಯಾರೋ ಹ್ಯಾಕರ್ಸ್ ಇದನ್ನು ಚಂದ್ರಶೇಖರ್ ಗೆ ತಿಳಿಯದಂತೆ ಮಾಡಿದ್ದು, ಆ ಹಣ ಕೆಲವೇ ಹೊತ್ತಲ್ಲಿ ಬೇರೆ ದೇಶಕ್ಕೆ ರವಾನೆಯಾಗಿತ್ತು. ಈ ಬಗ್ಗೆ ಮಹಿಳೆ ಚಂದ್ರಶೇಖರ್ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ಅಧಿಕಾರಿಗಳು ಇವರನ್ನು ಬಂಧಿಸಿದ್ದರು.
ಮದುವೆ ತಯಾರಿಯಲ್ಲಿದ್ದಾಗಲೇ ಬಂಧನ
ಚಂದ್ರಶೇಖರ್ ಅವರಿಗೆ ಊರಿನಲ್ಲಿ ಹೆಣ್ಣು ಗೊತ್ತುಪಡಿಸಿ 2023ರ ಜನವರಿಯಲ್ಲಿ ಮದುವೆ ನಿಶ್ಚಿತಾರ್ಥಕ್ಕೆ ದಿನ ನಿಗದಿ ಮಾಡಲಾಗಿತ್ತು. ಮದುವೆಯ ದಿನಾಂಕವನ್ನೂ ನಿರ್ಧರಿಸಲಾಗಿತ್ತು. ಮದುವೆ ಸಿದ್ಧತೆಯಲ್ಲಿದ್ದಾಗಲೇ ಚಂದ್ರಶೇಖರ್ ತಾನು ಮಾಡದ ತಪ್ಪಿನಿಂದಾಗಿ ಜೈಲು ಸೇರುವಂತಾಗಿದೆ. ಕಳೆದ ಎಂಟು ತಿಂಗಳಿನಿಂದ ಆತನ ಕುಟುಂಬ ಮಗನನ್ನು ಬಿಡಿಸಿ ತರಲು ಶ್ರಮಿಸುತ್ತಿದೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮೂಲಕ ವಿದೇಶಾಂಗ ಇಲಾಖೆಯ ನೆರವನ್ನೂ ಯಾಚಿಸಿದೆ. ಅಲ್ಲದೆ, ಚಂದ್ರಶೇಖರ್ ಅವರನ್ನು ಜೈಲಿನಿಂದ ಹೊರತರಲು ಆತನ ಗೆಳೆಯರು ಸೇರಿ 10 ಲಕ್ಷ ರೂ. ಒಟ್ಟು ಸೇರಿಸಿ ಅಲ್ಲಿನ ವಕೀಲರಿಗೆ ನೀಡಿದ್ದಾರೆ. ಆದರೆ ಯಾವುದೂ ಪ್ರಯೋಜನವಾಗಿಲ್ಲ ಎಂದು ಚಂದ್ರಶೇಖರ್ ಅವರ ನಿಕಟವರ್ತಿ ಶ್ರೀಧರ್ ಗೌಡ ಕೊಕ್ಕಡ ಮತ್ತು ಎನ್ಇಸಿಎಫ್ ಕಾರ್ಯದರ್ಶಿ ಶಶಿಧರ್ ಶೆಟ್ಟಿ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ್ದಾರೆ.
Conned by hackers, Kadaba youth arrested in Riyadh prison, family urges for his release in Mangalore. A youth, native of Kadaba, who had gone to Saudi Arabia on employment was trapped by bank account hackers and is languishing presently in a prison in Riyadh. His family members have urged union government for the release of the innocent youth.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm