ಬ್ರೇಕಿಂಗ್ ನ್ಯೂಸ್
19-08-23 11:10 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 20 : ಸಿಕ್ಕಿಂ ಮೂಲದ 30 ವರ್ಷದ ವ್ಯಕ್ತಿಯ ಮೇಲೆ ದುಷ್ಕರ್ಮಿಗಳ ಗುಂಪು ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ನಗರದ ಇಲೆಕ್ಟ್ರಾನಿಕ್ಸ್ ಸಿಟಿಯಲ್ಲಿ ಬುಧವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ದಿನೇಶ್ ಸುಬ್ಬ ಹಲ್ಲೆಗೊಳಗಾದ ವ್ಯಕ್ತಿ. ಪಶ್ಚಿಮ ಸಿಕ್ಕಿಂ ಮೂಲದವರಾಗಿದ್ದು ಇಲೆಕ್ಟ್ರಾನಿಕ್ಸ್ ಸಿಟಿ 1ನೇ ಹಂತದಲ್ಲಿ ಪತ್ನಿ ಹಾಗೂ ಮಗುವಿನೊಂದಿಗೆ ವಾಸವಿದ್ದಾರೆ. ನಗರದ ಹೋಟೆಲ್ನಲ್ಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ. ವಿವಾಹ ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ಸಹೋದರ ಹಾಗೂ ಸ್ನೇಹತರೊಂದಿಗೆ ಪಾರ್ಟಿ ಮಾಡಿ ಬುಧವಾರ ಬೆಳಗಿನ ಜಾವ 3-4 ಗಂಟೆ ಸುಮಾರಿಗೆ ಮನೆಗೆ ವಾಪಸ್ಸಾಗುತ್ತಿದ್ದರು.
ಇವರು ದೊಡ್ಡತೊಗೂರಿನ ಪಿಸಿಆರ್ ಗಾರ್ಡನ್ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ಸ್ಥಳದಲ್ಲಿದ್ದ ದುಷ್ಕರ್ಮಿಗಳ ಗುಂಪೊಂದು ದಿನೇಶ್ ಅವರನ್ನು ನೋಡಿ, ಚೈನೀಸ್, ಚೈನೀಸ್ ಎಂದು ಕರೆದು ಅಡ್ಡಗಟ್ಟಿದ್ದಾರೆ. ಈ ವೇಳೆ ನಾನು ಸಿಕ್ಕಿಂ ಮೂಲದವನು, ಭಾರತೀಯ ಎಂದು ದಿನೇಶ್ ಹೇಳಿದರೂ ಕೇಳದೆ ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ. ಬಳಿಕ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಸ್ಥಳೀಯ ಕಟ್ಟಡದ ಭದ್ರತಾ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಗಂಭೀರ ಗಾಯಗೊಂಡ ದಿನೇಶ್ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದು, ಮುಖ ಹಾಗೂ ತಲೆಗೆ 9 ಹೊಲಿಗೆಗಳನ್ನು ಹಾಕಲಾಗಿದೆ.
ಮನೆಯಿಂದ 100 ಮೀಟರ್ ದೂರದಲ್ಲಿ ಘಟನೆ ನಡೆದಿದೆ. ಮೂವರು ದುಷ್ಕರ್ಮಿಗಳು ಚೈನೀಸ್ ಎಂದು ಕರೆದು, ಸಹೋದರನ ಮೇಲೆ ದಾಳಿ ನಡೆಸಿದ್ದಾರೆ. ಇದೊಂದು ಜನಾಂಗೀಯ ದಾಳಿಯಾಗಿದೆ. ಬೆಡ್ ರೆಸ್ಟ್ ನಲ್ಲಿರುವಂತೆ ಸಹೋದರನಿಗೆ ವೈದ್ಯರು ಸಲಹೆ ನೀಡಿದ್ದಾರೆಂದು ನಗರದಲ್ಲಿ 2009ರಿಂದಲೂ ವಾಸವಿರುವ ದಿನೇಶ್ ಅವರ ಸಹೋದರ ದೀಪಕ್ ದೊರ್ಜಿ ಹೇಳಿದ್ದಾರೆ.
In what appears to be a racially motivated attack, a 30-year-old man from Sikkim was beaten up badly by three miscreants at Electronics City on Wednesday. The victim has been identified as K Dinesh Subba, a native of West Sikkim and a resident of Electronics City, Phase I. He works as a waiter at a hotel in Neeladri Nagar. He was discharged from a hospital with nine stitches on his head and face.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 02:02 pm
HK News Desk
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm