ಬ್ರೇಕಿಂಗ್ ನ್ಯೂಸ್
22-08-23 01:19 pm HK News Desk ಕ್ರೈಂ
ಮಡಿಕೇರಿ, ಆಗಸ್ಟ್ 22: ಇಲ್ಲಿನ ಮೆಡಿಕಲ್ ಕಾಲೇಜು ಆವರಣದಲ್ಲಿಪುಂಡಾಟದ ವರ್ತನೆ ತೋರಿದ್ದಲ್ಲದೆ, ಅಶ್ಲೀಲ ಪ್ರದರ್ಶನ ಮಾಡಿದ್ದ ಆರೋಪಿಗಳಲ್ಲಿ ಒಬ್ಬನನ್ನು ಮಡಿಕೇರಿ ಪೊಲೀಸರು ಬಂಧಿಸಿದ್ದಾರೆ.
ಮಧ್ಯರಾತ್ರಿಯ ಹೊತ್ತು ಇಲ್ಲಿನ ಲೇಡಿಸ್ ಹಾಸ್ಟೆಲ್ ಆವರಣಕ್ಕೆಕೆಲವು ಪುಂಡ ಯುವಕರು ಆಗಮಿಸಿ ಪುಂಡಾಟಿಕೆ ನಡೆಸುವುದಲ್ಲದೆ, ಅಲ್ಲೇ ಮುಕ್ತವಾಗಿ ಹಸ್ತಮೈಥುನ ನಡೆಸುತ್ತಿರುವ ಬಗ್ಗೆ ಈಗಾಗಲೇ ಹಲವು ಬಾರಿ ದೂರು ನೀಡಲಾಗಿತ್ತು. ಆದರೆ, ಯಾರೂ ಇದನ್ನು ಗಂಭೀರವಾಗಿ ತೆಗೆದುಕೊಳ್ಳದೆ ಇದ್ದಾಗ ಸೋಮವಾರ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ದುಷ್ಟ ಕೂಟದ ಅಸಭ್ಯ ವರ್ತನೆಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾದರೂ ಕ್ರಮ ಕೈಗೊಳ್ಳದ ವಿರುದ್ಧ ಸಿಟ್ಟಿಗೆದ್ದಿದ್ದರು. ಇದರ ಬೆನ್ನಿಗೇ ಒಬ್ಬ ಆರೋಪಿಯ ಅರೆಸ್ಟ್ ಆಗಿದೆ.
ಸೋಮವಾರ ನಡೆದ ಪ್ರತಿಭಟನೆ ವೇಳೆ ಮಡಿಕೇರಿಯ ಪೊಲೀಸ್ ಅಧಿಕಾರಿಗಳು ಆಗಮಿಸಿ ಆಡಳಿತ ಮಂಡಳಿ, ವಿದ್ಯಾರ್ಥಿನಿಯರಿಗೆ ಎದುರಾಗಿರುವ ಅಸುರಕ್ಷಿತ ಭಾವವನ್ನು ದೂರ ಮಾಡಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿತ್ತು. ತಕ್ಷಣದಿಂದಲೇ ಕಾರ್ಯಪ್ರವೃತ್ತರಾದ ಮಡಿಕೇರಿ ಪೊಲೀಸರು ಕತ್ತಲೆಕಾಡು ನಿವಾಸಿ ಸಿಜಿಲ್(22) ಎಂಬಾತನನ್ನು ಬಂಧಿಸಿದ್ದಾರೆ.

ಕಾಲೇಜು ಮತ್ತು ಹಾಸ್ಟೆಲ್ ಆವರಣದ ಸಿಸಿ ಟಿವಿ ಕ್ಯಾಮೆರಾಗಳಲ್ಲಿ ಪುಂಡರ ವರ್ತನೆಯ ದೃಶ್ಯಾವಳಿಗಳು ಸೆರೆಯಾಗಿರುವುದನ್ನು ವಿದ್ಯಾರ್ಥಿಗಳು ಉಲ್ಲೇಖಿಸಿದ್ದರು. ಪೊಲೀಸರು ದೃಶ್ಯಾವಳಿ ಆಧರಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಸಿಜಿಲ್ ಬೈಕ್ನಲ್ಲಿ ಬಂದು ಹುಡುಗಿಯರಿಗೆ ತೊಂದರೆ ಮಾಡುತ್ತಿದ್ದುದಲ್ಲದೆ, ಮಧ್ಯರಾತ್ರಿಯ ಹೊತ್ತು ಹಾಸ್ಟೆಲ್ ಎದುರು ಬಂದು ಅಸಭ್ಯವಾಗಿ ವರ್ತಿಸುತ್ತಿದ್ದ ಎನ್ನಲಾಗಿದೆ.
ಪ್ರಸಕ್ತ ಸಿಜಿಲ್ನನ್ನು ಬಂಧಿಸಲಾಗಿದೆ. ಆದರೆ, ಈ ದುಷ್ಕೃತ್ಯದಲ್ಲಿ ಇನ್ನೂ ಹಲವು ಯುವಕರು ಭಾಗಿಯಾಗಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅವರ ಮೇಲೂ ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹವಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
Kodagu Institute of Medical Science students stage protest over indecent behaviour by boys of Masturbation. One arrested by Police after protest. The students said that miscreants have been behaving indecently in front of them. The act has been recorded on CCTV. Fear has gripped the students, they alleged.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 02:02 pm
HK News Desk
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm