ಬ್ರೇಕಿಂಗ್ ನ್ಯೂಸ್
            
                        07-11-20 11:45 am Mangalore Correspondent ಕ್ರೈಂ
            ಉಳ್ಳಾಲ, ನವೆಂಬರ್ 07: ಇಲ್ಲಿನ ಬಗಂಬಿಲ ರಸ್ತೆಯಲ್ಲಿ ಯುವತಿಯ ಸರ ಕಳವು ನಡೆಸಿದ ಆರೋಪಿಯನ್ನು ಮೂರೇ ಗಂಟೆಗಳಲ್ಲಿ ಎಸಿಪಿ ನೇತೃತ್ವದ ಉಳ್ಳಾಲ ಹಾಗೂ ಕೊಣಾಜೆ ಪೊಲೀಸರ ತಂಡ ದೇರಳಕಟ್ಟೆಯಲ್ಲಿ ಬಂಧಿಸಿದ್ದಾರೆ.
ಕೇರಳದ ಕಣ್ಣೂರು ಮೂಲದ ಸುಲ್ತಾನ್ (28) ಬಂಧಿತ ಆರೋಪಿ. ದೇರಳಕಟ್ಟೆಯಲ್ಲಿರುವ ಹೊಟೇಲೊಂದರಲ್ಲಿ ಕೆಲಸಕ್ಕಿದ್ದ ಈತ ಕಳವು ಕೃತ್ಯದಲ್ಲಿ ಭಾಗಿಯಾಗಿದ್ದಾನೆ. ಬಗಂಬಿಲ ಎಂಬಲ್ಲಿ ನಿನ್ನೆ ಸಂಜೆ ಕೆಲಸ ಮುಗಿಸಿ ಮನೆ ಕಡೆಗೆ ತೆರಳುತ್ತಿದ್ದ ನಿಶಾ ಎಂಬವರ ಕುತ್ತಿಗೆಯಿಂದ ಒಂದು ಪವನ್ ಬೆಲೆಬಾಳುವ ಚಿನ್ನದ ಸರವನ್ನು ಬುಲೆಟ್ ಬೈಕಿನಲ್ಲಿ ಬಂದಿದ್ದ ಆರೋಪಿ ಸುಲ್ತಾನ್ ಕಳವು ನಡೆಸಿದ್ದ. ಈತನ ಕಳವು ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಉಳ್ಳಾಲ ಪೊಲೀಸರು ಅಲ್ಲಲ್ಲಿ ಬಂದೋಬಸ್ತ್ ನಡೆಸಿ ತಪಾಸಣೆ ಆರಂಭಿಸಿದ್ದರು. ಕೊಣಾಜೆ ಠಾಣಾ ಕ್ರೈಂ ತಂಡದ ಸಹಕಾರವನ್ನು ಪಡೆದು ತಪಾಸಣೆ ಆರಂಭಿಸಿದಾಗ ಸಿಸಿಟಿವಿಯಲ್ಲಿ ಸೆರೆಸಿಕ್ಕ ಬುಲೆಟ್ ಮತ್ತು ಆರೋಪಿಯ ಟೀಶಟ್೯ ಆಧಾರದಲ್ಲಿ, ಆರೋಪಿ ಬಾರ್ ಒಳಗಡೆ ಪ್ರವೇಶಿಸುತ್ತಿದ್ದಂತೆ ಸೆರೆ ಹಿಡಿದು ಬಂಧಿಸಿದ್ದಾರೆ.


ಯುವತಿ ಠಾಣೆಯಲ್ಲಿ ದೂರು ದಾಖಲಿಸುತ್ತಿದ್ದ ಸಂದರ್ಭದಲ್ಲೇ ಆರೋಪಿಯನ್ನು ಸೆರೆ ಹಿಡಿದ ಪೊಲೀಸರ ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗಿದೆ.
ಕಾರ್ಯಾಚರಣೆಯಲ್ಲಿ ಎಸಿಪಿ ರಂಜಿತ್ ನೇತೃತ್ವದಲ್ಲಿ ಉಳ್ಳಾಲ ಠಾಣಾಧಿಕಾರಿ ಸಂದೀಪ್, ಪಿಎಸ್ ಐ ಗಳಾದ ಶಿವಕುಮಾರ್, ಪ್ರದೀಪ್ ಹಾಗೂ ಕ್ರೈಂ ತಂಡ ಮತ್ತು ಕೊಣಾಜೆ ಠಾಣೆಯ ಪಿಎಸ್ ಐ ಶರಣಪ್ಪ ಭಂಡಾರಿ ನೇತೃತ್ವದ ಕ್ರೈಂ ತಂಡ ಭಾಗವಹಿಸಿತ್ತು.
ಇದನ್ನೂ ಓದಿ: ಕುಂಪಲ ; ಬುಲೆಟ್ ನಲ್ಲಿ ಬಂದ ಯುವಕನಿಂದ ಯುವತಿಯ ಚಿನ್ನದ ಸರಗಳ್ಳತನ !
            
            
            The Ullal and Konje police have succeeded in arresting a chain snatcher in just three hours of him committing crime at Kumpala. The arrested has been identified as Sulthan (28) from Kannur.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 08:37 pm
                        
            
                  
                Mangalore Correspondent    
            
                    
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm