ಬ್ರೇಕಿಂಗ್ ನ್ಯೂಸ್
07-11-20 12:38 pm Mangalore Correspondent ಕ್ರೈಂ
ಮಂಗಳೂರು, ನವೆಂಬರ್ 07: ಕಿರುಕುಳ ಪ್ರಕರಣದಲ್ಲಿ ದೂರು ಕೊಡಲು ಹೋಗಿದ್ದ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆಯೇ ಬಜ್ಪೆ ಠಾಣೆಯ ಪೊಲೀಸರು ಬಾಸುಂಡೆ ಬರುವಂತೆ ಹೊಡೆದು ಹಲ್ಲೆಗೈದಿರುವ ಆರೋಪ ಕೇಳಿಬಂದಿದ್ದು, ಮೂವರು ಪೊಲೀಸ್ ಪೇದೆಗಳ ವಿರುದ್ಧ ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಮಂಗಳೂರು ಹೊರವಲಯದ ಗಂಜಿಮಠದ ಪರಿಸರದ ಪಿಯುಸಿ ವಿದ್ಯಾರ್ಥಿನಿ ಹಲ್ಲೆಗೊಳಗಾದ ಯುವತಿಯಾಗಿದ್ದು, ಕೈ, ಕಾಲಿಗೆ ತೀವ್ರ ಗಾಯಗೊಂಡು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿದ್ಯಾರ್ಥಿನಿಗೆ ಎಡಪದವು ಬಳಿಯ ಇರುವೈಲು ನಿವಾಸಿ ಶ್ರೀಕಾಂತ್ ನಾಗೇಶ್ ಎಂಬ ಯುವಕನ ಜೊತೆಗೆ ಫೇಸ್ಬುಕ್ ನಲ್ಲಿ ಪರಿಚಯ ಆಗಿತ್ತು ಎನ್ನಲಾಗುತ್ತಿದೆ. ಈ ಬಗ್ಗೆ ಪರಿಚಯ ಪ್ರೇಮಕ್ಕೆ ತಿರುಗಿ, ಯುವಕ ನಾಗೇಶ್ ಯುವತಿಯ ಮನೆಗೆ ಬಂದು ಕಿರುಕುಳ ನೀಡಿದ್ದಾನೆ. ಮದುವೆ ಮಾಡಿಕೊಡುವಂತೆ ಒತ್ತಾಯ ಮಾಡಿದ್ದು, ಯುವತಿ ಅಪ್ರಾಪ್ತಳಾಗಿದ್ದರಿಂದ ಹೆತ್ತವರು ನಿರಾಕರಿಸಿದ್ದರು ಎನ್ನಲಾಗಿದೆ.
ಈ ನಡುವೆ, ಬೇರೆ ಯುವಕರನ್ನು ಕಟ್ಟಿಕೊಂಡು ಯುವತಿಯ ಮನೆಗೆ ಬಂದಿದ್ದ ಯುವಕ ನಾಗೇಶ್, ಮದುವೆ ಮಾಡಿಕೊಡದಿದ್ದರೆ ನಿಮ್ಮ ಮನೆಯನ್ನು ಧ್ವಂಸ ಮಾಡುತ್ತೇನೆಂದು ಬೆದರಿಕೆ ಹಾಕಿದ್ದಾನೆ ಎಂದು ದೂರಲಾಗಿದ್ದು ಯುವತಿಯ ತಂದೆ ಈ ಬಗ್ಗೆ ಬಜ್ಪೆ ಠಾಣೆಗೆ ದೂರು ನೀಡಿದ್ದರು. ಆದರೆ, ನಾಗೇಶ್ ಮರುದಿನ ಬಜ್ಪೆ ಠಾಣೆಗೆ ವಕೀಲರ ಜೊತೆ ತೆರಳಿದ್ದಾನೆ. ಇದರಿಂದ ಯು ಟರ್ನ್ ಹೊಡೆದ ಬಜ್ಪೆ ಪೊಲೀಸರು ಯುವತಿಯನ್ನು ಕರೆಸಿ ಬಾಸುಂಡೆ ಬರುವಂತೆ ಹೊಡೆದಿದ್ದಾರೆ ಎಂದು ದೂರಲಾಗಿದ್ದು, ಈ ಬಗ್ಗೆ ಯುವತಿಯ ತಂದೆ ಜೆರಾಲ್ಡ್ ಮ್ಯಾಕ್ಸಿಂ ಪಿಂಟೋ ಪಾಂಡೇಶ್ವರದ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.




ಅದರಂತೆ, ಮಹಿಳಾ ಠಾಣೆಯಲ್ಲಿ ಬಜ್ಪೆ ಠಾಣೆಯ ಇಬ್ಬರು ಮಹಿಳಾ ಪೇದೆ ಸೇರಿದಂತೆ ಮೂವರು ಪೊಲೀಸರ ವಿರುದ್ಧ ಪ್ರಕರಣ ದಾಖಲಾಗಿದೆ. ಅಲ್ಲದೆ, ಮಂಗಳೂರು ಕೆಥೋಲಿಕ್ ಸಭಾ ಮೂಲಕ ಮಂಗಳೂರು ಪೊಲೀಸ್ ಕಮಿಷನರ್ ಗೆ ದೂರು ನೀಡಲಾಗಿದ್ದು, ತಪ್ಪಿತಸ್ಥ ಪೊಲೀಸರನ್ನು ಸಸ್ಪೆಂಡ್ ಮಾಡುವಂತೆ ಒತ್ತಾಯಿಸಲಾಗಿದೆ.
Video Report:
The Bajpe Police have beaten up a girl mercilessly inside the police station who had come to give a complaint of torture by an unknown Boy. An FIR has been registered against 3 police personals of Bajpe station, Mangalore.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm